ಚಿಕ್ಕಮಗಳೂರು | ಕಾಂಗ್ರೆಸ್​ ಶಾಸಕರ ವಿರುದ್ಧ ವಾಟ್ಸಪ್‌​ ಸ್ಟೇಟಸ್; ಮಹಿಳಾ ಪೇದೆ ಅಮಾನತು

Date:

ಚಿಕ್ಕಮಗಳೂರು ಜಿಲ್ಲೆ ಕಡೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ಕೆ ಎಸ್ ಆನಂದ್​ ವಿರುದ್ಧ ವಾಟ್ಸಪ್‌​ ಸ್ಟೇಟಸ್​ ಹಾಕಿ ಆಕ್ರೋಶ ಹೊರಹಾಕಿದ ಮಹಿಳಾ ಪೇದೆ(ಕಾನ್ಸ್​ಟೆಬಲ್)ಯೊಬ್ಬರನ್ನು ಅಮಾನತು ಮಾಡಲಾಡಿದೆ.

“ಕಡೂರು ಶಾಸಕರಿಗೆ ನನ್ನ ಧಿಕ್ಕಾರವಿರಲಿ. ನನಗೆ ಏನಾದರು ತೊಂದರೆ ಆದರೆ ಅದಕ್ಕೆ ಶಾಸಕರೇ ಕಾರಣ” ಎಂದು ಮಹಿಳಾ ಪೇದೆ ಲತಾ ಎಂಬುವರು ವಾಟ್ಸಪ್ ಸ್ಟೇಟಸ್ ಹಾಕಿದ್ದರು. ಇದಕ್ಕೆ ಸಂಬಂಧಿಸಿದ ಸ್ಕ್ರೀನ್​ಶಾಟ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ ಬೆನ್ನಲ್ಲೇ ಅವರನ್ನು ಅಮಾನತು ಮಾಡಲಾಗಿದೆ.

ಲತಾ ಅವರು ಕಡೂರು ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದರು. ಅವರನ್ನು ಕಡೂರಿನಿಂದ ತರೀಕೆರೆಗೆ ವರ್ಗಾವಣೆ ಮಾಡಲಾಗಿದೆ. ಇದರಿಂದ ಅಸಮಾಧಾನಗೊಂಡಿರುವ ಲತಾ, ಇದು ದ್ವೇಷದ ವರ್ಗಾವಣೆ ಎಂದು ಶಾಸಕರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೆ, ವರ್ಗಾವಣೆ ವಿರೋಧಿಸಿ ಸಬ್​ ಇನ್ಸ್​ಪೆಕ್ಟರ್ ಜತೆಯೂ ಲತಾ ಮಾತಿನ ಚಕಮಕಿ ನಡೆಸಿದ್ದಾರೆಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬಿಜೆಪಿ ಒಳಜಗಳ | ಪ್ರಭು ಚೌಹಾಣ್ ವಿರುದ್ಧ 100 ಕೋಟಿ ಮಾನಹಾನಿ ಕೇಸ್ : ಸಚಿವ ಭಗವಂತ ಖೂಬಾ

ಲತಾ ಅವರ ಈ ವರ್ತನೆ ಚಿಕ್ಕಮಗಳೂರು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಉಮಾ ಪ್ರಶಾಂತ್​ ಅವರ ಗಮನಕ್ಕೆ ಬಂದಿದ್ದು, ಮಹಿಳಾ ಪೊಲೀಸ್‌ ಪೇದೆ ಲತಾ ಅವರನ್ನು ಅಮಾನತು ಮಾಡಿ ಎಸ್‌ಪಿ ಆದೇಶ ಹೊರಡಿಸಿದ್ದಾರೆ.

“ಚುನಾವಣೆ ಸಂದರ್ಭದಲ್ಲಿ ಹೆಲ್ಮೆಟ್​ ಧರಿಸಿದೇ ಓಡಾದಿದ್ದಕ್ಕೆ ಕಾಂಗ್ರೆಸ್​ ಕಾರ್ಯಕರ್ತರಿಗೆ ಲತಾ ಅವರು ದಂಡ ವಿಧಿಸಿದ್ದರು. ಇದೇ ವಿಚಾರವಾಗಿ ಆನಂದ್​ ಅವರು ಪೇದೆ ಜತೆ ಮಾತಿನ ಚಕಮಕಿ ನಡೆಸಿದ್ದ ವಿಡಿಯೋ ಈ ಹಿಂದೆ ವೈರಲ್​ ಆಗಿತ್ತು. ಇದೇ ದ್ವೇಷಕ್ಕೆ ವರ್ಗಾವಣೆ ಮಾಡಿಸಿದ್ದಾರೆ” ಎಂದು ಹೇಳಲಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...