ಚಿಕ್ಕನಾಯಕನಹಳ್ಳಿ | ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ‘ಸಂಸತ್‌’ ಚುನಾವಣೆ; ನೂತನ ಮಂತ್ರಿಮಂಡಲ ರಚನೆ

Date:

ಚಿಕ್ಕನಾಯಕನಹಳ್ಳಿ ತಾಲೂಕಿನ ಮೇಲನಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 2024-25ನೇ ಸಾಲಿನ ಶಾಲಾ ಸಂಸತ್ ಚುನಾವಣೆಯು ಇತ್ತೀಚೆಗೆ ನಡೆಸಲಾಯಿತು.

ಶಾಲಾ ವಿದ್ಯಾರ್ಥಿಗಳ ಈ ಸಂಸತ್ ಚುನಾವಣೆಯು ದೇಶದ ಲೋಕಸಭಾ ಚುನಾವಣೆಯ ರೀತಿ ನೀತಿಗಳ ಮಾದರಿಯಲ್ಲೇ ಶಾಲಾ ಸಂಸತ್ ಚುನಾವಣೆಯು ನಡೆಯಿತು. ಮಧ್ಯಾಹ್ನದ ಹೊತ್ತಿಗೆ ಫಲಿತಾಂಶ ಘೋಷಣೆಯೂ ಆಯಿತು. ನಂತರ ಪ್ರಮಾಣವಚನ, ಪದಗ್ರಹಣ ಕಾರ್ಯಕ್ರಮಗಳೂ ನಡೆದವು.

ಈ ಸಂದರ್ಭದಲ್ಲಿ ಶಾಲಾ ಸಂಸತ್ ಕುರಿತು ಮಾತನಾಡಿದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಕೆ.ಎನ್ ಸತೀಶ್, “ಶಾಲಾ ಸಂಸತ್ ಚುನಾವಣೆಯ ಮೂಲಕ ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಆಶಯಗಳನ್ನು ಬಿತ್ತುವುದು ಇದರ ಮುಖ್ಯ ಉದ್ದೇಶ. ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುವ ಹಾಗೂ ವಿದ್ಯಾರ್ಥಿಗಳ ನಾಯಕತ್ವದಲ್ಲೇ ಶಾಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ನಡೆಸುವುದೇ ಶಾಲಾ ಸಂಸತ್ತಿನ ಮೂಲ ಆಶಯ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಲಾ ಸಂಸತ್ತಿನ ನೂತನ ಮಂತ್ರಿಮಂಡಲದಲ್ಲಿ ರಾಷ್ಟ್ರಪತಿಯಾಗಿ ಚಿನ್ಮಯಿ, ಪ್ರಧಾನ ಮಂತ್ರಿಯಾಗಿ ಚೇತನ್ ಎಮ್ ಡಿ, ಶಿಕ್ಷಣ ಮಂತ್ರಿಯಾಗಿ ಚೇತನ್, ಆರೋಗ್ಯ ಮಂತ್ರಿಯಾಗಿ ಐಶ್ವರ್ಯಾ, ಕ್ರೀಡಾ ಮಂತ್ರಿಯಾಗಿ ಹರ್ಷವರ್ಧನ್, ಸಾ‌ಹಿತ್ಯ ಮತ್ತು ಸಾಂಸ್ಕೃತಿಕ ಮಂತ್ರಿಯಾಗಿ ಚಿಂತನ, ಮಕ್ಕಳ ಕಲ್ಯಾಣ ಮಂತ್ರಿಯಾಗಿ ರಶ್ಮಿ ಕೆ ಆರ್, ಆಹಾರ ಖಾತೆ ಮಂತ್ರಿಯಾಗಿ ನಾಗವೇಣಿ, ಗೃಹ ಮಂತ್ರಿಯಾಗಿ ಶರತ್, ತೋಟಗಾರಿಕೆ ಮತ್ತು ನೀರಾವರಿ ಮಂತ್ರಿಯಾಗಿ ಶ‌ಹಬಾಝ್ ಆಯ್ಕೆಯಾದರು.

ಶಾಲಾ ಸಂಸತ್ ಚುನಾವಣೆಯಲ್ಲಿ ಚುನಾವಣಾಧಿಕಾರಿಗಳಾಗಿ ಪ್ರಾಧ್ಯಾಪಕರಾದ ಭಗತ್ ಸಿಂಗ್ ಹಾಗೂ ಕೆ.ಟಿ. ದಾದಾ ಹಯಾತ್ ಕಾರ್ಯನಿರ್ವಹಿಸಿದರು. ಚುನಾವಣೆಯ ಸಂಭ್ರಮದಲ್ಲಿ ಶಾಲಾ ಸಿಬ್ಬಂದಿಗಳಾದ ನಾಗರಾಜ್ ‌ಸಿ, ಸತೀಶ್ ಟಿ.ಆರ್, ನಾರಾಯಣಪ್ಪ ಎನ್, ಭಾಗ್ಯಮ್ಮ, ಮಹಾದೇವಿ, ಪಲ್ಲವಿ, ಲಿಂಗರಾಜು, ಹರೀಶ್ ಭಾಗಿಯಾಗಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...