ಚಿಕ್ಕಮಗಳೂರು | ಮೂರು ದಿನಗಳ ಕಾಲ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧ

Date:

ಚಿಕ್ಕಮಗಳೂರಿನ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿ, ಹೊನ್ನಮ್ಮನಹಳ್ಳ, ಮಾಣಿಕ್ಯಾಧಾರ, ಗಾಳಿಕೆರೆಗಳಿಗೆ ಮೂರು ದಿನಗಳ ಕಾಲ ಪ್ರವಾಸಿಗರಿಗೆ ನಿಷೇಧಿಸಲಾಗಿದೆ ಎಂದು ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಶ್ರೀರಾಮ ಸೇನೆ ರಾಜ್ಯಾದ್ಯಂತ ದತ್ತಮಾಲಾ ಅಭಿಯಾನ ಹಮ್ಮಿಕೊಂಡಿದ್ದು, ಅಕ್ಟೋಬರ್ 30 ರಿಂದ ನವೆಂಬರ್ 5 ರವರೆಗೆ ಮುಳ್ಳಯ್ಯನಗಿರಿ ಭಾಗದಲ್ಲಿ ದತ್ತಮಾಲಾ ಅಭಿಯಾನ ನಡೆಯಲಿದೆ. ಈ ಹಿನ್ನೆಲೆ, ಮುಂಜಾಗ್ರತಾ ಕ್ರಮವಾಗಿ ನ.4 ಬೆಳಗ್ಗೆ 6 ರಿಂದ ನ.6ರ ಬೆಳಗ್ಗೆ 10 ರವರೆಗೆ ಪ್ರವಾಸಿಗರನ್ನು ನಿಷೇಧಿಸಲಾಗಿದೆ. ಈ ಸಮಯದಲ್ಲಿ ಪ್ರವಾಸಿಗರು ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಆಲೋಚನೆಯಲ್ಲಿದ್ದರೆ, ದಿನಾಂಕವನ್ನು ಬದಲಾಯಿಸಿಕೊಳ್ಳಿ ಎಂದು ಜಿಲ್ಲಾಡಳಿತ ಹೇಳಿದೆ.

ದತ್ತಮಾಲಾ ಅಭಿಯಾನ ನಡೆಯುವ ಸಮಯದಲ್ಲಿ ಹೆಚ್ಚಿನ ಭಕ್ತರು ಇಲ್ಲಿಗೆ ಭೇಟಿ ನೀಡುತ್ತಾರೆ. ಈ ಹಿನ್ನೆಲೆ, ಪ್ರವಾಸಿಗರಿಗೆ ಅನಾನುಕೂಲವಾಗುವ ದೃಷ್ಟಿಯಿಂದ ಈ ನಿರ್ಧಾರಕ್ಕೆ ಬರಲಾಗಿದೆ. ಹಾಗಾಗಿ, ಚಿಕ್ಕಮಗಳೂರು ತಾಲೂಕಿನ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ಸ್ವಾಮಿ ದರ್ಗಾ, ದತ್ತಪೀಠ, ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, ಹೊನ್ನಮ್ಮನಹಳ್ಳ, ಮಾಣಿಕ್ಯಾಧಾರ, ಗಾಳಿಕೆರೆಗೆ ನವೆಂಬರ್ 4 ರ ಬೆಳಗ್ಗೆ 6ರಿಂದ ನವೆಂಬರ್ 6ರ ಬೆಳಗ್ಗೆ 10ರವರೆಗೆ ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಲಾಗಿದೆ ಎಂದು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ದತ್ತಪೀಠಕ್ಕೆ ಜಿಲ್ಲಾಧಿಕಾರಿ, ಎಸ್‌ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರೈಡ್ ಕ್ಯಾನ್ಸಲ್ ಆಗದ ರ‍್ಯಾಪಿಡೋದಿಂದ ‘ಆಟೋ ಪ್ಲಸ್’ ಹೊಸ ಸೇವೆ ಆರಂಭ

“ಅ.30 ರಂದು ರಾಜ್ಯಾದ್ಯಂತ ದತ್ತ ಭಕ್ತರು ದತ್ತಮಾಲೆ ಧರಿಸಲಿದ್ದಾರೆ. ಅದೇ ದಿನ ಚಿಕ್ಕಮಗಳೂರಿನ ಶಂಕರಮಠದ ಮಾಲಾಧಾರಣೆ ನಡೆಯಲಿದೆ. ನ.2 ರಂದು ದತ್ತ ದೀಪೋತ್ಸವ, ನ.4 ರಂದು ಪಡಿ ಸಂಗ್ರಹ ಮಾಡಲಾಗುವುದು. ನ.5 ರಂದು ಶೋಭಾಯಾತ್ರೆ ನಡೆಯಲಿದೆ. ಇದೇ ಸ್ಥಳದಲ್ಲಿ ಧರ್ಮಸಭೆ ನಡೆಸಿ ದತ್ತಪೀಠಕ್ಕೆ ತೆರಳಿ, ದತ್ತಪಾದುಕೆಗಳ ದರ್ಶನ ಪಡೆದ ನಂತರ ಹೋಮ ಹವನ ಹಾಗೂ ಪ್ರಸಾದ ವಿನಿಯೋಗ ನಡೆಯಲಿದೆ” ಎಂದು ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ತಿಳಿಸಿದ್ದಾರೆ.

 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...