ಚಿಕ್ಕಮಗಳೂರು | ಹೊಸ ಮದ್ಯದಂಗಡಿ ತೆರೆಯಲು ಅನುಮತಿ ನೀಡುವುದನ್ನು ಖಂಡಿಸಿ ಪ್ರತಿಭಟನೆ

Date:

ಶಾಲೆಗಳು ತೆರೆಯಬೇಕಾದ ಸ್ಥಳಗಳಲ್ಲಿ ನಮ್ಮನಾಳುವ ಸರ್ಕಾರವೇ ಸಾರಾಯಿ ಅಂಗಡಿಗಳನ್ನು ತೆರೆಯಲು ಅನುಮತಿ ನೀಡುತ್ತಿದೆ. ಇದರಿಂದ ನಮ್ಮ ಸಂಸಾರ ಹಾಳಾಗುತ್ತಿವೆ ಎಂದು ಸಾರಾಯಿ ವಿರೋಧಿ ಹೋರಾಟ ಸಮಿತಿಯ ಮಹಿಳೆಯರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

1,000 ಹೊಸ ಮದ್ಯದಂಗಡಿ ತೆರೆಯಲು ಪರವಾನಗಿ ನೀಡುವುದಾಗಿ ಸರ್ಕಾರ ಹೇಳಿದೆ. ಸರ್ಕಾರದ ನಡೆಯನ್ನು ಖಂಡಿಸಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಅಗಲಗಂಡಿ ಗ್ರಾಮದ ಮಹಿಳೆಯರು ಅ.19ರಂದು ಪ್ರತಿಭಟನೆ ನಡೆಸಿದ್ದಾರೆ.

“ಸಮೃದ್ಧವಾದ ಮಲೆನಾಡು ಮುಂದೆ ಮಧ್ಯವ್ಯಸನಿಗಳ ಬೀಡಾಗುತ್ತದೆ ಎಂಬ ಆತಂಕ ಇದೆ. ಗ್ರಾಮೀಣ ಬಾಗಗಳಲ್ಲಿ ಸರ್ಕಾರ ಶಾಲೆಗಳನ್ನು ತೆರೆಯಲು ಚಿಂತಿಸಬೇಕೆ ಹೊರತು, ಸಾರಾಯಿ ಅಂಗಡಿ ತೆಗೆಯುವುದನಲ್ಲ. ಇದರಿಂದ ನಮ್ಮ ಮನೆಗಳು ಹಾಳಾಗುತ್ತವೆ” ಎಂದು ಆಕ್ರೊಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಲೆನಾಡಿನ ಸುಂದರ ಈ ಸುಂದರ ಪರಿಸರದಲ್ಲಿ ಹಳ್ಳಿಯ ಜನರಿಗೆ ಬೇಕಾದ ಮೂಲ ಭೂತ ಸೌಕರ್ಯಗಳಾದ ರಸ್ತೆ, ವಿದ್ಯುತ್ ಮನೆಗಳಿಗೆ ಹಕ್ಕು ಪತ್ರ, ಸಾಗುವಳಿ ಜಮೀನಿಗೆ ಹಕ್ಕುಪತ್ರ, ಗ್ರಂಥಾಲಯಗಳು, ಶಾಲೆಗಳು ಹಾಗೂ ಆಸ್ಪತ್ರೆಗಳನ್ನು ತೆರೆಯುವ ಬಗ್ಗೆ ಯೋಜನೆ ರೂಪಿಸಬೇಕು. ಅದನ್ನು ಬಿಟ್ಟು ಇಂತಹ ಸಾರಾಯಿ ಅಂಗಡಿಗಳನ್ನು ತೆರೆಯುವುದರಿಂದ ಯುವಕರು ಮಧ್ಯಪಾನಕಕ್ಕೆ ತುತ್ತಾಗಿ ಜೀವನವನ್ನು ರೂಪಿಸಿಕ್ಕೊಳ್ಳಬೇಕಾದ ಸಮಯದಲ್ಲಿ ತಮ್ಮ ಜೀವನವನ್ನೇ ಅಂತ್ಯಗೊಳಿಸುತ್ತಿದ್ದಾರೆ. ಹಲವು ಜನ ಮಾನಸಿಕ ಅಶ್ವಸ್ಥರಾಗತೊಡಗಿದ್ದಾರೆ” ಎಂದು ಹೇಳಿದರು.

“ಮದ್ಯಪಾನ ಆರೋಗ್ಯಕ್ಕೆ ಹಾನಿಕಾರ ಎನ್ನುತ್ತ ದಿನಸಿ ಅಂಗಡಿಗಳಲ್ಲಿ, ಮನೆಗಳಲ್ಲಿ ಅಕ್ರಮ ಸಾರಾಯಿ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದೆ. ಇದರಿಂದ ಜನರನ್ನು ಮದ್ಯ ವ್ಯಸನಿಗಳಾಗುವಂತೆ ಪ್ರೇರೆಪಿಸುತ್ತಿದೆ. ಊರಿನ ಜನರ ಮಧ್ಯೆ ದ್ವೇಷದ ವಾತಾವರಣ ಸೃಷ್ಟಿಸುತ್ತಿದೆ. ಇದರಿಂದ ಮನೆ, ಮನಸ್ಸು, ಊರು ಎಲ್ಲವೂ ಕೂಡ ನೆಮ್ಮದಿ ಕಳೆದುಕೊಳ್ಳುವ ಪರಿಸ್ಥಿತಿ ಬಂದಿದೆ. ದುಡಿಯುವ ಜನರು ತಮ್ಮ ಆರೋಗ್ಯವನ್ನು ಹದಗೆಡಿಸಿಕ್ಕೊಳ್ಳುತ್ತಿದ್ದಾರೆ” ಎಂದು ತಿಳಿಸಿದರು.

“ಹಳ್ಳಿಗಳಲ್ಲಿ ಜನರಿಗೆ ಕೈಗೆಟುಕುವ ದರದಲ್ಲಿ ಹಾಗೂ ಅಕ್ರಮ ಮತ್ತು ಸಕ್ರಮ ಯಾವುದೇ ರೀತಿಯಿಂದಲೂ ಮದ್ಯ ಮಾರಾಟ ಮಾಡಬಾರದು. ಹೊಸದಾಗಿ ಎಮ್ಎಸ್ಐಎಲ್(MSIL)ಗಳಿಗೆ ಅನುಮತಿ ನೀಡಬಾರದು. ಇದರಿಂದ ಸರ್ಕಾರ ದುಡಿಯುವ ಜನರ ಪರವಾಗಿದೆ ಎಂದು ಸಾಬೀತು ಪಡಿಸಬೇಕಿದೆ” ಎಂದು ಒತ್ತಾಯಿಸಿದರು.

“ಯುವಜನತೆ ಮದ್ಯಪಾನದತ್ತ ಮುಖಮಾಡದೆ, ನಿಮ್ಮ ನಿಮ್ಮ ತಂದೆ, ತಾಯಿ ಅವರು ಮಾಡಿಟ್ಟ ಅಷ್ಟೋ ಇಷ್ಟೋ ಇರುವ ಜಮೀನನ್ನು ಉಳಿಸಿಕೊಂಡು ಅದರ ಉಳಿವಿಗಾಗಿ ಸರ್ಕಾರದ ಜನವಿರೋಧಿ ಕಾಯ್ದೆ, ಕಾನೂನುಗಳ ವಿರುದ್ಧ ಹೋರಾಡುತ್ತಾ ಸಾಮಾಜಿಕ ಜವಾಬ್ದಾರಿಯನ್ನು ಹೊರಬೇಕಿದೆ. ನಮ್ಮ ಹಳ್ಳಿಯಲ್ಲಿ ಯಾವುದೇ ಕಾರಣಕ್ಕೂ ಅಕ್ರಮವಿರಲಿ, ಸಕ್ರಮವಿರಲಿ ಮದ್ಯ ಮಾರಾಟಕ್ಕೆ ಒಕ್ಕೊರಲ ವಿರೋಧವಿದೆ” ಎಂದರು.

ಪ್ರತಿಭಟನಾ ವಿಷಯ ತಿಳಿದ ತಾಲೂಕಿನ ತಹಶೀಲ್ದಾರ್ ,ಅಬಕಾರಿ ಇಲಾಖೆಯ ಅಧಿಕಾರಿಗಳು ,ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮನವಿ ಪತ್ರ ಸ್ವೀಕರಿಸಿದರು. ಈ ವೇಳೆ, ಜನರ ಸಮಸ್ಯೆ ಬಗೆಹರಿಸುತ್ತೇವೆ ಎಂದು ಭರವಸೆ ನೀಡಿದರು.

ಪ್ರಜ್ಞಾವಂತ ನಾಗರಿಕರು, ರೈತಕಾರ್ಮಿಕರು, ಮಹಿಳೆಯರು, ದಲಿತ ಆದಿವಾಸಿಗಳು, ವಿದ್ಯಾರ್ಥಿ ಯುವ ಜನರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...