ಚಿಕ್ಕಮಗಳೂರು | ಗೇರುಮರಡಿಯಲ್ಲಿ ಗೊಲ್ಲರಹಟ್ಟಿಯ ದೇವಾಲಯ ಪ್ರವೇಶಿಸಿದ ದಲಿತರು

Date:

ಗೇರುಮರಡಿಯಲ್ಲಿ ಗೊಲ್ಲ ಸಮುದಾಯದ ವಾಸಿಸುವ ಬೀದಿಯಲ್ಲಿರುವ ದೇವಾಲಯದ ಬೀಗ ತೆಗೆದು, ದಲಿತರು ದೇವಾಲಯದ ಒಳಗೆ ಪ್ರವೇಶಿಸಿದ್ದಾರೆ. ಗುರುವಾರ, ಪೊಲೀಸರ ಭದ್ರತೆಯಲ್ಲಿ ದಲಿತ ಮುಖಂಡರು ದೇವಾಲಯದ ಬಾಗಿಲು ತೆರೆದಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಗೇರುಮರಡಿಯಲ್ಲಿ ಗೊಲ್ಲ ಸಮುದಾಯದ ಬೀದಿಗೆ ಬಂದಿದ್ದಕ್ಕೆ ದಲಿತ ಯುವಕನ ಮೇಲೆ ಹಲ್ಲೆ ನಡೆದಿತ್ತು. ಅಲ್ಲದೆ, ದಲಿತರು ತಮ್ಮ ಬೀದಿಗೆ ಪ್ರವೇಶಿಸಿದ್ದರಿಂದ ಅಶುದ್ಧವಾಗಿದೆ ಎಂದು ಗ್ರಾಮದ ರಂಗನಾಥ ಸ್ವಾಮಿ ದೇವಾಲಯಕ್ಕೆ ಗೊಲ್ಲ ಸಮುದಾಯದ ಮುಖಂಡರು ಬೀಗ ಹಾಕಿದ್ದರು. ಇದು, ದಲಿತರ ಮೇಲಿನ ದೌರ್ಜನ್ಯದ ಪರಮಾವಧಿಯಾಗಿ ಕಾಣಿಸಿಕೊಂಡಿತ್ತು.

ಘಟನೆಯಿಂದಾಗಿ ಗೊಲ್ಲ ಸಮುದಾಯದ ವಿರುದ್ಧ ತರೀಕೆರೆಯಲ್ಲಿ ದಲಿತ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದ್ದರು. ಬುಧವಾರ ಪೊಲೀಸ್ ಭದ್ರತೆಯಲ್ಲಿ ಗ್ರಾಮಕ್ಕೆ ಬಂದ ದಲಿತ ಮುಖಂಡರು, ಗ್ರಾಮದ ರಂಗನಾಥ ಸ್ವಾಮಿ ದೇವಸ್ಥಾನದ ಬಾಗಿಲು ತೆಗೆದು, ಪೂಜೆ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನವರಿ 1ರಂದು ಗ್ರಾಮದಲ್ಲಿ ಹಳೆ ಮನೆ ಕೆಡವುವ ಕೆಲಸಕ್ಕೆ ದಲಿತ ಯುವಕ ಮಾರುತಿ ಬಂದಿದ್ದರು. ಈ ವೇಳೆ, ಕೇಬಲ್ ತಂತಿಗೆ ಜೆಸಿಬಿ ತಗುಲಿ ತಂತಿ ತುಂಡಾಗಿತ್ತು. ಇದನ್ನೇ ನೆಪವಾಗಿಟ್ಟುಕೊಂಡು ಗೊಲ್ಲ ಸಮುದಾಯದ ಗುಂಪೊಂದು ಮಾರುತಿ ಮೆಲೆ ಹಲ್ಲೆ ನಡೆಸಿ, ಜೇಬಿನಲ್ಲಿದ್ದ ಹಣವನ್ನು ಕಿತ್ತುಕೊಂಡಿದ್ದರು. ಮಾತ್ರವಲ್ಲದೆ, ಗ್ರಾಮಕ್ಕೆ ಬಂದಿದ್ದಕ್ಕಾಗಿ 1 ಲಕ್ಷ ರೂ. ದಂಡ ಪಾವತಿಸುವಂತೆ ಒತ್ತಾಯಿಸಿದ್ದರು.

ಪ್ರಕರಣ ಸಂಬಂಧ ತರೀಕೆರೆ ಪೊಲೀಸ್‌ ಠಾಣೆಯಲ್ಲಿ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ 15 ಮಂದಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮೌಢ್ಯದಲ್ಲಿ ಬದುಕುತ್ತಿದೆ ಗೊಲ್ಲ ಸಮುದಾಯ

ಗೊಲ್ಲ ಸಮುದಾಯದಲ್ಲಿ ಮೂಢನಂಬಿಕೆ ಮನೆ ಮಾಡಿದೆ. ಹಲವಾರು ಅನಿಷ್ಠ ಪದ್ದತಿಗಳನ್ನು ಇಂದಿಗೂ ಸಮುದಾಯ ಆಚರಿಸುತ್ತಿದೆ. ಇದರಲ್ಲಿ ಸಮುದಾಯ ಹೆಣ್ಣು ಮಕ್ಕಳ ಮೇಲಿನ ಶೋಷಣೆಯನ್ನೂ ಹೇಳತೀರದು. ಹೆಣ್ಣು ಮಕ್ಕಳು ಪ್ರೌಢಾವಸ್ಥೆಗೆ ಬಂದ ಸಮಯದಲ್ಲಿ, ಮುಟ್ಟಿನ ಸಂದರ್ಭದಲ್ಲಿ ಹಾಗೂ ಮಗುವಿಗೆ ಜನ್ಮವಿತ್ತ ಸಮಯದಲ್ಲಿ ಮಹಿಳೆಯರನ್ನು ಊರಿನ ಹೊರಡೆ ಗುಡಿಸಲಿನಲ್ಲಿ ಇರಿಸಲಾಗುತ್ತದೆ. ಹೆಣ್ಣು ಮಕ್ಕಳಲ್ಲಾಗುವ ನೈಸರ್ಗಿಕ ಕ್ರಿಯೆಯನ್ನು ಸಮುದಾಯವು ಅಶುದ್ಧವೆಂದು ಭಾವಿಸುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...