ಚಿಕ್ಕಮಗಳೂರು | ನಮಗೆ ಮೂಲ ಸೌಕರ್ಯ ಕೊಟ್ಟು ಜೀವ ಉಳಿಸಿ; ಬುಡಕಟ್ಟು ನಿವಾಸಿಗಳ ಅಳಲು

Date:

ಮಲೆನಾಡಿನ ಪ್ರದೇಶದಲ್ಲಿ ಹೆಚ್ಚಿನದಾಗಿ ಗುಡ್ಡ ಗಾಡು ಇರುವುದು ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿ. ನೋಡುವುದಕ್ಕೂ ಹಸಿರಿನಿಂದ ಕೂಡಿದ್ದು, ವಾತಾವರಣವೂ ಪ್ರಶಾಂತವಾಗಿರುತ್ತದೆ. ಬೇರೆ ಬೇರೆ ಭಾಗದಿಂದ ಜನರು ಸ್ಥಳ ವೀಕ್ಷಿಸಲು ಕಳಸ ಕಡೆ ಬರುತ್ತಾರೆ. ನೋಡಲು ಏಷ್ಟು ಚಂದವೋ ಅಷ್ಟೂ ಸಮಸ್ಯೆ ಉಲ್ಬಣಗೊಂಡಿದೆ.

ಅದೇ ರೀತಿಯಲ್ಲಿ ಕಳಸ ಭಾಗದ ಸಂಸೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಕಾರ್ಲೆ ಎಂಬ ಕುಗ್ರಾಮದಲ್ಲಿ ಅಂದಾಜು 100 ವರ್ಷಗಳಿಂದಲೂ ಜನರು ಕಾಡಂಚಿನಲ್ಲಿ ವಾಸಿಸುತ್ತಿದ್ದಾರೆ. ಸುಮಾರು 28 ಕುಟುಂಬಗಳು ಹಲವು ವರ್ಷಗಳಿಂದಲೂ ಇಲ್ಲಿ ಬದುಕು ನಡೆಸುತ್ತಿದ್ದಾರೆ.

WhatsApp Image 2023 10 28 at 09.25.19

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಲ್ಲಿನ ನಿವಾಸಿಗಳಿಗೆ ಪೇಟೆ ಜನ ಕಂಡರೆ ಭಯ, ಗಾಬರಿ ಹೆಚ್ಚಾಗುತ್ತಿತ್ತು. ಏಕೆಂದರೆ ಇವರು ವಾಸಿಸುವ ಸುತ್ತಮುತ್ತಲಿನ ಪ್ರದೇಶ ಹಲವು ವರ್ಷಗಳ ಹಿಂದೆ ನಕ್ಸಲೈಟ್ ಪ್ರದೇಶವಾಗಿತ್ತು. ಹಾಗಾಗಿ ಇಲ್ಲಿನ ನಿವಾಸಿಗಳು ಜೀವವನ್ನು ಕೈಯಲ್ಲಿಟ್ಟುಕೊಂಡು ಬದುಕುತ್ತಿದ್ದರು.

“ಕಾರ್ಲೆ ಎಂಬ ಕುಗ್ರಾಮದಲ್ಲಿ ಬದುಕು ನಿರ್ವಹಣೆಗೆ ಇಂದಿಗೂ ಸರಿಯಾದ ವ್ಯವಸ್ಥೆ ಇಲ್ಲ. ಕಾಲ್ನಡಿಗೆ ಓಡಾಟಕ್ಕೂ ಸಮರ್ಪಕ ರಸ್ತೆ, ಸೇತುವೆಗಳಿಲ್ಲ. ಕೆಲವು ಮನೆಗಳಿಗೆ ವಿದ್ಯುತ್ ಸಂಪರ್ಕವಿಲ್ಲ. ಹಾಗೆಯೇ ಕುಗ್ರಾಮದಿಂದ ಜೇಡಿಕೊಂಡಕ್ಕೆ ಹೋಗಬೇಕಾದರೆ ಎರಡು ಕಿಲೋಮೀಟರ್ ದೂರದ ಮನೆಗಳಿಗೆ ಸರಿಯಾದ ಮೂಲ ಸೌಕರ್ಯವಿರಲಿ, ಜೀವನ ನಡೆಸಲು ಒಂದು ವ್ಯವಸ್ಥೆಯೇ ಇಲ್ಲ. ಇವರಿಗೆ ಯಾವುದೇ ರೀತಿಯ ಪಡಿತರ ಚೀಟಿ, ಮನೆಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಕೊಟ್ಟರೂ ಅಧಿಕಾರಿಗಳು ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ನಮ್ಮ ಗ್ರಾಮಗಳಿಗೆ ಯಾವ ಆಧಿಕಾರಿಗಳೂ ಬರುವುದಿಲ್ಲ. ನಮ್ಮ ಕಷ್ಟಗಳನ್ನು ಯಾರ ಹತ್ತಿರ ಹೇಳಿಕೊಳ್ಳುವುದು” ಎಂಬುದು ಸ್ಥಳೀಯರ ಅಳಲಾಗಿದೆ.

WhatsApp Image 2023 10 28 at 09.27.45

“ನಾವು ದಿನನಿತ್ಯ ಕೂಲಿ ಕೆಲಸ ಮಾಡಿ ವಾರಕ್ಕೊಮ್ಮೆ ರೇಷನ್ ತರಬೇಕು. ಇಲ್ಲಿಂದ ಸುಮಾರು 22 ಕಿಮೀ ದೂರದಲ್ಲಿರುವ ಕಳಸದಿಂದಲೇ ಅಗತ್ಯ ವಸ್ತುಗಳನ್ನು ಕೊಂಡು ತರಬೇಕು. ಆರೋಗ್ಯ ಹದಗೆಟ್ಟು, ಹುಷಾರಿಲ್ಲದಿದ್ದರೆ ಆಸ್ಪತ್ರೆ ಹೋಗಲು ಜೋಳಿಗೆ ಕಟ್ಟಿ ಹೊತ್ತುಕೊಂಡು ಹೋಗಬೇಕು. ಇಂಥ ಸ್ಥಿತಿಯಲ್ಲಿದ್ದೇವೆ. ವಾಸ ಮಾಡಲು ಹುಲ್ಲಿನ ಸೂರು ಹಾಗೂ ಸುತ್ತಲು ಅಡಿಕೆ ಮರದ ಹಾಳೆಯ ತಟ್ಟಿಯನ್ನು ಕಟ್ಟಿಕೊಂಡಿದ್ದೇವೆ” ಎಂದು ಅವಲತ್ತುಕೊಂಡರು.

WhatsApp Image 2023 10 28 at 09.27.41

ಸ್ಥಳೀಯ ನಿವಾಸಿ ಗೋಪಾಲ್ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಈ ಕುಗ್ರಾಮದಲ್ಲಿ ವಾಸಿಸುತ್ತಿರುವ ಬುಡಕಟ್ಟು ಜನಾಂಗಕ್ಕೆ ಸೇರಿರುವ ನಾಲ್ಕು ಕುಟುಂಬಗಳು ಮೂಲಸೌಕರ್ಯಗಳಿಲ್ಲದೆ ಪರದಾಡುತ್ತಿವೆ. ನಮಗೆ ಮನೆ ನಿರ್ಮಿಸಿಕೊಳ್ಳಲು ಕೇಂದ್ರ ಸರ್ಕಾರದಿಂದ ಒಂದು ಯೋಜನೆ ಬಂದಿತ್ತು. ಆದರೆ ಈ ಗ್ರಾಮಕ್ಕೆ ಬಂದ ಕೇರಳ ಮೂಲದ ಒಬ್ಬ ವ್ಯಕ್ತಿ ನಿಮಗೆ ಮನೆ ಕಟ್ಟಿಕೊಡುತ್ತೇನೆಂದು ಆಶ್ವಾಸನೆ ಕೊಟ್ಟು, ಇದ್ದ ಮನೆಯನ್ನೂ ಕೆಡವಿ ನಾಪತ್ತೆಯಾಗಿದ್ದಾನೆ” ಎಂದು ಹೇಳಿದರು.

WhatsApp Image 2023 10 28 at 09.27.46

ಸ್ಥಳೀಯ ನಿವಾಸಿಗಳು ಈ ದಿನ.ಕಾಮ್‌ನೊಂದಿಗೆ ಮಾತನಾಡಿ “ವೋಟ್‌ ಹಾಕಿಸಿಕೊಳ್ಳಲು ಮಾತ್ರ ಮತದಾರರ ಗುರುತಿನ ಚೀಟಿ(ವೋಟರ್ ಐಡಿ) ಕೊಟ್ಟಿದ್ದಾರೆ. ರಾಜಕೀಯ ನಡೆಸಲು ಅವರಿಗೆ ನಮ್ಮ ಮತ ಮಾತ್ರ ಬೇಕು. ಆದರೆ ನಮಗೆ ಸೌಲಭ್ಯಗಳನ್ನು ಮಾತ್ರ ಒದಗಿಸಿಲ್ಲ” ಎಂದು ನೋವನ್ನು ವ್ಯಕ್ತಪಡಿಸಿದರು.

ಇದನ್ನೂ ಓದಿದ್ದೀರಾ? ಚಿಕ್ಕಮಗಳೂರು | ಕೊಪ್ಪ-ಶೃಂಗೇರಿಯಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಸರಾಯಿ ದರ್ಬಾರ್

“ನಾವು ದಿನ ಕೂಲಿ ಮಾಡುವವರು. ಮನೆ, ರೇಷನ್ ಕಾರ್ಡ್, ವಿದ್ಯುತ್ ವ್ಯವಸ್ಥೆಯೂ ಇಲ್ಲ. ಈ ಸಂಬಂಧ ಮನವಿ ನೀಡಲು ಕಚೇರಿಗಳಿಗೆ ಹೋದರೆ ಅಲ್ಲಿ ಅಧಿಕಾರಿಗಳೇ ಇರುವುದಿಲ್ಲ. ಇಂತಹ ದುಃಸ್ಥತಿಯಲ್ಲಿ ನಾವು ವಾಸಿಸುತ್ತಿದ್ದೇವೆ” ಎಂದು ಬೇಸರ ವ್ಯಕ್ತಪಡಿಸಿದರು.

WhatsApp Image 2023 10 28 at 09.27.43

“ಮುಗ್ಧ ಜನಗಳೇ ಇರೋದರಿಂದ ಇವರಿಗೆ, ಮನೆ, ರೇಷನ್ ಕಾರ್ಡ್ ಸೇರಿದಂತೆ ಓಡಾಟಕ್ಕೂ ಸರಿಯಾದ ರಸ್ತೆ ಇಲ್ಲ. ಹಿರಿಯರಿಗೆ ವೃದ್ಧಾಪ್ಯ ಪಿಂಚಣಿಯೂ ಬರುತ್ತಿಲ್ಲ. ಹಲವು ಬಾರಿ ಮನವಿ ಕೊಟ್ಟರು ಕೂಡ ಅದಕ್ಕೆ ಸ್ಪಂದಿಸದ ಅಧಿಕಾರಿಗಳು ಇವತ್ತು ಬನ್ನಿ ನಾಳೆ ಬನ್ನಿ ಎಂದು ಉದಾಸೀನದ ಮಾತುಗಳನ್ನಾಡುತ್ತಾರೆ” ಎಂದು ಆ ಗ್ರಾಮಕ್ಕೆ ರೇಷನ್ ತಂದು ಕೊಟ್ಟು ಸಹಾಯ ಮಾಡುತ್ತಿರುವ ನವೀನ್ ಅವರು ಈ ದಿನ.ಕಾಮ್‌ಗೆ ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಗಿರಿಜಾ ಎಸ್‌ ಜಿ
ಗಿರಿಜಾ ಎಸ್‌ ಜಿ
ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ, ಮಹಿಳಾ ಪರ ಹೋರಾಟಗಾರ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...