ಚಿಕ್ಕಮಗಳೂರು | ನಿಫಾ ಭೀತಿ; ಕೇರಳದಿಂದ ಬರುವ ಪ್ರವಾಸಿಗರಿಗೆ ನಿರ್ಬಂಧ

Date:

ಕೇರಳದಲ್ಲಿ ನಿಫಾ ವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ‌ ವೈರಸ್ ಹರಡುವುದನ್ನು ತಡೆಯಲು ಚಿಕ್ಕಮಗಳೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಸಾರ್ವಜನಿಕ ಆಸ್ಪತ್ರೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿವೆ.

ಮಲೆನಾಡು ಪ್ರದೇಶವು ಕರಾವಳಿ ಜಿಲ್ಲೆಗೆ ಹೊಂದಿಕೊಂಡಿರುವುದರಿಂದ ನಿಫಾ ವೈರಸ್ ಭೀತಿ ಜಿಲ್ಲೆಯಲ್ಲಿ ಹೆಚ್ಚಾಗಿದ್ದು, ಕೇರಳದಿಂದ ಪ್ರವಾಸಿಗರ ಪ್ರವೇಶವನ್ನು ಜಿಲ್ಲಾಡಳಿತ ನಿಷೇಧಿಸಿದೆ. ಈ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ನೀಡದಂತೆ ರೆಸಾರ್ಟ್‌, ಹೋಂಸ್ಟೇಗಳು ಮತ್ತು ಹೋಟೆಲ್‌ ಮಾಲೀಕರಿಗೆ ಸೂಚಿಸಲಾಗಿದೆ.

“ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯನಗಿರಿ ಬೆಟ್ಟ ಶ್ರೇಣಿಗಳು ಆಕರ್ಷಣೀಯ ಪ್ರದೇಶಗಳಗಿರುವುದರಿಂದ ಹಲವು ರಾಜ್ಯಗಳಿಂದ ಪ್ರವಾಸಿಗರು ಭೇಟಿ ನೀಡುತ್ತಾರೆ. ಪ್ಯಾಕೇಜ್ ಏಜೆನ್ಸಿಗಳ ಮೂಲಕ ಹೆಚ್ಚಿನ ಸಂಖ್ಯೆಯ ಜನರು ಜಿಲ್ಲೆಗೆ ಬರುತ್ತಿದ್ದಾರೆ. ಮತ್ತೊಂದೆಡೆ, ಬಾವಲಿಗಳು ವೈರಸ್‌ನ ವಾಹಕಗಳಾಗಿರುವುದರಿಂದ, ಸ್ಥಳೀಯ ನಿವಾಸಿಗಳು ಮರಗಳಲ್ಲಿ ಗೂಡುಕಟ್ಟುವ ಬಾವಲಿಗಳನ್ನು ಸ್ಥಳಾಂತರಿಸುವಂತೆ ಆಡಳಿತವನ್ನು ಒತ್ತಾಯಿಸಿದ್ದಾರೆ. ಈ ಹಿನ್ನಲೆಯಲ್ಲಿ ನಾಗರಿಕರ ಮನಸ್ಸಿನಲ್ಲಿರುವ ಭಯವನ್ನು ಹೋಗಲಾಡಿಸಿ, ವೈರಸ್‌ ಹರಡುವುದನ್ನು ತಡೆಗಟ್ಟುವ ಕ್ರಮ ತೆಗೆದುಕೊಳ್ಳುವಂತೆ ಸ್ಥಳೀಯರಿಗೆ ಜಾಗೃತಿ ಮೂಡಿಸಬೇಕು” ಎಂದು ಸಾಮಾಜಿಕ ಕಾರ್ಯಕರ್ತ ಸುಂದರೇಶ್ ಜಿಲ್ಲಾಡಳಿತಕ್ಕೆ ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ನಿಫಾ ವೈರಸ್‌ ಆತಂಕ; ರೋಗ ಲಕ್ಷಣ, ತಡೆಗಟ್ಟುವ ವಿಧಾನದ ಮಾಹಿತಿ

“ಜಿಲ್ಲೆಯಲ್ಲಿ ಯಾವುದೇ ಪ್ರಕರಣಗಳು ವರದಿಯಾಗದ ಕಾರಣ ಆತಂಕ ಪಡುವ ಅಗತ್ಯವಿಲ್ಲ. ಆದರೆ ಮುನ್ನೆಚ್ಚರಿಕೆ ಕ್ರಮವಾಗಿ ವೆಂಟಿಲೇಟರ್ ಮತ್ತು ಆಮ್ಲಜನಕ ಸೌಲಭ್ಯ ಹೊಂದಿರುವ 6 ಹಾಸಿಗೆಗಳನ್ನು ವಿಶೇಷ ವಾರ್ಡ್‌ ಸಿದ್ಧಪಡಿಸಲಾಗಿದೆ” ಎಂದು ಮಲ್ಲೇಗೌಡ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಮೋಹನ್ ಕುಮಾರ್ ತಿಳಿಸಿದ್ದಾರೆ.

ಬಾವಲಿಗಳು ಅರ್ಧ ಕಚ್ಚಿದ ಹಣ್ಣುಗಳನ್ನು ತಿನ್ನದಂತೆ ಸಾರ್ವಜನಿಕರಿಗೆ ಸಲಹೆ ನೀಡಿದ ಅವರು, ಪ್ರಾಥಮಿಕ ಚಿಕಿತ್ಸೆ ತೆಗೆದುಕೊಳ್ಳುವಂತೆ ಸ್ಥಳೀಯರಿಗೆ ಸಲಹೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಉರುಸ್ ವಿವಾದ; ಹೋರಾಟಗಾರರನ್ನು ಬಂಧಿಸಿದ್ದನ್ನು ಖಂಡಿಸುತ್ತೇನೆ; ಟಿ.ಡಿ ರಾಜೇಗೌಡ

ಕಾಂಗ್ರೆಸ್ ಸರ್ಕಾರ ವಿರುದ್ಧ ಜಾತ್ಯತೀತ ತಿಲಾಂಜಲಿ ನೀಡುತ್ತಿದೆ ಎಂದು ಚಿಕ್ಕಮಗಳೂರು ನಗರದಲ್ಲಿ...

ಕಡೂರು | ಒಳಮೀಸಲಾತಿ ವರ್ಗೀಕರಣ; ಸದನದಲ್ಲಿ ಪ್ರಸ್ತಾಪಿಸಬೇಕು;ಮಾದಿಗ ಮೀಸಲಾತಿ ಹೋರಾಟ ಸಮಿತಿ 

ಮಾದಿಗ ಸಮಾಜದ ಒಳಮೀಸಲಾತಿ ವರ್ಗೀಕರಣ ಹುದ್ದೆ ಭರ್ತಿಯಲ್ಲಿ ಅನ್ಯಾಯವಾಗುತ್ತಿರುವ ಬಗ್ಗೆ ಸದನದಲ್ಲಿ...

ಬಾಬಾ ಬುಡನ್‌ಗಿರಿ ʼಉರುಸ್‌ʼ ವಿವಾದ; ಸರ್ಕಾರದ ವಿರುದ್ಧ ಕಾವೇರಿದ ಪ್ರತಿಭಟನೆ

ಚಿಕ್ಕಮಗಳೂರು ಜಿಲ್ಲೆಯ ಪಶ್ಚಿಮ ಘಟ್ಟಗಳಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ಬಾಬಾ ಬುಡನ್‌ಗಿರಿ....