ಚಿಕ್ಕಮಗಳೂರು | ಪೊಲೀಸ್-ವಕೀಲರ ಗಲಾಟೆ ಪ್ರಕರಣ; ವಕೀಲರ ವಿರುದ್ಧ 4 ಎಫ್‌ಐಆರ್‌

Date:

ಯುವ ವಕೀಲ ಹೆಲ್ಮೆಟ್ ಧರಿಸದ ಕಾರಣ ಪೊಲೀಸರು ಹಲ್ಲೆ ನಡೆಸಿದ್ದನ್ನು ಖಂಡಿಸಿ, ಚಿಕ್ಕಮಗಳೂರು ನಗರ ಠಾಣೆಯಲ್ಲಿ ವಕೀಲರು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ವಕೀಲರ ವಿರುದ್ಧ ನಾಲ್ಕು ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ.

ಚಿಕ್ಕಮಗಳೂರಿನಲ್ಲಿ ಹೆಲ್ಮೆಟ್ ಧರಿಸದ ಕಾರಣಕ್ಕೆ ಪೊಲೀಸರು ವಕೀಲರೊಬ್ಬರನ್ನು ಥಳಿಸಿದ್ದರು. ಈ ಕ್ರಮ ಖಂಡಿಸಿ ವಕೀಲರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದರು. ಅಲ್ಲದೇ ಹೈಕೋರ್ಟ್‌ ಕಲಾಪ ಬಹಿಷ್ಕಾರಕ್ಕೂ ಮುಂದಾಗಿದ್ದರು.

ಹೈಕೋರ್ಟ್ ಸಿಜೆ, ವಕೀಲರನ್ನು ಮನವೊಲಿಸಿದ್ದು, ಕಲಾಪ ಬಹಿಷ್ಕರಿಸುವುದು ಸರಿಯಲ್ಲ ಎಂಬುದಾಗಿ ಹೇಳುವ ಮೂಲಕ, ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಲು ಸೂಚಿಸಿತ್ತು. ಈ ಹಿನ್ನಲೆಯಲ್ಲಿ 6 ಪೊಲೀಸರ ವಿರುದ್ಧ ಎಫ್ಐಆರ್ ದಾಖಲಾಗಿ, ಆ ಬಳಿಕ ಅವರನ್ನು ಅಮಾನತು ಕೂಡ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸರನ್ನು ಅಮಾನತುಗೊಳಿಸಿದ ಕ್ರಮ ಖಂಡಿಸಿ ರಾತ್ರೋ ರಾತ್ರಿ ಚಿಕ್ಕಮಗಳೂರು ಜಿಲ್ಲೆಯ ಹನುಮಂತಪ್ಪ ಸರ್ಕಲ್​​ನಲ್ಲಿ ಪೊಲೀಸರು ಮತ್ತು ಅವರ ಕುಟುಂಬಸ್ಥರು ಪ್ರತಿಭಟನೆ ನಡೆಸಿಸಿದ್ದು, ಹಲ್ಲೆ ನಡೆಸಿದವರ ವಿರುದ್ಧ ಎಫ್​ಐಆರ್​ ದಾಖಲಿಸುವಂತೆ ಒತ್ತಾಯಿಸಿದರು. ಈ ಪ್ರತಿಭಟನಾಕಾರರನ್ನು ಮನವೊಲಿಸಿದ ಎಸ್‌ಪಿ, ಅವರ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು. ಹೀಗಾಗಿ ತಮ್ಮ ಪ್ರತಿಭಟನೆಯನ್ನು ಹಿಂಪಡೆದಿದ್ದರು.

ಇದೀಗ ಚಿಕ್ಕಮಗಳೂರು ಜಿಲ್ಲಾ ಬಾರ್ ಅಸೋಸಿಯೇಷನ್ ಅಧ್ಯಕ್ಷ ಸುಧಾಕರ್, ವಕೀಲ ಪ್ರೀತಮ್ ಸೇರಿದಂತೆ 15 ಮಂದಿ ವಕೀಲರ ವಿರುದ್ಧ ಸೆಕ್ಷನ್​ 503, 406, 353, 149 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನಾಲ್ಕು ರಾಜ್ಯಗಳಲ್ಲಿ ಫಲಿತಾಂಶ – ಬಿಜೆಪಿ ಮುನ್ನಡೆ: ವಿಪಕ್ಷ ನಾಯಕ ಆರ್ ಅಶೋಕ್

ಈ ಪ್ರತಿಭಟನೆಯಲ್ಲಿ ಪೋಲಿಸ್ ಸಂಘ ಸ್ಥಾಪನೆಯ ಕೂಗು ಕೇಳಿಬಂದಿದೆ. ಪೊಲೀಸ್ ಸಿಬ್ಬಂದಿಗಳು ನಮಗೂ ಸಂಘ ಬೇಕು ಎಂದು ಚರ್ಚೆ ನಡೆಸಿದರು. ಪೋಲಿಸ್ ಸಂಘ ಸ್ಥಾಪನೆಗೆ ಈ ಹಿಂದೆ ಹಿರಿಯ ಅಧಿಕಾರಿಗಳಿಂದ ಆಕ್ಷೇಪ ವ್ಯಕ್ತವಾಗಿತ್ತು. ಡಿಸೆಂಬರ್‌ 02ರ ರಾತ್ರಿ ನಡೆದ ಪ್ರತಿಭಟನೆಯಲ್ಲಿ ಪೊಲೀಸ್ ಸಂಘ ಸ್ಥಾಪನೆಗೆ ಸಿದ್ದತೆ ನಡೆದಿದ್ದು, ಸಂಘವನ್ನು ರಿಜಿಸ್ಟರ್ ಮಾಡಿಸುವ ಬಗ್ಗೆ ಚರ್ಚೆ ನಡೆದಿದೆ. ಸೋಮವಾರ ರಿಜಿಸ್ಟರ್ ಮಾಡಿಸುವ ಸಾಧ್ಯತೆಯೂ ಇದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...