ಚಿಕ್ಕಮಗಳೂರು | ಒತ್ತುವರಿ ತೆರವು ಖಂಡಿಸಿ ಕಳಸ ಬಂದ್ ಯಶಸ್ವಿ

Date:

ರಾಜ್ಯ ಸರ್ಕಾರದ ಅಕ್ರಮ ಒತ್ತುವರಿ ತೆರವು ಖಂಡಿಸಿ ರೈತ ಸಂಘಟನೆಗಳು ಬುಧವಾರ ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಬಂದ್​ಗೆ ಕರೆ ನೀಡಿತ್ತು. ಈ ಬಂದ್‌ಗೆ ಕಳಸ ತಾಲೂಕಿನಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಅಂಗಡಿ – ಮುಂಗಟ್ಟುಗಳನ್ನು ಮುಚ್ಚಿ ವರ್ತಕರು ಬಂದ್​ಗೆ ಬೆಂಬಲ ಸೂಚಿಸಿದ್ದು, ರೈತರ ಹೋರಾಟಕ್ಕೆ ಸರ್ವ ಪಕ್ಷಗಳು ಸಾಥ್ ನೀಡಿದ್ದವು. ಕನ್ನಡ, ದಲಿತ ಸಂಘಟನೆ ಸೇರಿ ಬಹುತೇಕ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿತ್ತು.

ಕಳಸ ತಾಲೂಕು ಒತ್ತುವರಿ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಕಾಫಿ ಬೆಳಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬದುಕಿಗಾಗಿ ಮಾಡಿರುವ 2-3 ಎಕರೆ ಒತ್ತುವರಿಯೇ ಹೆಚ್ಚಾಗಿದೆ. ಒತ್ತುವರಿ ತೆರವು ಮಾಡಿದರೆ ಸಾವಿರಾರು ಕುಟುಂಬಗಳು ಬೀದಿಗೆ ಬರಲಿವೆ. ಕೂಡಲೇ ಅಕ್ರಮ ಒತ್ತುವರಿ ತೆರವು ಕೈಬಿಡಬೇಕು” ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಬೆಳಗ್ಗೆ ಅಂಗಡಿಗಳು, ಶಾಲಾ-ಕಾಲೇಜುಗಳು ಮುಚ್ಚಿದ್ದವು. ಸಂಜೆ 4ರ ನಂತರ ಅಂಗಡಿಗಳು ತೆರೆದವು. ಕಳಸೇಶ್ವರ ದೇವಸ್ಥಾನದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೃಷಿಕರು ಭಾಗವಹಿಸಿದ್ದರು. ಕಳಸ ಪಟ್ಟಣದಲ್ಲಿ ಬೃಹತ್ ಮೆರವಣಿಗೆ ಮಾಡಲಾಯಿತು. ತಾಲೂಕಿನಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

ಹೊರನಾಡು ಅನ್ನಪೂರ್ಣೇಶ್ವರಿ ದೇಗುಲಕ್ಕೆ ಹೈಕೋರ್ಟ್ ಚೀಫ್ ಜಸ್ಟೀಸ್ ಭೇಟಿ ನೀಡಿದ್ದು, ಪ್ರತಿಭಟನಾ ಮಾರ್ಗದಲ್ಲಿ ನ್ಯಾಯಮೂರ್ತಿಗಳು ಸಾಗುವ ವೇಳೆ, “ನಮ್ಮ ನೋವು ನ್ಯಾಯಮೂರ್ತಿಗಳಿಗೂ ಗೊತ್ತಾಗಲಿ” ಎಂದು ಹೋರಾಟಗಾರರು ಘೋಷಣೆ ಕೂಗಿದರು.

‘ಮಲೆನಾಡಿನ ಕಾಫಿ ತೋಟಗಳು ಅರಣ್ಯದ ಸ್ವರೂಪದಲ್ಲೇ ಇವೆ ಎಂದು ಸರ್ಕಾರದ ಗಮನಕ್ಕೆ ತರಲಾಗಿದೆ. ಸದ್ಯಕ್ಕೆ ಯಾವುದೇ ಭೂಮಿ ತೆರವು ಮಾಡದಂತೆ ಅರಣ್ಯ ಸಚಿವರಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ. ರಾಜಕೀಯ ಪ್ರೇರಿತ ವದಂತಿ ನಂಬಬಾರದು’ ಎಂದು ಶಾಸಕ ಟಿ.ಡಿ.ರಾಜೇಗೌಡ ಮನವಿ ಮಾಡಿದರು.

photo 6271620359719600987 y

‘ಅರಣ್ಯ ಅಧಿಕಾರಿಗಳು ರೈತರ ಭೂಮಿ ತೆರವು ಮಾಡುವ ಯತ್ನ ಮಾಡಿದರೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸುತ್ತೇನೆ’ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಸಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಕಳಸ ತಹಶೀಲ್ದಾರ್ ಕೆ ಎಸ್‌ ದಯಾನಂದ್‌ ಹೋರಾಟ ಸಮಿತಿ ಸರ್ಕಾರಕ್ಕೆ ಸಲ್ಲಿಸಿದ ಹಕ್ಕೊತ್ತಾಯ ಪತ್ರವನ್ನು ಸ್ವೀಕರಿಸಿ, ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿವರ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...