ಚಿಕ್ಕಮಗಳೂರು | ವಸತಿ ಶಾಲೆ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ; ಮೂವರ ಬಂಧನ

Date:

ವಸತಿ ಶಾಲೆ ವಿದ್ಯಾರ್ಥಿನಿಯರಿಗೆ ಮತ್ತು ಬರುವ ಔಷಧಿ ನೀಡಿ, ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ಬೆಳಕಿಗೆ ಬಂದಿದೆ. ದೌರ್ಜನ್ಯ ಪ್ರಕರಣಗಳಲ್ಲಿ ಸರ್ಕಾರಿ ಅಧಿಕಾರಿಗಳೇ ಭಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಮೂವರು ಆರೋಪಿಗಳನ್ನು ಕಡೂರು ಪೊಲೀಸರು ಬಂಧಿಸಿದ್ದಾರೆ.

ಕೂಡೂರಿನ ವಸತಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರಿಗೆ ಸರ್ಕಾರಿ ಅಧಿಕಾರಿಗಳು ಮತ್ತು ಬರುವ ಔಷಧಿ ನೀಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ವಸತಿ ಶಾಲೆಯ ಡಿ. ದರ್ಜೆ ನೌಕರ ಸುರೇಶ್, ಶೂಶ್ರುಷಕಿ ಚಂದನ ಮತ್ತು ಆಕೆಯ ಪ್ರಿಯಕರ ವಿನಯ್ ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಸುರೇಶ್ ವಿದ್ಯಾರ್ಥಿನಿಯರಿಗೆ ಪ್ಯಾರಾ ಮೆಡಿಕಲ್ ಕೋರ್ಸ್‌ ಕೊಡಿಸುತ್ತೇನೆಂದು ವಿದ್ಯಾರ್ಥಿಯರು ಮತ್ತು ಅವರ ಪೋಷಕರನ್ನು ನಂಬಿಸುತ್ತಿದ್ದ. ಬಳಿಕ, ಕೋರ್ಸ್‌ ಸೇರಲು ಒಪ್ಪುವ ವಿದ್ಯಾರ್ಥಿನಿಯರನ್ನು ಚಂದನಾ ಬಳಿ ಕಳಿಸುತ್ತಿದ್ದ. ಅಲ್ಲಿ, ಆಕೆಗೆ ಪಾನೀಯದಲ್ಲಿ ಮತ್ತು ಬರುವ ಔಷಧಿ ಬೆರೆಸಿ ವಿದ್ಯಾರ್ಥಿನಿಯರಿಗೆ ನೀಡುತ್ತಿದ್ದಳು. ಅರೆಪ್ರಜ್ಞಾವಸ್ಥೆಯಲ್ಲಿರುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಆರೋಪಿಗಳು ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು ಎಂದು ಆರೋಪಿಸಲಾಗಿದೆ. ಆರೋಪಿಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏನಿದು ಪ್ರಕರಣ?

ಕಡೂರು ತಾಲ್ಲೂಕಿನ ಅಂಚೆಚೋಮನಹಳ್ಳಿ ಗ್ರಾಮದಲ್ಲಿರುವ ವಸತಿ ಶಾಲೆಯ ಡಿ ಗ್ರೂಪ್‌ ನೌಕರ ಸುರೇಶ್‌, ಅದೇ ಗ್ರಾಮದ ಆರೋಗ್ಯ ಮತ್ತು ಕ್ಷೇತ್ರ ಕೇಂದ್ರದ ಎಎನ್‌ಎಂ ಚಂದನಾ ಹಾಗೂ ಆಕೆಯ ಪ್ರಿಯಕರ ವಿನಯ್ ಬಂಧಿತ ಆರೋಪಿಗಳಾಗಿದ್ದಾರೆ.

ವಿದ್ಯಾರ್ಥಿನಿಯರಿಗೆ ಪ್ಯಾರಾ ಮೆಡಿಕಲ್ ಕೋರ್ಸ್ ಪರೀಕ್ಷೆ ಬರೆಯಲು ಅವಕಾಶ ಕೊಡಿಸುತ್ತೇ ನೆ.ಪರೀಕ್ಷೆಯಲ್ಲಿ ಪಾಸಾದಲ್ಲಿ ಕೆಲಸ ಸಿಗುತ್ತದೆ ಎಂದು ಸುರೇಶ್ ನಂಬಿಸಿದ್ದ. ಪೋಷಕರೂ ಈತನ ಮಾತನ್ನು ನಂಬಿದ್ದರು. ಅಂಚೆಚೋಮನಹಳ್ಳಿ ಗ್ರಾಮದಲ್ಲಿರುವ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿ ಚಂದನಾ ಬಳಿ ಬಿಡುತ್ತಿದ್ದ. ಚಂದನಾ ಆರೋಗ್ಯ ಕೇಂದ್ರಕ್ಕೆ ಬರುವ ವಿದ್ಯಾರ್ಥಿನಿಯರನ್ನು ಪುಸಲಾಯಿಸಿ ರಾತ್ರಿ ವೇಳೆ ಅಲ್ಲೇ ಉಳಿಸಿಕೊಂಡು ಕಾಫಿ, ಟೀನಲ್ಲಿ ಮತ್ತು ಬರುವ ಔಷಧ ಮಿಶ್ರಣ ಮಾಡಿ ವಿದ್ಯಾರ್ಥಿನಿಯರಿಗೆ ನೀಡುತ್ತಿದ್ದಳು. ಅರೆಪ್ರಜ್ಞಾವಸ್ಥೆಯಲ್ಲಿರುವ ಹೆಣ್ಣುಮಕ್ಕಳ ಮೇಲೆ ಚಂದನಾ ಪ್ರಿಯಕರ ವಿನಯ್‌ಕುಮಾರ್‌ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಎಂಬುದು ಬಯಲಾಗಿದೆ.

ಆರೋಗ್ಯ ಕೇಂದ್ರಕ್ಕೆ ಹೆಣ್ಣುಮಕ್ಕಳು ಬಂದು ಹೋಗುತ್ತಿರುವುದನ್ನು ಗ್ರಾಮಸ್ಥರು ಗಮನಿಸಿದ್ದರು. ಅನುಮಾನ ಬಂದು ಪೊಲೀಸರಿಗೆ ದೂರು ನೀಡಿದ್ದರು. ಗ್ರಾಮಸ್ಥರಿಗೆ ಅನುಮಾನ ಬಂದಿರುವುದು ಗೊತ್ತಾಗುತ್ತಿದ್ದಂತೆ ಚಂದನಾ ಮತ್ತು ಡಿ ದರ್ಜೆ ನೌಕರ ಸುರೇಶ್ ನಾಪತ್ತೆಯಾಗಿದ್ದರು. ಬುಧವಾರ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಪ್ರಜ್ಞೆ ತಪ್ಪಿದ ಬಳಿಕ ವಿನಯ್‌ಕುಮಾರ್‌ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಎಂದು ಆರೋಪಿಗಳು ಒಪ್ಪಿಕೊಂಡಿರುವುದಾಗಿ ವರದಿಯಾಗಿದೆ.

ಎರಡು ಮೂರು ತಿಂಗಳಿಂದ ಈ ಕೃತ್ಯ ನಡೆಯುತ್ತಿದ್ದರೂ ವಿದ್ಯಾರ್ಥಿಯರು ಯಾರಲ್ಲಿಯೂ ಹೇಳಿಕೊಂಡಿರಲಿಲ್ಲ. ಭಯಗೊಂಡು ಸುಮ್ಮನಿದ್ದರು. ಆರೋಪಿ ಚಂದನಾ ಚನ್ನರಾಯಪಟ್ಟಣ ತಾಲ್ಲೂಕಿನ ನುಗ್ಗೇಹಳ್ಳಿ ಗ್ರಾಮದವಳಾಗಿದ್ದು, ಆಕೆಯ ಪ್ರಿಯಕರ ವಿನಯ್ ಕುಮಾರ್‌ ಸೊರಬ ತಾಲ್ಲೂಕಿನ ಆಲವಟ್ಟಿಯಲ್ಲಿ ಫ್ಯಾನ್ಸಿಸ್ಟೋರ್‌ ಮಾಲಿಕನಾಗಿದ್ದ ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ತರೀಕೆರೆ ವಿಭಾಗದ ಡಿವೈಎಸ್‌ಪಿ ಹಾಲಮೂರ್ತಿ ಪ್ರತಿಕ್ರಿಯಿಸಿ, “ವಸತಿ ಶಾಲೆಯ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಕೃತ್ಯ ತನಿಖೆಯಿಂದ ಬಹಿರಂಗವಾಗಿದೆ. ಆರೋಪಿಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಘಟನೆ ಸಂಬಂಧ ಸಮಗ್ರವಾಗಿ ತನಿಖೆ ನಡೆಸಲಾಗುತ್ತಿದ್ದು, ವಸತಿ ಶಾಲೆಯಲ್ಲಿನ ಕೆಲ ವಿದ್ಯಾರ್ಥಿನಿಯರ ಹೇಳಿಕೆ ಪಡೆಯಲಾಗಿದೆ. ಸಂತ್ರಸ್ತರು ಈ ಸಂಬಂಧ ಹೆಚ್ಚಿನ ಮಾಹಿತಿ, ದೂರು ನೀಡಿದ್ದಲ್ಲಿ ತನಿಖೆಗೆ ಸಹಕಾರ ಆಗಲಿದೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...