ಚಿಕ್ಕಮಗಳೂರು l ದನ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ 

Date:

ದನ ಕಳ್ಳತನ ಮಾಡಿ ಸಾಗಿಸುತ್ತಿದ್ದಾಗ ಆರೋಪಿಗಳನ್ನ ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನಲ್ಲಿ ನಡೆದಿದೆ.

ಆರೋಪಿಗಳಾದ ಸಲ್ಮಾನ್ ಖಾನ್@ಸಂಪತ್ ಬಿನ್ ಅಶ್ವಕ ಖಾನ್ (21 ), ಸಾಹಿಲ್ ಬಿನ್ ಲೇಟ್ ಜಮಿಲ್ ಅಹಮ್ಮದ್ (21), ಸಯ್ಯದ ತೌಫಿಕ್ ಬಿನ್ ಸೈಯದ್ ಐಜಾಜ್ (32 ), ಅಬ್ದುಲ್ ಅಜೀಜ್ ಬಿನ್ ಅಬ್ದುಲ್ ನಜೀರ್ (34), ಅಬ್ದುಲ್ ಜಾವಾದ್ ಬಿನ್ ಅಬ್ದುಲ್ ಹಾಕ್ (22), ಪೊಲೀಸರು ಜಾನುವಾರುಗಳನ್ನು ರಕ್ಷಿಸಿದ್ದು, ಹಾಗೂ ಕೃತ್ಯಕ್ಕೆ ಬಳಸಿದ ವಾಹನ & ಮೊಬೈಲ್ ಗಳನ್ನು ವಶಕ್ಕೆ ಪಡೆದು ಸೂಕ್ತ ಕಾನೂನು ಕ್ರಮ ಜರುಗಿಸಲಾಗಿದೆ ಎನ್ನಲಾಗಿದೆ.

ಜುಲೈ 10ರಂದು ಕಳಸ ಪೊಲೀಸ್ ಠಾಣಾ ವ್ಯಾಪ್ತಿಯ ಬಲಿಗೆ ಚೆಕ್ ಪೋಸ್ಟ್ ಹತ್ತಿರ xylo ವಾಹನದಲ್ಲಿ ಐದು ಜನ ಆರೋಪಿತರು ನಾಲ್ಕು ದನಗಳನ್ನು ಸಾಗಿಸಿಕೊಂಡು ಹೋಗುತ್ತಿರುವಾಗ ಸ್ಥಳೀಯರ ಮಾಹಿತಿಯನ್ನು ಖಚಿತ ಪಡಿಸಿಕೊಂಡು ಶೋಧ ಕಾರ್ಯ ನಡೆಸಲಾಗಿದೆ. ಕಳಸ ಪೊಲೀಸ್ ಠಾಣೆಯ ಪಿಎಸ್ಐ ಹಾಗೂ ಸಿಬ್ಬಂದಿಯವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಆರೋಪಿತರು ಕದ್ದು ಪರಾರಿಯಾಗಿದ್ದರಿಂದ ವಾಹನದಲ್ಲಿದ್ದ ನಾಲ್ಕು ದನಗಳನ್ನು ರಕ್ಷಿಸಿ ಮತ್ತು ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆಯಲಾಗಿದ್ದು, ಎಲ್ಲಾ ಆರೋಪಿಗಳು ಚಿಕ್ಕಮಗಳೂರು ಜಿಲ್ಲೆ, ಶಿವಮೊಗ್ಗ ಜಿಲ್ಲೆ, ದಾವಣಗೆರೆ ಜಿಲ್ಲೆ, ಹಾವೇರಿ ಜಿಲ್ಲೆ, ಚಿತ್ರದುರ್ಗ ಜಿಲ್ಲೆಗಳ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ದನಕಳ್ಳತನ ಮಾಡಿರುವುದು ತನಿಖೆಯಲ್ಲಿ ಕಂಡು ಬಂದಿದ್ದು, ಆರೋಪಿಗಳು ಪದೇ ಪದೇ ದನಕಳ್ಳತನ ಮಾಡುವ ಪ್ರವೃತ್ತಿಯುಳ್ಳವರೆನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಮೂವರು ಅಂತಾರಾಷ್ಟ್ರೀಯ ಮನೆಗಳ್ಳರ ಬಂಧನ

ಠಾಣಾ ಮೊ.ನಂ: 40/2025 ರ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯಿದೆಯ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿ ತನಿಖೆಯನ್ನು ಕೈಗೊಳ್ಳಲಾಗಿದೆ. ಈ ಕುರಿತು ಡಾ.ವಿಕ್ರಂ ಅಮಟೆ ಐಪಿಎಸ್ ಪೊಲೀಸ್ ಅಧೀಕ್ಷಕರ ನೇತೃತ್ವದಲ್ಲಿ ಬಾಲಾಜಿ ಸಿಂಗ್ ಪೊಲೀಸ್ ಉಪಾಧೀಕ್ಷಕರು ಕೊಪ್ಪ ಉಪವಿಭಾಗರವರ ನೇತೃತ್ವದಲ್ಲಿ ಕಳಸ ಪೊಲೀಸ್ ಠಾಣೆಯ ಪಿಎಸ್ಐ ಚಂದ್ರಶೇಖರ್ ಎ.ಎಮ್ ಹಾಗೂ ಸಿಬ್ಬಂದಿಗಳಾದ  ಗಿರೀಶ, ಶಿವಕುಮಾರ, ನಿಖಿಲ್, ಸಿದ್ದಪ್ಪ ಕರಂಡಿ, ಪ್ರಮೋದ್ ಎಲ್, ಹೆಚ್ ವಿನಯ್ ಹಾಗೂ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...