ಲಿಂಗತ್ವ ಅಲ್ಪ ಸಂಖ್ಯಾತರ ಹಕ್ಕುಗಳಿಗಾಗಿ ಸಾರ್ವಜನಿಕ ಸಭೆ | ಸಮಾನ ಮನಸ್ಕ ಸಂಘಟನೆಗಳಿಂದ ಚಿಕ್ಕಮಗಳೂರು ನಗರದಲ್ಲಿ ವಿವಿಧ ಸಮಾನ ಮನಸ್ಕ ಸಂಘಟನೆಗಳಿಂದ ರಾಜ್ಯದಲ್ಲಿ ಲಿಂಗತ್ವ ಅಲ್ಪ ಸಂಖ್ಯಾತರ ಹಕ್ಕುಗಳಿಗಾಗಿ ಹಾಗೂ ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಲ್ಲಿನ ಮೂಡಿಗೆರೆ ರಸ್ತೆಯಲ್ಲಿರುವ ಬೋಳರಾಮೇಶ್ವರ ದೇವಸ್ಥಾನದ ಹತ್ತಿರದ ಸರ್ಕಾರಿ ನೌಕರರ ಭವನದಲ್ಲಿ ನಾಳೆ (ಮಾ.11) ಸಾರ್ವಜನಿಕ ಸಭೆ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
ಸ್ವಾಭಿಮಾನ ನಡಿಗೆ : “ನಾವು ಬದುಕಿದ್ದೇವೆ ಅನ್ಯಾಯದ ವಿರುದ್ಧ ಪ್ರತಿರೋಧಿಸುತ್ತವೆ ಅದಕ್ಕೆ ಹೆಮ್ಮೆಯಿಂದ ನಡೆಯುತ್ತಿದ್ದೇವೆ, ” ಸ್ಟೋನಾಲ್ ದಂಗೆ” ದಿನದ ನೆನಪಿಗಾಗಿ ಪೂರ್ವಾಹ್ನ 9:30 ಗಂಟೆಗೆ ಚಿಕ್ಕಮಗಳೂರಿನ ಅಜಾದ್ ಪಾರ್ಕ್ನಿಂದ ಆರಂಭಗೊಂಡು,
ಸರ್ಕಾರಿ ನೌಕರರ ಭವನದವರೆಗೆ ಸ್ವಾಭಿಮಾನ ನಡಿಗೆ ಸಾಗಲಿದೆ ಎಂದು ಪ್ರಕಟನೆ ತಿಳಿಸಿದೆ.
ಇದನ್ನು ಓದಿದ್ದೀರಾ?ಚಿಕ್ಕಮಗಳೂರು | ಬಾಬಾ ಬುಡನ್ ಗಿರಿ: ಜಾತ್ಯತೀತ ಉರುಸ್ ಆಚರಣೆ ಅವಕಾಶ ನೀಡದ ಸರ್ಕಾರ ವಿರುದ್ಧ ಮಾ.5ಕ್ಕೆ ಪ್ರತಿಭಟನೆ
2026 – 27ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಲಿಂಗತ್ವ ಮತ್ತು ಲೈಂಗಿಕ ಅಲ್ಪ ಸಂಖ್ಯಾತರ ಅಭಿವೃದ್ಧಿಗಾಗಿ ಯಾವುದೇ ಹೊಸ ಅನುದಾನ ಅಥವಾ ಸಮಗ್ರ ಕಾರ್ಯಕ್ರಮವನ್ನು ಘೋಷಿಸದೇ ಸರಕಾರ ಸಂಪೂರ್ಣ ನಿರ್ಲಕ್ಷ್ಯ ತೋರಿಸಲಾಗಿದೆ ಎಂದು ಸಂಘಟಕರ ಆರೋಪವಾಗಿದೆ.





