ಚಿಕ್ಕಮಗಳೂರು | ಗ್ರಾಹಕರ ಚಿನ್ನ, ಎಫ್‌ಡಿ ಹಣ ಧೋಖಾ; ಬ್ಯಾಂಕ್‌ ಸಿಬ್ಬಂದಿ ವಂಚನೆ

Date:

ಗ್ರಾಹಕರು ಬ್ಯಾಂಕ್​​ನಲ್ಲಿಟ್ಟಿದ ಚಿನ್ನ, ಎಫ್​ಡಿ ಹಣವನ್ನು ಬ್ಯಾಂಕ್ ಸಿಬ್ಬಂದಿಗಳೇ ದುರುಪಯೋಗಪಡಿಸಿಕೊಂಡಿದ್ದು, ಗ್ರಾಹಕರಿಗೆ ವಂಚಿಸಿರುವ ಘಟನೆ ಚಿಕ್ಕಮಗಳೂರಿನ ಬೋಳರಾಮೇಶ್ವರ ದೇಗುಲದ ಬಳಿ ಇರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನಡೆದಿದೆ.

ಬ್ಯಾಂಕ್​ ಮ್ಯಾನೇಜರ್ ಸಂದೀಪ್ ಕೊಲ್ಲೂರಿ, ಪ್ರಶಾಂತ್, ನಾರಾಯಣಸ್ವಾಮಿ, ಲಾವಣ್ಯ, ಶ್ವೇತಾ ವಂಚನೆ ಎಸಗಿದ ಆರೋಪಿಗಳು.

ಆರೋಪಿಗಳು ಗ್ರಾಹಕರ ಚಿನ್ನವನ್ನು ಮಾರಾಟ ಮಾಡಿ ನಕಲಿ‌ ಚಿನ್ನವನ್ನು ಬ್ಯಾಂಕ್​ ಲಾಕರ್​​ನಲ್ಲಿ ಇಟ್ಟಿದ್ದಾರೆ. ಬೆಂಗಳೂರು ಮುಖ್ಯ ಶಾಖೆ ಅಧಿಕಾರಿಗಳ ಪರಿಶೀಲನೆ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಿಕ್ಕಮಗಳೂರು ನಗರ ಠಾಣೆಯ ಪೊಲೀಸ್‌ ಇನ್ಸ್‌ಪೆಕ್ಟರ್‌ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ನಗರದ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಸಿಬ್ಬಂದಿಗಳೇ ವಂಚನೆ ನಡೆಸಿದ್ದು, ಗ್ರಾಹಕರ ಆಭರಣಗಳನ್ನು ಲಪಟಾಯಿಸಿದ್ದಾರೆ. ಬೆಂಗಳೂರು ಮುಖ್ಯ ಶಾಖೆ ಅಧಿಕಾರಿಗಳು ಆಡಿಟ್‌ ನಡೆಸುವ  ವೇಳೆ ಪ್ರಕರಣ ಬೆಳಕಿ ಬಂದಿದೆ” ಎಂದು ಹೇಳಿದರು.

“ಬ್ಯಾಂಕ್ ಆಡಿಟ್​ನಲ್ಲಿ 141 ಚಿನ್ನದ ಪ್ಯಾಕೆಟ್​ಗಳ ಪೈಕಿ 140 ಪ್ಯಾಕೆಟ್​​ಗಳಲ್ಲಿ ನಕಲಿ ಚಿನ್ನ ಪತ್ತೆಯಾಗಿದ್ದು, ಇನ್ನು ಕೋಟ್ಯಂತರ ರೂಪಾಯಿ ವಂಚನೆ ಮಾಡಿರುವುದೂ ಬಹಿರಂಗಗೊಂಡಿದೆ. ಈ ಹಿನ್ನೆಲೆಯಲ್ಲಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ​ಬೆಂಗಳೂರು ಶಾಖೆಯ ಮ್ಯಾನೇಜರ್​ ಆರೋಪಿಗಳ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ” ಎಂದರು.

ಪೊಲೀಸರು ಆರೋಪಿಗಳ ವಿರುದ್ಧ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳು ಬ್ಯಾಂಕಿಗೆ ಎರಡು ರೀತಿಯಲ್ಲಿ ವಂಚನೆ ಎಸಗಿರುವುದು ಕಂಡುಬಂದಿದೆ. ಆರೋಪಿಗಳು ಮೊದಲೇ ನಕಲಿ ಚಿನ್ನವನ್ನು ತಂದು ಇಟ್ಟುಕೊಂಡಿದ್ದರು. ಆರೋಪಿಗಳು ಗ್ರಾಹಕರಿಂದ ಅಸಲಿ ಚಿನ್ನವನ್ನು ಪಡೆದು ಸಾಲ ನೀಡುತ್ತಿದ್ದರು. ಆದರೆ ಲಾಕರ್​​ನಲ್ಲಿ ಇಡುವಾಗ ಅಸಲಿ ಚಿನ್ನದ ಬದಲು ನಕಲಿ ಚಿನ್ನವನ್ನು ಇಡುತ್ತಿದ್ದರು. ಬಳಿಕ ಅಸಲಿ ಚಿನ್ನವನ್ನು ಬೇರೆ ಕಡೆ ಮಾರುತ್ತಿದ್ದರು ಎಂಬುದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಹಣೆಗೆ ಪಿಸ್ತೂಲ್ ಇಟ್ಟು 3.50 ಕೋಟಿ ಸುಲಿಗೆ : ಜಿ.ಪಂ. ಮಾಜಿ ಸದಸ್ಯ ಸೇರಿ ಮೂವರ ಬಂಧನ

ಬ್ಯಾಂಕ್ ಮ್ಯಾನೇಜರ್ ಸಂದೀಪ್ ಮತ್ತು ಸಿಬ್ಬಂದಿ ನಾರಾಯಣಸ್ವಾಮಿ ವಂಚನೆ ಪ್ರಕರಣದ ಪ್ರಮುಖ ಆರೋಪಿಗಳು. ಮ್ಯಾನೇಜರ್ ಸಂದೀಪ್ ಪತ್ನಿ ಶ್ವೇತಾ ಹೆಸರಲಿನಲ್ಲಿ ನಕಲಿ ಚಿನ್ನವನ್ನು ಅಡವಿಟ್ಟು ಸಾಲ ಪಡೆದ್ದಿದ್ದನು. ಇದೇ ರೀತಿಯಾಗಿ ನಾರಾಯಣಸ್ವಾಮಿ ಕೂಡ ಪತ್ನಿ ಲಾವಣ್ಯ ಹೆಸರಿನಲ್ಲಿ ನಕಲಿ ಚಿನ್ನವನ್ನು ಅಡವಿಟ್ಟು ₹50 ಲಕ್ಷ ಸಾಲ ಪಡೆದಿರುವುದು ಕಂಡುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...