ಚಿಕ್ಕಮಗಳೂರು | ಒಪ್ಪತ್ತಿನ ಗಂಜಿಗೂ ಪರದಾಡುತ್ತಿದೆ ಆಸೀನಾ ಕುಟುಂಬ

Date:

ಸುಮಾರು 25 ವರ್ಷಗಳಿಂದ ಅಕ್ಕಿಪಿಕ್ಕಿ ಸುಮುದಾಯದ 45 ಕುಟುಂಬಗಳ ಜನರು ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಮಲ್ಲೇನಹಳ್ಳಿ ಬಳಿಯ ಅಕ್ಕಿಪಿಕ್ಕಿ ಕಾಲೋನಿಯಲ್ಲಿ ವಾಸಿಸುತ್ತಿದ್ದಾರೆ. ಆದರೆ, ಈ ವರೆಗೆ ಆ ಕುಟುಂಬಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಲಾಗಿಲ್ಲ. ದೂರದ ಊರುಗಳಿಗೆ ಹೋಗಿ, ಕೂಲಿ ಮಾಡಿ, ಈ ಕುಟುಂಬಗಳು ಜೀವನ ನಡೆಸುತ್ತಿವೆ.

45 ಅಕ್ಕಿಪಿಕ್ಕಿ ಕುಟುಂಬಗಳಲ್ಲಿ ಆಸೀನಾ ಅವರ ಕುಟುಂಬವೂ ಒಂದು. ಆಕೆ ಗಂಡ ಅನಾರೋಗ್ಯಕ್ಕೆ ತುತ್ತಾಗಿ, ಮೂಲೆ ಸೇರಿದ್ದಾರೆ. ಅವರು ನಾಲ್ಕು ಮಕ್ಕಳು ಅಪ್ರಾಪ್ತರು. ಆರು ಮಂದಿಯ ಕುಟುಂಬವನ್ನು ಆಸೀನಾ ಅವರೇ ಸಲಹುತ್ತಿದ್ದಾರೆ. ಕಾಡು-ಮೇಡು ಅಲೆದು, ಕೂಲಿ ಮಾಡಿ, ಕುಟುಂಬವನ್ನು ದೂಡುತ್ತಿದ್ದಾರೆ. ಒಂದು ದಿನ ಕೂಲಿ ಸಿಗದಿದ್ದರೂ, ಆಹಾರಕ್ಕಾಗಿ ಪರದಾಡುವ ಪರಿಸ್ಥಿತಿ ಆ ಕುಟುಂಬಕ್ಕಿದೆ.

ತಮ್ಮ ಸಂಕಷ್ಟಗಳ ಬಗ್ಗೆ ಈದಿನ.ಕಾಮ್ ಜೊತೆ ಮಾತನಾಡಿದ ಆಸೀನಾ, “ಅಕ್ಕಿಪಿಕ್ಕಿ ಕಾಲೋನಿಯಲ್ಲಿ ಗುಡಿಸಿಲು ಕಟ್ಟಿಕೊಂಡು ಬದುಕುತ್ತಿದ್ದೆವು. ಎರಡ್ಮೂರು ವರ್ಷಗಳ ಹಿಂದೆ ಬೆಂಕಿ ತಗುಲಿ, ಗುಡಿಸಲು ಸುಟ್ಟು ಕರಕಲಾಯಿತು. ಆ ಸಮಯದಲ್ಲಿ ನಮ್ಮ ಕ್ಷೇತ್ರದಲ್ಲಿ ಸಿ.ಟಿ ರವಿ ಶಾಸಕರಾಗಿದ್ದರು. ಪರಿಹಾರಕ್ಕೆಂದು ಅವರ ಕಚೇರಿಗೆ ಹೋದರೆ, 2,000 ರೂ. ಕೊಟ್ಟು ಹೊರಗೆ ಕಳಿಸು ಅಂದಿದ್ರು. ನಮ್ಮ ಕಷ್ಟಕ್ಕೆ ಕಿಂಚಿತ್ತು ಕರುಣೆ ತೋರಲಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮನೆ1

“ಕುಟುಂಬ ನಿರ್ವಹಣೆಗೆ, ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸಲೂ ನಮಗೆ ಆಗುತ್ತಿಲ್ಲ. ಪ್ರತಿ ತಿಂಗಳಿಗೆ 3 ಕೆಜಿ ಆಕ್ಕಿ ಕೊಡುತ್ತಾರೆ. ಅದು ಸಾಕಾಗುವುದಿಲ್ಲ. ಸರ್ಕಾರದಿಂದ ರಾಜೀವ್ ಗಾಂಧಿ ಯೋಜನೆ ಅಡಿಯಲ್ಲಿ ಮನೆ ಕಟ್ಟಿಸಿಕೊಡೋದಾಗಿ ಗ್ರಾಮ ಪಂಚಾಯತಿಯವರು ಹೇಳಿದ್ರು, ಅರ್ಧ ಕಾಮಗಾರಿ ಮಾಡಿದ್ದಾರೆ” ಎಂದರು.

“ಮಳೆ ಬಂದರೆ ಮನಿಯೊಳಗೆ ನೀರು ನುಗ್ಗುತ್ತದೆ. ಛಾವಣಿಯೂ ಸೋರುತ್ತದೆ. ನನಗೂ ನನ್ನ ಗಂಡನಿಗೆ ಆರೋಗ್ಯ ಸರಿ ಇಲ್ಲ. ಒಂದಿನ ಕೆಲಸಕ್ಕೆ ಹೋದ್ರೆ ಇನ್ನೊಂದು ದಿನ ಹೋಗಲು ಆಗುವುದಿಲ್ಲ. ಮಕ್ಕಳಿಗೆ ಒಂದೊಪ್ಪತ್ತಿನ ಗಂಜಿಗೂ ನರಕಯಾತನೆ ಆಗುತ್ತಿದೆ” ಎಂದು ಹೇಳಿದರು.

ಸಂಬಂಧಪಟ್ಟ ಅಧಿಕಾರಿಗಳು ಮನೆ ಕಾಮಗಾರಿಯನ್ನ ಪೂರ್ಣಗೊಳಿಸಿಕೊಡಬೇಕು. ತಮ್ಮ ಕುಟುಂಬಕ್ಕೆ ನೆರವು ನೀಡಬೇಕೆಂದು ಆಸೀನಾ ಕುಟುಂಬ ಎದುರು ನೋಡುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಗಿರಿಜಾ ಎಸ್‌ ಜಿ
ಗಿರಿಜಾ ಎಸ್‌ ಜಿ
ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ, ಮಹಿಳಾ ಪರ ಹೋರಾಟಗಾರ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...