ಚಿಕ್ಕಮಗಳೂರು | ವಿಶ್ವ ಸಾಮಾಜಿಕ ನ್ಯಾಯ ದಿನ; ಕಾನೂನು ಅರಿವು ಕಾರ್ಯಕ್ರಮ

Date:

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಪರ್ಯಾಯ ವಕೀಲರ ವೇದಿಕೆ, ಸಂವಿಧಾನ ಸಂರಕ್ಷಣಾ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಚಿಕ್ಕಮಗಳೂರು ತಾಲೂಕಿನ ಹೊಸಕೋಟೆ ಗ್ರಾಮದಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ ಪ್ರಯುಕ್ತ ಕಾನೂನು ಅರಿವು ಕಾರ್ಯಕ್ರಮವನ್ನು ಶುಕ್ರವಾರ ನಡೆಸಲಾಯಿತು.

ಕಳೆದ ತಿಂಗಳಿನಲ್ಲಿ ಚಿಕ್ಕಮಗಳೂರು ತಾಲೂಕಿನ ಹೊಸಕೋಟೆ ಗ್ರಾಮದಲ್ಲಿ ದಲಿತ ಸಮುದಾಯಕ್ಕೆ ಸೇರಿದ ಜನರಿಗೆ ಆ ಊರಿನಲ್ಲಿ ಆಂಜನೇಯಸ್ವಾಮಿ ದೇವಾಲಯಕ್ಕೆ ಪ್ರವೇಶಿಸದಂತೆ ಅಡ್ಡಿಪಡಿಸಿದ್ದರು. ಈ ಕುರಿತು ಜಿಲ್ಲಾಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ ಮತ್ತು ಕಾನೂನು ಸೇವಾ ಪ್ರಾಧಿಕಾರ ಮಧ್ಯ ಪ್ರವೇಶಿಸಿ ದಲಿತ ಸಮುದಾಯದ ಜನರಿಗೆ ದೇವಸ್ಥಾನ ಪ್ರವೇಶಸುವಂತೆ ಜನರಲ್ಲಿ ಜಾಗೃತಿ ಮೂಡಿಸಿ ಅವಕಾಶ ಕಲ್ಪಿಸಿಕೊಡಲಾಯಿತು.

ಜಿಲ್ಲಾಧಿಕಾರಿ ಎನ್. ಎಂ ನಾಗರಾಜ್ ಕಾರ್ಯಕ್ರಮ ಉದ್ಘಾಟನೆ ನಡೆಸಿ “ಸಂವಿಧಾನ ಎಲ್ಲರಿಗೂ ಸಮಾನತೆ ನೀಡಿದೆ ಯಾವುದೇ ವ್ಯಕಿಯನ್ನು ಜಾತಿ, ಧರ್ಮ, ಲಿಂಗ, ಭಾಷೆ, ಕೆಲಸದ ಆಧಾರದ ಮೇಲೆ ತಾರತಮ್ಯ ಮಾಡಬಾರದು, ಹಾಗೆಯೇ, ಶಿಕ್ಷಣದಿಂದ ಎಂತಹವರು ಸಹ ಉನ್ನತ ಪದವಿ ಪಡೆಯಲು ಸಾಧ್ಯ ಆದುದರಿಂದ ಮಕ್ಕಳ ಕೀಳಿರಿಮೆ ತೊರೆದು ಕನಿಷ್ಠ ಒಂದು ಪದವಿವರೆಗಾದರೂ ವಿದ್ಯಾಭ್ಯಾಸ ಮಾಡಬೇಕು. ಜೊತೆಗೆ ಪದವಿ ಪಡೆದರೆ ಸಾಲದು ಮನುಷ್ಯರಿಗೆ ಮನುಷ್ಯರೇ ಸಹಕರಿಸಬೇಕು. ಪ್ರಕೃತಿಯ ವಿಕೋಪ ನಡೆದಾಗ ಯಾರನ್ನು, ಯಾವ ಜಾತಿಯವರು ಎಂದು ನೋಡುವುದಿಲ್ಲ ಆಗಾಗಿ ಒಳ್ಳೆತನದಿಂದ ಮುಂದೆ ಸಾಗಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾನೂನು ಸೇವಾ ಪ್ರಾಧಿಕಾರದ ಸದಸ್ಯ, ಕಾರ್ಯದರ್ಶಿಯಾದ ವಿ. ಹನುಮಂತಪ್ಪ ಮಾತನಾಡಿ “ಈ ದಿನ ವಿಶ್ವ ಸಾಮಾಜಿಕ ನ್ಯಾಯ ದಿನ 2009ರಿಂದ ವಿಶ್ವದಾದ್ಯಂತ ಆಚರಿಸುತ್ತಿದ್ದು, ಈ ವರ್ಷದ ಧ್ಯೇಯ ವಾಕ್ಯ ಸಾಮಾಜಿಕ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ನವೀಕೃತ ಬದ್ಧತೆ ಎನ್ನುವುದಾಗಿದ್ದು, ಕಾನೂನು ಸೇವಾ ಪ್ರಾಧಿಕಾರವು ಸಾಮಾಜಿಕ ನ್ಯಾಯ ಆಧರಿಸಿ ಉಚಿತ ಅರಿವು ಮತ್ತು ನೆರವು ನೀಡಲಾಗುತ್ತಿದೆ.

ಸಿವಿಲ್ ಕೇಸ್ ನಡೆಸಲು ಪ್ಯಾನಲ್ ವಕೀಲರು ಮತ್ತು ಕ್ರಿಮಿನಲ್ ಕೇಸ್ ನಡೆಸಲು ಕಾನೂನು ಅಭಿರಕ್ಷಕ ವಕೀಲರ ಮೂಲಕ ಉಚಿತವಾಗಿ ನಡೆಸಲಾಗುವುದು. ಹಾಗೆಯೇ, ಜೈಲಿನಲ್ಲಿರುವ ಬಂಧಿಗಳಿಗೆ ಆದಾಯ ಮಿತಿ ಇಲ್ಲದೆ ನೆರವು ನೀಡಲಾಗುತ್ತದೆ. ಲೋಕ್ ಅದಾಲತ್ ಮತ್ತು ಮದ್ಯಸ್ತಿಕೆ ಮೂಲಕ ರಾಜಿ ಸಂಧಾನ ಮಾಡಿಕೊಂಡು ಶೀಘ್ರ ನ್ಯಾಯ ಪಡೆಯಬಹುದು ಎಂದು ತಿಳಿಸಿದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಮಲೆನಾಡಿನಲ್ಲಿ ಕೋಮುದ್ವೇಷ ಹೆಚ್ಚುತ್ತಿದೆಯೇ; ಗೊಂದಲ ಸೃಷ್ಟಿಸಿದ ಪ್ರಕರಣ

ಈ ವೇಳೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಪರ್ಯಾಯ ವಕೀಲರ ವೇದಿಕೆ, ಸಂವಿಧಾನ ಸಂರಕ್ಷಣಾ ಸಮಿತಿ ಹಾಗೂ ಗ್ರಾಮದ ಗ್ರಾಮಸ್ಥರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...