ಚಿಕ್ಕಮಗಳೂರು | ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾ. 28ಕ್ಕೆ ಬೃಹತ್‌ ಪ್ರತಿಭಟನಾ ಸಮಾವೇಶ

Date:

  • 94 ಸಿ, 94 ಸಿಸಿ – ಅರ್ಹ ಫಲಾನುಭವಿಗಳಿಗೆ ಕೂಡಲೆ ಹಕ್ಕು ಪತ್ರ ವಿತರಿಸಿ
  • ನಿವೇಶನ ಹಂಚಿಕೆ ಮಾಡಿ; ಮಲೆನಾಡು ರೈತರಿಗೆ ಸಾಗುವಳಿ ಹಕ್ಕು ಪತ್ರ ನೀಡಿ

ʼಭೂಮಿ ವಸತಿ ಕೊಡದೆ ನಮ್ಮ ಓಟು ಕೊಡೆವು, ಅರಣ್ಯ ಹಕ್ಕು ಸಿಗದೆ ನಮ್ಮ ಓಟು ಕೊಡೆವುʼ ಎಂಬ ಘೋಷ ವಾಕ್ಯದೊಂದಿಗೆ ಮಾರ್ಚ್‌ 28ರಂದು ಚಿಕ್ಕಮಗಳೂರಿನಲ್ಲಿ ರೈತ, ದಲಿತ, ಕೂಲಿಕಾರ್ಮಿಕ ಸಂಘಟನೆಗಳ ವತಿಯಿಂದ ಜನಜಾಗೃತಿ ಜಾಥಾ ಮತ್ತು ಬೃಹತ್‌ ಸಮಾವೇಶ ಹಮ್ಮಿಕೊಳ್ಳಲಾಗಿದೆ.

‘ಚುನಾವಣೆ ಹಿನ್ನೆಲೆ ರಾಜಕಾರಣಿಗಳ ವಿನಮ್ರತೆಯ ನಾಟಕ ಪ್ರಾರಂಭವಾಗಲಿದೆ. ಈ ಬಾರಿ ಮಲೆನಾಡಿಗರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕಾಗಿದೆ. ಬೇಡಿಕೆಗಳನ್ನು ಈಡೇರಿಸದ ಹೊರತು ನಮ್ಮ ಮತ ನೀಡುವುದಿಲ್ಲ’ ಎಂದು ಪ್ರತಿಭಟನೆಗೆ ಕರೆ ನೀಡಿರುವ ರೈತ, ದಲಿತ ಮತ್ತು ಕೂಲಿಕಾರ್ಮಿಕ ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಗೆದ್ದು ಹೋದವರು ನಮ್ಮತ್ತ ತಿರುಗಿ ನೋಡಿದ್ದಾರೆಯೇ? ಬಡ ಜನರಿಗೆ ಸೂರು ಸಿಕ್ಕಿದೆಯೆ? ಅರಣ್ಯ ಕಾಯಿದೆಗಳ ಭಯದಿಂದ ನಮಗೆ ಮುಕ್ತಿ ಸಿಕ್ಕಿದೆಯಾ? ಕನಿಷ್ಟ ಒಂದು ಒಳ್ಳೆಯ ಸರ್ಕಾರಿ ಆಸ್ಪತ್ರೆಯಾದರೂ ಇದೆಯಾ? ಹೀಗಿರುವಾಗ ನಾವು ಅವರಿಗೆ ಏಕೆ ಮತ ಹಾಕಬೇಕು” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಸತಿ ಹಕ್ಕಿಗಾಗಿ 94 ಸಿ, 94 ಸಿಸಿ ಅಡಿಯಲ್ಲಿ ಸಾವಿರಾರು ಜನರು ಅರ್ಜಿ ಸಲ್ಲಿಸಿದ್ದು, ಅರ್ಹ ಫಲಾನುಭವಿಗಳಿಗೆ ಕೂಡಲೆ ಹಕ್ಕು ಪತ್ರ ವಿತರಿಸಬೇಕು. ಗ್ರಾಮ ಪಂಚಾಯಿತಿಗಳು ನಿವೇಶನಗಳಿಗೆ ಮೀಸಲಿಟ್ಟಿರುವ ಜಾಗಗಳನ್ನು ಕೂಡಲೆ ನಿವೇಶನ ರಹಿತರನ್ನು ಗುರುತಿಸಿ ವಂಚಿತರಿಗೆ ಹಂಚಿಕೆ ಮಾಡಿ, ಮನೆಗಳನ್ನು ನಿರ್ಮಿಸಿಕೊಡಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?  ಶಾಸಕ ಅಖಂಡ ಶ್ರೀನಿವಾಸ ಮೂರ್ತಿಗೆ ಟಿಕೆಟ್‌ ಕೈ ತಪ್ಪುವ ಭೀತಿ; ಸಿದ್ದರಾಮಯ್ಯ ಭೇಟಿ ಮಾಡಿದ ಕೈ ಮುಖಂಡರು

“ಬದುಕಿಗಾಗಿ ವ್ಯವಸಾಯ ಮಾಡುತ್ತಿರುವ ಮಲೆನಾಡಿನ ರೈತರ ಸಾಗುವಳಿ ಭೂಮಿಗೆ ಹಕ್ಕು ಪತ್ರ ನೀಡಬೇಕು. ಮಲೆನಾಡಿನ ರೈತಾಪಿ ವರ್ಗವನ್ನು ಬಾದಿಸುತ್ತಿರುವ ತೊಂಡೆರೋಗ, ಕೊಳೆ ರೋಗ, ಎಲೆಚುಕ್ಕಿ ರೋಗದ ಬಗ್ಗೆ ಸಂಶೋಧನೆಗಳು ತೀವ್ರಗೊಳಿಸಿ, ಬಾಧಿತ ರೈತರಿಗೆ ಸೂಕ್ತ ಪರಿಹಾರ ನೀಡಬೇಕು. ಜೊತೆಗೆ ಕೂಲಿಕಾರರಿಗೆ ವಿಶೇಷ ಪ್ಯಾಕೇಜ್‌ ಘೋಷಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಪರಿಸರ ಸ್ನೇಹಿ ಸಾರ್ವಜನಿಕ ಹಿತಾಸಕ್ತಿಯ ಅಭಿವೃದ್ಧಿಗಾಗಿ ಹಾಗೂ ಭೂಮಿ, ವಸತಿ ಸಮಸ್ಯೆ ಬಗೆಹರಿಸಲು ತೊಡಕಾಗಿರುವ ಸೆಕ್ಷನ್‌ 4, 1 ಮತ್ತು ಇತರೆ ಜನ ವಿರೋಧಿ ಅರಣ್ಯ ಕಾಯಿದೆಗಳನ್ನು ರದ್ದು ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...