ಚಿಕ್ಕಮಗಳೂರು | ಗಣೇಶ ಮೂರ್ತಿ ತರಲು ತೆರಳುತ್ತಿದ್ದ ವೇಳೆ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

Date:

ಚೌತಿ ಹಬ್ಬದ ದಿನದಂದೇ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ಅಪಘಾತ ಸಂಭವಿಸಿ, ಇಬ್ಬರು ಯುವಕರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಗಣೇಶ ಮೂರ್ತಿ ತರಲು ಹೋಗುತ್ತಿದ್ದ ವೇಳೆ ಟಾಟಾ ಏಸ್ ಪಲ್ಟಿಯಾಗಿ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ಈ ಅಪಘಾತ ಸಂಭವಿಸಿದೆ. ಇದರಿಂದಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟ ಯುವಕರನ್ನು ಶ್ರೀಧರ್ (20) ಹಾಗೂ ಧನುಷ್ (20) ಎಂದು ಗುರುತಿಸಲಾಗಿದೆ.

ಚಿಕ್ಕಮಗಳೂರು 15

ಗಣಪತಿ ತರಲು 8 ಜನ ಯುವಕರು ಹೋಗುತ್ತಿದ್ದರು. ಭೈರಾಪುರ ಗೇಟ್ ಬಳಿ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಪಲ್ಟಿಯಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಬ್ಬರು ಯುವಕರ ತಲೆಗೆ ಗಂಭೀರ ಗಾಯವಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ಯುವಕರನ್ನು ತರೀಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಹಾಗೂ ಗಾಯಾಳುಗಳೆಲ್ಲರೂ ಲಿಂಗದಹಳ್ಳಿ ನಿವಾಸಿಗಳು ಎಂದು ತಿಳಿದು ಬಂದಿದೆ. ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನು ಓದಿದ್ದೀರಾ? ಹರಿಯಾಣ ವಿಧಾನಸಭಾ ಚುನಾವಣೆ: ಕಾಂಗ್ರೆಸ್‌ಗೆ ಸೇರಿದ ದಿನವೇ ವಿನೇಶ್ ಫೋಗಟ್‌ಗೆ ಟಿಕೆಟ್

ಘಟನೆಯ ಬಗ್ಗೆ ಈ ದಿನ.ಕಾಮ್ ಜೊತೆಗೆ ಮಾತನಾಡಿದ ವಾಹನದ ಮಾಲೀಕ ಪ್ರದೀಪ್, “ಲಿಂಗದಹಳ್ಳಿಯ ಪರಿಚಯದ ಕೆಲವು ಯುವಕರು ಗಣೇಶ ಮೂರ್ತಿ ತರಲು ವಾಹನ ಬೇಕೆಂದು ರಾತ್ರಿ ಕರೆ ಮಾಡಿದ್ದರು.ಡೀಸೆಲ್ ಇಲ್ಲ, ಮನೆಗೆ ಬಂದು ತೆಗೆದುಕೊಂಡು ಹೋಗಿ ಎಂದು ತಿಳಿಸಿದ್ದೆ. ಬೆಳಗ್ಗೆ ಬಂದು ತೆಗೆದುಕೊಂಡು, ಡೀಸೆಲ್ ಹಾಕಿಸಿ, ತರೀಕೆರೆಗೆ ಹೋಗುತ್ತಿರಬೇಕಾದರೆ ಈ ಅಪಘಾತ ಆಗಿದೆ ಅಂತ ನನಗೆ ಕರೆ ಬಂತು” ಎಂದು ತಿಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...