ಚಿಕ್ಕಮಗಳೂರು | ಇಸ್ರೇಲ್ ನರಮೇಧ: ರಾಜ್ಯ ಸರ್ಕಾರದ ನಡೆಗೆ ಕರ್ನಾಟಕ ಜನಶಕ್ತಿ ಖಂಡನೆ

Date:

ಜಗತ್ತಿನಾದ್ಯಂತ ನಾಗರಿಕ ಸಮಾಜದಲ್ಲಿ ಇಂದು ಚರ್ಚೆಯಾಗುತ್ತಿರುವುದು ಗಾಝಾ ಪಟ್ಟಿಯಲ್ಲಿ ಇಸ್ರೇಲ್ ನಡೆಸುತ್ತಿರುವ ನರಮೇಧ, ನಾಗರಿಕರ ಮೇಲೆ ದಾಳಿ ಮಾಡಿರುವುದು ಅತ್ಯಂತ ಖಂಡನೀಯ. ಕೆಲವು ರಾಜ್ಯಗಳಲ್ಲಿ ಅಂಥ ಚರ್ಚೆಗಳಿಗೆ, ಪ್ರತಿಭಟನೆಗಳಿಗೆ ಅನುಮತಿಯನ್ನು ನಿರಾಕರಿಸಲಾಗುತ್ತಿದೆ ಎಂದು ಕರ್ನಾಟಕ ಜನಶಕ್ತಿ ಬೇಸರ ವ್ಯಕ್ತಪಡಿಸಿದೆ.

ಚಿಕ್ಕಮಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ಜನಶಕ್ತಿ ರಾಜ್ಯ ಕಾರ್ಯದರ್ಶಿಯವರಾದ ಗೌಸ್ ಮೋಹಿದ್ದಿನ್, ಇಸ್ರೇಲ್ ಸರ್ಕಾರ ಪ್ರತಿದಿನವು ನೂರಾರು ಪಾಲಸ್ತೀನೀಯರನ್ನು ಕೊಲ್ಲುತ್ತಿದೆ. ಅವರಲ್ಲಿ ಹೆಚ್ಚು ಜನ ಮಕ್ಕಳು. ತನ್ನ ಹಠಮಾರಿತನವನ್ನೇ ದೊಡ್ಡ ಗಂಟಲಿನಿಂದ ಸಮರ್ಥಿಸಿಕೊಳ್ಳುತ್ತಿರುವ ಆ ದೇಶ, ಕಳೆದ 75ವರ್ಷಗಳಿಂದ ತಾನು ಪಾಲಸ್ತೀನೀಯರ ಮೇಲೆ ನಡೆಸುತ್ತಲೇ ಇರುವ ದೌರ್ಜನ್ಯಗಳನ್ನು ಮರೆಮಾಚುತ್ತಿದೆ. ಇಂಥ ಅಮಾನವೀಯ ನಡವಳಿಕೆಗಳನ್ನು ಜಗತ್ತಿನ ಹಲವು ದೇಶಗಳ, ಜನ ಖಂಡಿಸಿದ್ದಾರೆ.

ನಮ್ಮ ದೇಶದಲ್ಲಿಯೂ ಅದರ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಆದರೆ, ಕೆಲವು ರಾಜ್ಯಗಳಲ್ಲಿ ಅಂಥ ಚರ್ಚೆಗಳಿಗೆ ಪ್ರತಿಭಟನೆಗಳಿಗೆ ಅನುಮತಿಯನ್ನು ನಿರಾಕರಿಸಲಾಗುತ್ತಿದೆ. ಆಘಾತಕಾರಿ ವಿಷಯವೇನೆಂದರೆ, ಕರ್ನಾಟಕವೂ ಅಂಥ ರಾಜ್ಯವೆನ್ನುವುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದ ರಾಜಧಾನಿಯೂ ಒಳಗೊಂಡಂತೆ ಹಲವು ಪ್ರದೇಶಗಳಲ್ಲಿ ಈ ಸಮಸ್ಯೆಯ ಬಗ್ಗೆ ಬಹಿರಂಗವಾಗಿ ಚರ್ಚೆಸಲು, ಪ್ರತಿಭಟಿಸಲು ಪೊಲೀಸರು ಅಡ್ಡಿಪಡಿಸುತ್ತಿದ್ದಾರೆ. ಸಭಾಂಗಣದ ಒಳಗಿನ ಕಾರ್ಯಕ್ರಮಗಳನ್ನು ನಡೆಯಲು ಬಿಡುತ್ತಿಲ್ಲ. ಇಂಥ ಮನೋಭಾವವನ್ನೇ ಸರ್ವಾಧಿಕಾರಿ ಧೋರಣೆ ಎಂದು ಕರೆಯಬೇಕಾಗಿದೆ.

ಕೆಲವೇ ತಿಂಗಳುಗಳ ಹಿಂದೆ ಇಲ್ಲಿನ ಜನ ತನ್ನ ಕೋಮುವಾದಿ ನೀತಿ ಜತೆಗೆ ಸರ್ವಾಧಿಕಾರಿ ಧೋರಣೆಗೂ ಕುಖ್ಯಾತವಾಗಿದ್ದ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಿ ಕಾಂಗ್ರೆಸ್‌ ಸರ್ಕಾರವನ್ನು ಅಸ್ತಿತ್ವಕ್ಕೆ ತಂದರು. ಪ್ರಜೆಗಳ ಆಶೋತ್ತರಗಳಿಗೆ ಸ್ಪಂದಿಸಬೇಕಾದ ಕಾಂಗ್ರೆಸ್, ಅದೇ ಸರ್ವಾಧಿಕಾರಿ ಮನೋಭಾವವನ್ನು ಪ್ರದರ್ಶಿಸುತ್ತಿರುವುದು ಖಂಡನೀಯ.

ಕಾಂಗ್ರೆಸ್‌ ಕೇಂದ್ರ ನಾಯಕತ್ವ ಬಹಿರಂಗವಾಗಿಯೇ ಪಾಲಸ್ತೀನೀಯರ ಪರ ನಿಲುವು ತೆಗೆದುಕೊಂಡಿದೆ. ಆದರೂ, ಇಲ್ಲಿನ ಅದೇ ಪಕ್ಷದ ಸರ್ಕಾರ ತದ್ವಿರುದ್ಧವಾಗಿ ಬಿಜೆಪಿಗೆ ಹತ್ತಿರವಾಗಿ ನಿಂತಿದೆ. ತನ್ನದೇ ಪಕ್ಷದ ನೀತಿಗೆ ತಾವು ವಿರುದ್ಧವಾಗಿ ನಡೆಯುತ್ತಿರುವುದು ಅವರಿಗೆ ತಿಳಿಯುತ್ತಿಲ್ಲವೆ ಎಂದು ಅಸಮಾಧಾನ ಹೊರಹಾಕಿದರು

ಈ ವಿದ್ಯಮಾನಗಳು ಮುಖ್ಯಮಂತ್ರಿ ಮತ್ತು ಗೃಹಮಂತ್ರಿಗಳ ಗಮನಕ್ಕೆ ಬಂದೇ ಇರುತ್ತವೆ. ಆದರೂ, ಅವರು ಇಂಥ ನೀತಿಯನ್ನು, ಪೊಲೀಸ್ ರಾಜ್ಯವನ್ನು ಮುಂದುವರೆಯಲು ಬಿಟ್ಟಿರುವುದೇಕೆ? ಬೆಂಗಳೂರಿನಲ್ಲಿ ಈಗಾಗಲೇ ಎಲ್ಲಾ ಪ್ರತಿಭಟನೆಗಳನ್ನು ಸ್ವಾತಂತ್ರ್ಯ ಉದ್ಯಾನಕ್ಕೆ ಸೀಮಿತಗೊಳಿಸಿರುವ ಪೊಲೀಸರ ಈ ನಡವಳಿಕೆ ಖಂಡನೀಯ.

ಆದ್ದರಿಂದ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಕಾಂಗ್ರೆಸ್ ಸರ್ಕಾರ ಎಚ್ಚೇತ್ತುಕೊಂಡು ಜನಸಾಮಾನ್ಯರ ಪ್ರತಿಭಟನೆಯ ಹೋರಾಟಗಳಿಗೆ ಕಡಿವಾಣ ಹಾಕುವುದಾದರೆ, ಮುಂದೆ ಬರುವ ಚುನಾವಣೆಯಲ್ಲಿ ತಕ್ಕ ಪಾಠವನ್ನ ಕಳಿಸುತ್ತಾರೆಂದು ಎಚ್ಚರಿಕೆ ನೀಡಿದರು.

ನೂರಾರು ಪುಟ್ಟ ಮಕ್ಕಳ ಜೀವ ಉಳಿಯಬೇಕು ಸಾವಿರಾರು ಸಂಖ್ಯೆಯಲ್ಲಿ ಈ ದಾಳಿಯಿಂದ ಜನರು ಸಾಯುತ್ತಿದ್ದಾರೆ ಈ ಕೂಡಲೇ ಸರ್ಕಾರ ಎಚ್ಚೆತ್ತಿಕೊಳ್ಳಕೊಂಡು ಹೋಗುತ್ತಿರುವ ಪ್ರಾಣಗಳನ್ನು ಉಳಿಸಬೇಕೆಂದು ಯುವ ಮುಖಂಡರಾದ ಅಜ್ಮತ್ ಪಾಷ ಹೇಳಿದರು.

ಸರ್ವಾಧಿಕಾರಿಯಾಗಿ ನಡೆದುಕೊಳ್ಳುತ್ತಿರುವ ಕಾಂಗ್ರೆಸ್ ಸರ್ಕಾರ. ಅಮಿತ್ ಷಾ ನಿರ್ದೇಶನ ಪಾಲಿಸುತ್ತಿರುವ ಗೃಹ ಸಚಿವಾಲಯ. ಜಾಣ ಕಿವುಡು ಪ್ರದರ್ಶಿಸುತ್ತಿದ್ದಾರಾ? ಸಿದ್ದರಾಮಯ್ಯನವರಿಗೆ ಇದು ಕಿವಿಮಾತು ಎಂದು ಸುದ್ದಿಗೋಷ್ಠಿಯಲ್ಲಿ ಗೌಸ್ ಮೊಹಿದ್ದೀನ್ ಕಿಡಿಯಾದರು.

ಸುದ್ದಿ ಗೋಷ್ಠಿಯಲ್ಲಿ  ಗಣೇಶ್, ಮೋಹನ್, ಅಜ್ಮತ್ ಪಾಷ, ಹಸನಬ್ಬ, ಗೋವಿಂದೇಗೌಡ, ಪುಟ್ಟಸ್ವಾಮಿ ಇನ್ನಿತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...