ಚಿಕ್ಕನಾಯನಹಳ್ಳಿ | ಕೊನೆಗೂ ಬರಕನಹಾಲ್ ಗ್ರಾಮಕ್ಕೆ ಬಂತು ಸರ್ಕಾರಿ ಬಸ್ : ಸಂಭ್ರಮದಿಂದ ಸ್ವಾಗತಿಸಿದ ಗ್ರಾಮಸ್ಥರು

Date:

ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಹೋಬಳಿ ಬರಕನಹಾಲ್ ಗ್ರಾಮಕ್ಕೆ ಸ್ವಾತಂತ್ರ್ಯ ಬಂದು 7 ದಶಕಗಳನ್ನು ಕಳೆದರು ಬಸ್ ಸಂಪರ್ಕವಿಲ್ಲದೆ ವಿದ್ಯಾರ್ಥಿಗಳಿಗೆ, ರೈತರಿಗೆ, ಕಾರ್ಮಿಕರ ಸಂಚಾರಕ್ಕೆ ತೊಂದರೆಯಾಗಿತ್ತು. ಕೊನೆಗೂ ಈ ಗ್ರಾಮಕ್ಕೆ ಸರ್ಕಾರಿ ಬಸ್ ಸೇವೆ ಆರಂಭವಾಗಿದ್ದು ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ.

ಸ್ವಾತಂತ್ರ್ಯ ಪೂರ್ವದಿಂದಲೂ, ಈ ಗ್ರಾಮಕ್ಕೆ ಸಾರಿಗೆ ಸಂಪರ್ಕವಿಲ್ಲದೆ ಇಲ್ಲಿನ ನಿವಾಸಿಗಳು ತುಂಬಾ ತೊಂದರೆ ಅನುಭವಿಸಿದ್ದರು. ಹುಳಿಯಾರು, ಚಿಕ್ಕನಾಯಕನಹಳ್ಳಿ, ತಿಪಟೂರು, ತುಮಕೂರಿಗೆ ತೆರಲು ಸಾರಿಗೆ ಸಂಪರ್ಕವಿಲ್ಲದೆ ದಶಕಗಳಿಂದ ಇಲ್ಲಿನ ಜನ ಪಟ್ಟ ಯಾತನೆ ಅಷ್ಟಿಟಲ್ಲ. ಅನಿವಾರ್ಯವಿದ್ದಾಗ ಇಲ್ಲಿ ಜನ ಆಟೋ, ಟೆಂಪೋ ಗಳ ಮೊರೆಹೋಗಿದ್ದರು. ರೋಗಿಗಳು, ವೃದ್ಧರನ್ನು ಕರೆದುಕೊಂಡು ಹೋಗಲು ಊರಿನ ಬೈಕ್ ಕಾರು, ಉಳ್ಳವರನ್ನು ಆಶ್ರಯಿಸಿದ್ದರು.

1000549055

ಹುಳಿಯಾರು ಮಾರ್ಗದ ಮೂಲಕ ಬೆಂಗಳೂರಿನಿಂದ ಹೊಸದುರ್ಗಕ್ಕೂ, ಹೊಸದುರ್ಗದಿಂದ ಬೆಂಗಳೂರಿಗೂ ನಿತ್ಯ ನೂರಾರು ಬಸ್‌ಗಳು ಓಡಾಡುತ್ತವೆ. ಅದೇ ಮಾರ್ಗದ ಹೊಸದುರ್ಗದಿಂದ ಹುಳಿಯಾರು, ಬರಕನಹಾಲ್ ತಿಮ್ಮನಹಳ್ಳಿ, ಕಂದಿಕೆರೆ, ಸಾಲಕಟ್ಟೆ ಕ್ರಾಸ್, ಚಿಕ್ಕನಾಯಕನಹಳ್ಳಿ ಹೀಗೆ ಬೆಳಿಗ್ಗೆ 7 ಗಂಟೆಗೆ ಮತ್ತು ಸಂಜೆ ಸಮಯಕ್ಕೆ ಹಿಂತಿರುಗುವಂತೆ ಅದೇ ಮಾರ್ಗವಾದ ಸಾಲಕಟ್ಟೆ ಕ್ರಾಸ್, ಕಂದಿಕೆರೆ, ತಿಮ್ಮನಹಳ್ಳಿ, ಬರಕನಹಾಲ್, ಹುಳಿಯಾರು, ಹೊಸದುರ್ಗ ಬದಲಾಯಿಸಿದರೆ ಹತ್ತಾರು ಹಳ್ಳಿಗಳ ಜನರಿಗೆ ಅನುಕೂಲ ಕಲ್ಪಿಸಿದಂತಾಗುತ್ತದೆ ತುಮಕೂರಿನ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಬಸವರಾಜು ಅವರಿಗೆ ಸಾಮಾಜಿಕ ಹೋರಾಟಗಾರ ಸಬ್ಬೆನಹಳ್ಳಿ ಶ್ರೀನಿವಾಸ್ ಹಾಗೂ ಕೆ.ಡಿ.ಪಿ ನಾಮಿನಿ ಸದಸ್ಯ ಶಂಕರ್ ಬರಕನಹಾಲ್ ಮನವಿ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1000549040

ಮನವಿಗೆ ಸ್ಪಂದಿಸಿದ ಅಧಿಕಾರಿಗಳು ತಿಪಟೂರಿನಿಂದ ಚಿಕ್ಕನಾಯಕನಹಳ್ಳಿ ಕಂದಿಕೆರೆ, ತಿಮ್ಮನಹಳ್ಳಿ, ಬರಕನಹಾಲ್ ಮಾರ್ಗವಾಗಿ ಹುಳಿಯಾರಿಗೂ ಹುಳಿಯಾರಿನಿಂದ ಬರಕನಹಾಲ್ ಮಾರ್ಗವಾಗಿ ತಿಪಟೂರಿಗೂ ಬೆಳಗ್ಗೆ ಮತ್ತು ಸಂಜೆ ನೂತನ ಮಾರ್ಗ ಆರಂಭಿಸಿದ್ದು ಗ್ರಾಮಸ್ಥರು ಹರ್ಷಕ್ಕೆ ಕಾರಣವಾಗಿದೆ.

ಗ್ರಾಮಕ್ಕೆ ಬಸ್ ಸಂಪರ್ಕ ಕಲ್ಪಿಸಲು ಶ್ರಮಿಸಿದ್ದ ಎಲ್ಲರನ್ನೂ ಗ್ರಾಮಸ್ಥರು ಅಭಿನಂಧಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಮಾರ್, ಪಂಚಾಯತ್ ಸದಸ್ಯರಾದ ಜಗದೀಶ್, ಪುಷ್ಪ ಮಂಜುನಾಥ್ ಹಾಗೂ ಎಲ್ಲಾ ಗ್ರಾಮಸ್ಥರೂ ಸಿಹಿ ವಿತರಿಸಿ ಸಂಭ್ರಮ ಆಚರಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...