ಚಿಕ್ಕನಾಯಕನಹಳ್ಳಿ | ಸರ್ವ ರೋಗಕ್ಕೂ ಸಹಜ ಕೃಷಿ ಮದ್ದು: ಮಲ್ಲಿಕಾರ್ಜುನ ಭಟ್ರಳ್ಳಿ

Date:

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಶೆಟ್ಟಿಕೆರೆ, ವಡೇರಹಳ್ಳಿ, ದುಗಡಿಹಳ್ಳಿ, ಗೋಡೆಕೆರೆ, ಮೇಲನಹಳ್ಳಿ ಗ್ರಾಮಗಳ ತೆಂಗು ಬೆಳೆಗಾರ ರೈತರ ತೋಟಗಳಲ್ಲಿ ಸಹಜ ಕೃಷಿ ಅನುಷ್ಠಾನ ತರಬೇತಿ-ಪ್ರಾತ್ಯಕ್ಷಿಕೆ ನಡೆಸಲಾಯಿತು.

ಹೊನ್ನೇಬಾಗಿ ಗ್ರಾಮ ಪಂಚಾಯತಿಯ ಮೇಲನಹಳ್ಳಿ ಗ್ರಾಮದ ಹರೀಶ್ ಮಲ್ಲಿಕಾರ್ಜುನಯ್ಯನವರ ತೆಂಗಿನ ತೋಟದಲ್ಲಿ ಸೇರಿದ್ದ ರೈತರಿಗಾಗಿ ರೈತ ಮಿತ್ರರಾದ ಮಲ್ಲಿಕಾರ್ಜುನ ಭಟ್ರಳ್ಳಿ ಮತ್ತು ತರಬೇನಹಳ್ಳಿ ಷಡಾಕ್ಷರಿ ಸಹಜ ಕೃಷಿ ಅನುಷ್ಠಾನದ ತರಬೇತಿ-ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಸುತ್ತಮುತ್ತಲಿನ ಸುಮಾರು ಇಪ್ಪತ್ತು ಮಂದಿ ರೈತರು ಈ ತರಬೇತಿ-ಪ್ರಾತ್ಯಕ್ಷಿಕೆಯಲ್ಲಿ ಪಾಲ್ಗೊಂಡಿದ್ದರು.

ಕೃಷಿ 1 1

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರೋಗ-ನಿರೋಧಕ ಮತ್ತು ಹೆಚ್ಚಿನ ಇಳುವರಿ ನೀಡಬಲ್ಲ ಈ ಮಾದರಿಯ ಸಹಜಕೃಷಿಯೇ ಸರ್ವ ರೋಗಕ್ಕೂ ಮದ್ದು ಎಂಬುದಕ್ಕೆ ತಾಲೂಕಿನ ರೈತರೇ ಮೊದಲ ಸಾಕ್ಷಿಯಾಗಲಿದ್ದಾರೆ” ಎಂದು ಮಲ್ಲಿಕಾರ್ಜುನ ಭಟ್ರಳ್ಳಿ ವಿವರಿಸಿದರು.

ಕೃಷಿ 2 1

“ಸಹಜ ಕೃಷಿ ಅನುಷ್ಠಾನ ಯೋಜನೆಯ ಮಾದರಿಯಲ್ಲಿ ತೆಂಗು ಬೆಳೆಯುವುದರಿಂದ ಮುಂದಿನ 4 ವರ್ಷಗಳಲ್ಲಿ ತಾಲೂಕಿನ ತೆಂಗು ತೋಟ ಮತ್ತು ತೆಂಗು ಬೆಳೆಗಾರ ಭವಿಷ್ಯದ ಕೃಷಿಗೆ ಆಮೂಲಾಗ್ರ ಬದಲಾವಣೆಯನ್ನು ತರಬಹುದು. ದಿನನಿತ್ಯ ಸುಸ್ತು ಮತ್ತು ಸೋಲನ್ನೇ ಉಂಡಿರುವ ರೈತ ಸಮಾಜ ತಮ್ಮ ತೋಟಗಳಲ್ಲಿ ಸಹಜಕೃಷಿ ಅನುಷ್ಠಾನ ಮಾದರಿಯಲ್ಲಿ ಅತ್ಯುತ್ತಮವಾದ ಬೆಳೆ ತೆಗೆಯಲು ಸಾಧ್ಯವಿದೆ” ಎಂದು ರೈತರಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ರೈತ ಹರೀಶ್ ಮಲ್ಲಿಕಾರ್ಜುನಯ್ಯ, ನವೀನ್, ಬೆಟ್ಟಪ್ಪ, ತರಬೇನಳ್ಳಿ ಷಡಕ್ಷರಿ ಹಾಗೂ ರೈತ ಮಹಿಳೆಯರು ಉಪಸ್ಥಿತರಿದ್ದರು.

ವರದಿ: ಸಂಚಲನ, ಚಿಕ್ಕನಾಯಕನ ಸೀಮೆಯಿಂದ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...