ಚಿಕ್ಕನಾಯಕನಹಳ್ಳಿ | 18 ದಿನ ಪೂರೈಸಿದ ರೈತರ ಅಹೋರಾತ್ರಿ ಧರಣಿ

Date:

ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರಿನಲ್ಲಿ ಪಟ್ಟಣ ಪಂಚಾಯಿತಿ ಅಸ್ತಿತ್ವದಲ್ಲಿದೆಯೇ ಎಂಬ ಪ್ರಶ್ನೆಯನ್ನು ಕೇಳಬೇಕಾಗಿದೆ ಎಂದು ಬೋರನಕಣಿವೆ ಸುವರ್ಣ ವಿದ್ಯಾ ಚೇತನದ ಅಧ್ಯಕ್ಷ ರಾಮಕೃಷ್ಣಪ್ಪ ಸಂಶಯ ವ್ಯಕ್ತಪಡಿಸಿದರು. 

           ಹುಳಿಯಾರು ಪಟ್ಟಣ ಪಂಚಾಯಿತಿ ಕಚೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘದ ಹೊಸಹಳ್ಳಿ ಚಂದ್ರಣ್ಣ ಬಣದಿಂದ ಸಂತೆ ಮೈದಾನದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಹಾಗೂ ಕಸವಿಲೇವಾರಿ ಘಟಕಕ್ಕೆ ಭೂಮಿ ನೀಡಲು ಒತ್ತಾಯಿಸಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಭಾನುವಾರ 18 ನೇ ದಿನ ಪೂರೈಸಿದೆ. ಈ ದಿನ ರೈತರೊಂದಿಗೆ ಬೋರನಕಣಿವೆ ಸುವರ್ಣ ವಿದ್ಯಾ ಚೇತನದಿಂದ ಧರಣಿಯಲ್ಲಿ ಕುಳಿತು ಬೆಂಬಲ ಸೂಚಿಸಿ ಮಾನಾಡಿದರು.

            ಕಸ ವಿಲೇವಾರಿ ಮತ್ತು ಸಂತೆ ಸ್ಥಳಾಂತರದ ಬಗ್ಗೆ ರಾಜ್ಯ ರೈತ ಸಂಘದ ಹೊಸಳ್ಳಿ ಚಂದ್ರಣ್ಣ ಬಣದ ರೈತರ ಧರಣಿ 18 ನೇ ದಿನಕ್ಕೆ ಕಾಲಿಟ್ಟರೂ, ಇಲ್ಲಿಗೆ ಜನರಿಂದ ಆಯ್ಕೆಯಾದ ಅಧ್ಯಕ್ಷರಾಗಲಿ ಉಪಾಧ್ಯಕ್ಷರಾಗಲಿ ಬಂದು ಸಮಸ್ಯೆ ಬಗೆ ಹರಿಸಲು ಪ್ರಯತ್ನ ಪಟ್ಟಿಲ್ಲ. ಪಟ್ಟಣ ಪಂಚಾಯತಿ ಸದಸ್ಯರು ಈ ಕಡೆ ತಲೆ ಹಾಕಿಲ್ಲ. ಚಳಿ ಮಳೆ ಬಿಸಿಲನ್ನು ಸಹಿಸಿಕೊಂಡು ರೈತರು ನಡೆಸುತ್ತಿರುವ ಆಹೋ ರಾತ್ರಿ ನಡೆಯುತ್ತಿರುವ ಧರಣಿÀ ಇವರ ಗಮನಕ್ಕೆ ಬಂದಿಲ್ಲವೇ ಎಂದು ಪ್ರಶ್ನಿಸಬೇಕಾಗಿದೆ, ಅಧಿಕಾರದ ಸವಿಯನ್ನು ಉಂಡ ಇವರಿಗೆ ಸಮಸ್ಯೆಯನ್ನು ಬಗೆಹರಿಸಬೇಕಾದ ನೈತಿಕ ಜವಾಬ್ದಾರಿ ಇಲ್ಲವೇ? ಈ ಪ್ರಶ್ನೆಗಳಿಗೆ ಮುಷ್ಕರ ನಡೆಯುತ್ತಿರುವ ಸ್ಥಳಕ್ಕೆ ಬಂದು ಉತ್ತರಿಸಬೇಕೆಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

           ವಾರದ ಸಂತೆಯಲ್ಲಿ ಸುಂಕ ವಸೂಲಿ ಮಾಡುತ್ತಿರುವ ಹಣ ಎಲ್ಲಿ ಹೋಯಿತು ಎಂದು ಅಲೆಮಾರಿ ಸಂಘಟನೆಯ ನಾಯಕಿ ಲಕ್ಷ್ಮೀ ಪ್ರಶ್ನಿಸಿದರು. ಅಧಿಕಾರಿಗಳು ಬಂದು ಸಮಸ್ಯೆಯನ್ನು ಬಗೆಹರಿಸುತ್ತೇವೆ ಎಂದು ಹೇಳುತ್ತಲೇ ದಿನವನ್ನು ದೂಡುತ್ತಿದ್ದಾರೆ ಎಂದು ರೈತ ನಾಯಕ ಮಲ್ಲೇಶಪ್ಪ ಬೇಸರಗೊಂಡು ಆಪಾದಿಸಿದರು. ಮಹಿಳಾ ಸಂಘಟನೆ ಅಧ್ಯಕ್ಷೆ ಶಿವಲಿಂಗಮ್ಮ, ಗೃಹಿಣಿ ಲತಾ ಮಣಿ ಮಾತನಾಡಿದರು. ನಿರ್ಗತಿಕರ ಮಹಿಳೆಯರ ಸಂಘದ ಅಧ್ಯಕ್ಷೆ ಹೋರಾಟಗಾರ್ತಿ ಜಯಲಕ್ಷ್ಮಿ ಸಮಸ್ಯೆ ಬಗೆ ಹರಿಯುವವರೆಗೂ ಮುಷ್ಕರ ನಿಲ್ಲುವುದಿಲ್ಲ ಎಂದು ಎಚ್ಚರಿಸಿದರು.

          ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ, ರೈತ ಸಂಘದ ತಾಲೂಕು ಕಾರ್ಯಾಧ್ಯಕ್ಷ ಕರಿಯಪ್ಪ, ಟಿ.ಎಸ್.ಪ್ರಶಾಂತ್, ಮಲ್ಲೇಶಣ್ಣ, ನೀರಾ ಈರಣ್ಣ, ಓಂಕಾರಮ್ಮ, ಟಿ.ಎನ್.ಶಿವಣ್ಣ, ಎನ್.ಜಿ.ರೇವಣ್ಣ, ಎಂ.ಶ್ರೀನಿವಾಸ್, ಎಚ್.ಪಿ,ಮಂಜುನಾಥ್, ಪುಟ್ಟಯ್ಯ, ಹೂವಿನತಿಮ್ಮಣ್ಣ, ಪೆದ್ದಾಬೋವಿ, ದುರ್ಗಾರಾಜು, ಹನುಮಂತರಾಜ್ ಅರಸ್, ಮಂಜುನಾಥ್, ಶ್ರೀನಿವಾಸ್, ಶ್ರೀಧರ್, ಗಂಗಾಧರಯ್ಯ, ವಸಂತಪ್ಪ, ಪುಷ್ಪಭಾಯಿ, ಮಹಿಳಾ ಸಂಘಟನೆಯ ಅಂಜಿನಮ್ಮ, ಸುಂದರಮ್ಮ ಮತ್ತಿತರರು ಧರಣಿಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...