ಚಿಕ್ಕನಾಯಕನಹಳ್ಳಿ | ಮನುವಾದ’ದಿಂದ ಬಿಡುಗಡೆ ತಂದುಕೊಟ್ಟ ಸಂವಿಧಾನ ; ಸಿ ಡಿ ಚಂದ್ರಶೇಖರ್

Date:

ಚಿಕ್ಕನಾಯಕನಹಳ್ಳಿ ಪಟ್ಟಣದ ತೀ.ನಂ.ಶ್ರೀ ಭವನದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಮಂಗಳವಾರ ಬೆಳಗ್ಗೆ 75’ನೆಯ ಸಂವಿಧಾನ ಸಮರ್ಪಣಾ ದಿನಾಚರಣೆಯನ್ನು ಆಚರಿಸಲಾಯಿತು.

ಸಂವಿಧಾನ ಗ್ರಂಥ ಹಾಗೂ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ನಂತರ ತಹಸೀಲ್ದಾರ್ ಕೆ ಪುರಂದರ್’ರವರು,‌ ಸಭಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಂವಿಧಾನ ಪೀಠಿಕೆಯ ಪ್ರತಿಜ್ಞಾವಿಧಿ ಬೋಧಿಸಿದರು.

ಸಂವಿಧಾನದ ಬಗ್ಗೆ ಉಪನ್ಯಾಸ ನೀಡಿದ ಅಧ್ಯಾಪಕ ಪ್ರಕಾಶ್, ಸಂವಿಧಾನ ರಚನೆಯಾದ ಸಂದರ್ಭ ಹಾಗೂ ಅದರ ರಚನೆಯಲ್ಲಿ ಸಮೀಕ್ಷಿಸಲಾದ ಮುಖ್ಯ ಸಂಗತಿಗಳು, ಸಮಕಾಲೀನ ಪ್ರಸ್ತುತೆ, ಮೂಲಭೂತ ಹಕ್ಕು ಮತ್ತು ಧರ್ಮನಿರಪೇಕ್ಷ ಆದ್ಯತೆ ತರಹದ‌ ಬಹಳಷ್ಟು ವಿಚಾರಗಳನ್ನು ವಿದ್ಯಾರ್ಥಿಗಳಿಗೆ ಬಿಡಿಸಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1000704102

ನಂತರ ಮಾತನಾಡಿದ ಮಾದಿಗ ದಂಡೋರ ಚಂದ್ರು, ಸಂವಿಧಾನ ಸಮರ್ಪಿಸಿಕೊಂಡು ಎಪ್ಪತ್ತೈದು ವರ್ಷ ಕಳೆದರೂ ಸಂವಿಧಾನದ ಆಶಯಗಳನ್ನು ಈಡೇರಿಸಿಕೊಳ್ಳುವಲ್ಲಿ ಸಮಾಜ ವಿಫಲವಾಗಿದೆ. ಸಮಾಜದಲ್ಲಿ ಇಂದಿಗೂ ಮೇಲು-ಕೀಳು, ತಾರತಮ್ಯ, ಸ್ವಜನ ಪಕ್ಷಪಾತ, ಅಸಮಾನತೆ ನಿರ್ಮೂಲನೆಯಾಗಿಲ್ಲ. ಅವು ಈಗಲೂ ನಮ್ಮ ಸುತ್ತ ತಾಂಡವವಾಡುತ್ತಿವೆ. ಇಂದಿನ ವಿದ್ಯಾರ್ಥಿಗಳೇ ಮುಂದಿನ ಪ್ರಜೆಗಳಾಗುವ ಕಾರಣದಿಂದ ಸಂವಿಧಾನದ ಆಶಯಗಳು ವಾಸ್ತವವಾಗಿ ಸಮಾಜದಲ್ಲಿ ಜಾರಿಯಾಗುವಂತೆ ನೋಡಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಮನುವಾದ’ದಿಂದ ಬಿಡುಗಡೆ ತಂದುಕೊಟ್ಟ ಸಂವಿಧಾನ ::

ಸರ್ಕಾರದ ಗ್ಯಾರಂಟಿಭಾಗ್ಯ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ ಡಿ ಚಂದ್ರಶೇಖರ್ ಮಾತನಾಡಿ, ಡಾ.ಅಂಬೇಡ್ಕರರು ರಚಿಸಿಕೊಟ್ಟ ಸಂವಿಧಾನದ ಕಾರಣದಿಂದ ಮನುವಾದದ ಚಾತುರ್ವರ್ಣ ವ್ಯವಸ್ಥೆಯ ದಾಸ್ಯಕ್ಕೆ ಈಡಾಗಿದ್ದ ನಮ್ಮ ವಂಚಿತ, ಅಲಕ್ಷಿತ, ಆದಿವಾಸಿ, ದಲಿತ-ಶೂದ್ರ ವರ್ಗಗಳು ಬಿಡುಗಡೆಯ ಭಾಗ್ಯ ಪಡೆದುಕೊಂಡವು. ಸಂವಿಧಾನ ಒಂದಿಲ್ಲದಿದ್ದರೆ, ಈಯೆಲ್ಲ ದಲಿತ-ಶೂದ್ರ ವರ್ಗಗಳು ಶಾಶ್ವತವಾಗಿ ಮನುವಾದದ ದಾಸ್ಯದಡಿಯಲ್ಲೇ ಇರಬೇಕಾಗುತ್ತಿತ್ತು. ಸಂವಿಧಾನ ಯಾಕೆ ಬೇಕು ಎಂದು ಕೇಳಿಕೊಂಡರೆ, ರಾಜಪ್ರಭುತ್ವ ಅಳಿದು ಪ್ರಜೆಗಳೇ ರಾಜ್ಯ ಆಳುವ ಪ್ರಜಾಪ್ರಭುತ್ವ ಜಾರಿಯಾಗುವುದಕ್ಕಾಗಿ ಬೇಕು. ಪುರೋಹಿತಶಾಹಿ ದಾಸ್ಯದಿಂದ ವಿಮೋಚನೆ ಪಡೆದು ಸಮಾನತೆಯ ಕಡೆಗೆ ವ್ಯವಸ್ಥೆಯನ್ನು ಬದಲಾಯಿಸುವುದಕ್ಕಾಗಿ ಬೇಕು. ಸರ್ವ ಜನಾಂಗದ ಶಾಂತಿಯ ತೋಟ’ದಂತಿರುವ ನಾಡು-ನುಡಿ-ನೆಲದ ಜೊತೆ ಬಾಳುವ ಎಲ್ಲ ಪ್ರಜೆಗಳ ಮೂಲಭೂತ ಹಕ್ಕು ಮತ್ತು ಸ್ವಾತಂತ್ರ್ಯವನ್ನು ರಕ್ಷಿಸಲಿಕ್ಕಾಗಿ ಬೇಕು. ಪ್ರಜೆಗಳ ಅಭಿವ್ಯಕ್ತಿಯ ಹಕ್ಕುಗಳ ಸಂರಕ್ಷಣೆಗಾಗಿ, ನ್ಯಾಯಾಂಗದ ಹಕ್ಕುಗಳ ಸಂರಕ್ಷಣೆಗಾಗಿ ಮತ್ತು ಯಾವುದೇ ರಾಷ್ಟ್ರ ಅಥವಾ ರಾಜ್ಯವೊಂದರ ಸುವ್ಯವಸ್ಥಿತ ಆಡಳಿತ ನಡೆಸಲು ಸಂವಿಧಾನ ಬೇಕು ಎಂದು ಅವರು ಹೇಳಿದರು.

1000704100

ಚಾತುರ್ವರ್ಣ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಿ, ಎಲ್ಲರಿಗೂ ಲಭಿಸುವ ಸಮಾನ ಅಧಿಕಾರದ ಅವಕಾಶಗಳಿರುವ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಜಾರಿ ಮಾಡಿಕೊಂಡು ಜನಸಮೂಹಗಳನ್ನು ಮುನ್ನಡೆಸಲು ಸಂವಿಧಾನ ಬೇಕು. ಇಲ್ಲದಿದ್ದರೆ, ಶಿಕ್ಷಣ ವಂಚಿತರಾಗಿ, ಭೂ-ರಹಿತರಾಗಿ ಎಲ್ಲ ಬಹುಜನ ಸಮುದಾಯಗಳು ಬದುಕಿರಬೇಕಾಗಿತ್ತು. ಈ ಸಂದರ್ಭದಲ್ಲಿ ಅವರು, ಏಕಲವ್ಯ-ದ್ರೋಣಾಚಾರ್ಯರ ಪ್ರಸಂಗವನ್ನು ನೆನಪಿಸುವ ಮೂಲಕ ಸಂವಿಧಾನದ ರಕ್ಷಣೆ ಮಾಡಿಕೊಳ್ಳದಿದ್ದರೆ, ಭವಿಷ್ಯದಲ್ಲಿ ಮತ್ತೆ ಬಂದೆರಗಲಿರುವ ಮನುವಾದ ಮತ್ತು ಚಾತುರ್ವರ್ಣ ವ್ಯವಸ್ಥೆಯ ಅಪಾಯಗಳನ್ನು ವಿವರಿಸಿದರು. ಹಾಗಾಗಿ, ಸಂವಿಧಾನ ಬದಲಾವಣೆ ಮಾಡುತ್ತೇವೆ ಎನ್ನುವ ಉಪಾಯಗಾರರಿಂದ ಸಂವಿಧಾನ ರಕ್ಷಿಸಿಕೊಳ್ಳುವ ಅಗತ್ಯವಿದೆ ಎಂದು ಅವರು ಒತ್ತಿ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಸಿ ಬಿ ಸುರೇಶ್ ಬಾಬು ಮಾತನಾಡಿ, ಸಂವಿಧಾನ ರಚಿಸಿದ ಡಾ.ಅಂಬೇಡ್ಕರರ ಜೀವನ ಮತ್ತು ವಿದ್ಯಾಭ್ಯಾಸದ ಸಂದರ್ಭದಲ್ಲಿ ಶಾಹು ಮಹಾರಾಜರು ಅವರಿಗೆ ಚಾಚಿದ ಸಹಾಯಹಸ್ತದ ಕುರಿತು ಪ್ರಸ್ತಾಪಿಸಿದರು. ಸಂವಿಧಾನದ ಅಡಿಯಲ್ಲಿ ಅಧಿಕಾರದ ಅವಕಾಶಗಳನ್ನು ಪಡೆದಿರುವ ಯಾರೇ ಆದರೂ ವಿದ್ಯಾಭ್ಯಾಸಕ್ಕೆ ಮೊದಲ ಆದ್ಯತೆ ನೀಡಬೇಕು. ಮಹಾಓದುಗ ಅಂಬೇಡ್ಕರ್’ರವರು ಅವರ ವಿದ್ಯಾಭ್ಯಾಸಕ್ಕಾಗಿ ಅನುಭವಿಸಿದ ನೋವುಗಳನ್ನು ಕುರಿತು ಸೂಚ್ಯವಾಗಿ ಪ್ರಸ್ತಾಪಿಸಿದರು. ಇಷ್ಟೆಲ್ಲಾ ಆದರೂ ರಾಜಕೀಯವಾಗಿ ಸಾಮಾಜಿಕವಾಗಿ ಎಲ್ಲ ರೀತಿಯ ಹಕ್ಕು-ಸ್ವಾತಂತ್ರ್ಯವನ್ನು ಎಲ್ಲರಿಗೂ ನೀಡಿರುವಂತಹ ಸಂವಿಧಾನವನ್ನು ರಚಿಸಿದ ಮಹಾನ್ ವ್ಯಕ್ತಿ ಅವರು ಎಂದು ಅಂಬೇಡ್ಕರ್’ರವರನ್ನು ಸ್ಮರಿಸಿದರು.

1000704103

ಸಮಾಜ ಕಲ್ಯಾಣಾಧಿಕಾರಿ ಶ್ರೀಧರಮೂರ್ತಿಯವರು, ಕಾರ್ಯಕ್ರಮದ ಉಸ್ತುವಾರಿ ವಹಿಸಿಕೊಂಡು ನಿರೂಪಿಸಿದರು. ತಹಸೀಲ್ದಾರ್ ಕೆ ಪುರಂದರ್, ಆರಕ್ಷಕ ವೃತ್ತ ನಿರೀಕ್ಷಕ ಎಫ್ ಕೆ ನದಾಫ್, ಕ್ಷೇತ್ರ ಶಿಕ್ಷಣಾಧಿಕಾರಿ ಕಾಂತರಾಜು, ಮುಖಂಡ ಮಹಬೂಬ್ ಆಲಮ್, ಮುಖಂಡ ಲಿಂಗದೇವರು, ಮಾದಿಗ ದಂಡೋರದ ಚಂದ್ರಶೇಖರ್, ಮುಖಂಡ ಕೆ ಜಿ ಕೃಷ್ಣೇಗೌಡ, ಕನ್ನಡ ಸಂಘದ ಸಿ ಬಿ ರೇಣುಕಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ ಡಿ ಚಂದ್ರಶೇಖರ್, ಅಧ್ಯಾಪಕ ಪ್ರಕಾಶ್ ಸೇರಿದಂತೆ, ಸುನೀಲ್, ಇಮ್ರಾನ್, ಪಾಂಡು ಮತ್ತು ಸಮಾಜ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತ ಮಾಹಿತಿ ಕೇಂದ್ರದ ಸಿಬ್ಬಂದಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

ವರದಿ – ಸಂಚಲನ
ಚಿಕ್ಕನಾಯಕನ ಸೀಮೆಯಿಂದ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...