ಚಿಕ್ಕಮಗಳೂರು | ಸೆಲೂನ್‌ಗೆ ಹೋಗುತ್ತೇನೆಂದು ತಿಳಿಸಿ ಮನೆಬಿಟ್ಟಿದ್ದ ಹಿರಿಯ ವ್ಯಕ್ತಿ ನಾಪತ್ತೆ: ದೂರು ದಾಖಲು

Date:

ಶೇವಿಂಗ್ ಹಾಗೂ ಕಟ್ಟಿಂಗ್ ಮಾಡಿಸಿಕೊಂಡು ಬರುತ್ತೇನೆಂದು ಹೇಳಿ ಮನೆಯಿಂದ ತೆರಳಿದ್ದ ವ್ಯಕ್ತಿ ನಾಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿ ನಡೆದಿದೆ.

ಕಳಸ ತಾಲೂಕಿನ ಹೊಸಮಠ ಬಾಲ್ಗಲ್ ಸಂಸೆ ಗ್ರಾಮದ ಕೃಷ್ಣೇಗೌಡ (74) ವರ್ಷದವರಾಗಿದ್ದು, ಕಳೆದ ಆಗಸ್ಟ್‌ 15ರಿಂದ ಕಾಣೆಯಾಗಿದ್ದಾರೆ.

ಇವರಿಗೆ 4 ಜನ ಮಕ್ಕಳಿದ್ದು, ಎಲ್ಲರೂ ಬೇರೆ ಬೇರೆ ಮನೆ ಮಾಡಿಕೊಂಡು ವಾಸವಿದ್ದಾರೆ. ಕೃಷ್ಣೇಗೌಡರ ಮಗನಾದ ರಘುನಾಥರವರ ಜೊತೆಯಲ್ಲಿ ವಾಸವಿದ್ದರು. ಆಗಸ್ಟ್ 15ರಂದು ಬೆಳಗ್ಗೆ 09.30 ಗಂಟೆಗೆ ಸಂಸೆಗೆ ಹೋಗಿ ಕಟಿಂಗ್ ಮತ್ತು ಶೇವಿಂಗ್ ಮಾಡಿಸಿಕೊಂಡು ಬರುತ್ತೇನೆ ಎಂದು ಮನೆಯಲ್ಲಿ ತಿಳಿಸಿ ಹೊರಗೆ ಹೋಗಿದ್ದರು. ಆದರೆ ಈವರೆಗೆ ಮನೆಗೆ ಹಿಂದಿರುಗಿ ಬಂದಿಲ್ಲ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ರಸ್ತೆಯಲ್ಲಿ ಓಡಾಡಿರುವು ದೃಶ್ಯವು ಸ್ಥಳೀಯ ಅಂಗಡಿಗಳಲ್ಲಿ ಹಾಕಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಸೆಯಲ್ಲಿ ಕ್ಷೌರ ಮಾಡಿಸಿಕೊಂಡು ನಂತರ ಮಹಾವೀರ (ಬಾಳೆಕಾಯಿ) ರವರ ಜೀಪಿನಲ್ಲಿ ಕಳಸಕ್ಕೆ ಹೋಗಿ ಅರುಣ ಕೂಲ್ ಡ್ರಿಂಕ್ಸ್ ಹತ್ತಿರ ಇಳಿದುಕೊಂಡಿದ್ದಾಗಿ ಆಲ್ಲಿನ ಸ್ಥಳೀಯರು ಮಾಹಿತಿ ನೀಡಿದ್ದಾರೆ. ವಾಪಸ್ಸು ಮನೆಗೆ ಬಾರದ ಕಾರಣ ಕೃಷ್ಣೇಗೌಡರ ಸಂಬಂಧಿಕರ ಮನೆಗಳಲ್ಲಿ ಹಾಗೂ ಕಳಸ, ಹೊರನಾಡು, ಕಾರ್‌ಗದ್ದೆ, ಕೆಳಕೋಡುಗಳಲ್ಲಿ ಹುಡುಕಾಡಿದರು ಎಲ್ಲಿಯೂ ಸಿಗದ ಕಾರಣ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ.

photo 6203858596266098237 y 1

ಕಾಣೆಯಾದ ಕೃಷ್ಣೇಗೌಡರು ದುಂಡು ಮುಖ, ಸಾಧಾರಣ ಮೈಕಟ್ಟು, ಕಪ್ಪು ಬಿಳಿ ಮಿಶ್ರಿತ ತಲೆ ಕೂದಲು ಮತ್ತು ಮೀಸೆ ಹೊಂದಿದ್ದಾರೆ. ಸುಮಾರು 5.2 ಅಡಿ ಎತ್ತರ ಇರುತ್ತಾರೆ. ಕನ್ನಡ ಭಾಷೆ ಮಾತನಾಡುತ್ತಾರೆ. ಇವರು ಮನೆಯಿಂದ ಹೋಗುವಾಗ ಬಿಳಿ ಬಣ್ಣದ ಅಂಗಿ ಮತ್ತು ಪಂಚೆ ಧರಿಸಿರುತ್ತಾರೆ ಎಂದು ಕುದುರೆಮುಖ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಪೊಲೀಸ್ ಅಧಿಕಾರಿ ಪ್ರಸನ್ನವರ ಜೊತೆ ಗೂಡಿ ಮರಸಣಿಗೆ, ಹೀರೆಬೈಲ್ ಕಡೆಗಳಲ್ಲಿ ಹುಡುಕಾಡಿದರೂ ಎಲ್ಲಿಯೂ ಯಾವುದು ಸುಳಿವು ಸಿಕ್ಕಿಲ್ಲ. ಯಾರಾದರೂ ಕೃಷ್ಣೇಗೌಡರನ್ನು ನೋಡಿದರೆ ಕೂಡಲೇ ಮಾಹಿತಿ ತಿಳಿಸಿ ಅಥವಾ ಕುದುರೆಮುಖ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಎಂದು ನಾಪತ್ತೆಯಾಗಿರುವ ಕೃಷ್ಣೇಗೌಡ ಮಗ ಅರುಣ್ ಮಾಧ್ಯಮಗಳ ಮೂಲಕ ಕೇಳಿಕೊಂಡಿದ್ದಾರೆ.

ಒಂದು ವೇಳೆ ಕಂಡಲ್ಲಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ:

ಅರುಣ್ 6360711815

ಅಶೋಕ್ 8660779327

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...