ದಾವಣಗೆರೆ | ಬೈಕ್ ಕೆಎಸ್ಆರ್ಟಿಸಿ ಬಸ್ ಅಪಘಾತ; ಸಾರಿಗೆ ಇಲಾಖೆ ಅಧೀಕ್ಷಕ ಸ್ಥಳದಲ್ಲಿ ದುರ್ಮರಣ

Date:

ಸಾರಿಗೆ ಕಚೇರಿಗೆ ಹೊಂಡಾ ಆಕ್ಟಿವಾ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ತಲೆಗೆ ತೀವ್ರ ಗಾಯಗಳಾಗಿ ಸಾರಿಗೆ ಕಛೇರಿ ಅಧೀಕ್ಷಕರೊಬ್ಬರು ಮೃತ ಪಟ್ಟ ಧಾರುಣ ಘಟನೆ ದಾವಣಗೆರೆ ರಿಂಗ್ ರಸ್ತೆಯಲ್ಲಿ ನಡೆದಿದೆ. ದುರ್ಮರಣ ಹೊಂದಿದ ದುರ್ದೈವಿ ಚಿಕ್ಕಮಗಳೂರು ಮೂಲದವರು ಎಂದು ತಿಳಿದು ಬಂದಿದೆ.

ದಾವಣಗೆರೆ ಆರ್ ಟಿ ಓ ಕಚೇರಿಯ ಸೂಪರಿಂಡೆಂಟ್ ತಿಪ್ಪೇಶಪ್ಪ ಮೃತ ಪಟ್ಟ ದುರ್ದೈವಿಯಾಗಿದ್ದು, ಅವರು ತೆರಳುತ್ತಿದ್ದ ಹೋಂಡಾ ಆಕ್ಟಿವಾ ಬೈಕ್ ಗೆ ಕೆಎಸ್ಆರ್ಟಿಸಿ ಬಸ್ ಗುದ್ದಿದ ಪರಿಣಾಮ, ಬಸ್ ನ ಹಿಂಬದಿ ಚಕ್ರವು ತಿಪ್ಪೇಶಪ್ಪನವರ ತಲೆಗೆ ಅಪ್ಪಳಿಸಿದ್ದರಿಂದ ಹೆಲ್ಮೆಟ್ ಧರಿಸಿದ್ದರೂ ಕೂಡ ತಲೆಗೆ ಬಲವಾದ ಹೊಡೆತ ಬಿದ್ದಿದ್ದು, ಹೆಲ್ಮೆಟ್ ನ ಒಳಗೆ ತಲೆ ನುಜ್ಜುಗುಜ್ಜಾಗಿ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲಿದ್ದಾರೆ ಮೃತಪಟ್ಟಿದ್ದಾರೆ.

1002465743
ಅಪಘಾತದಲ್ಲಿ ಮೃತಪಟ್ಟ ಸಾರಿಗೆ ಇಲಾಖೆ ಅಧೀಕ್ಷಕ ತಿಪ್ಪೇಶಪ್ಪ.

ಆರ್ ಟಿ ಓ ಅಧೀಕ್ಷಕ ತಿಪ್ಪೇಶಪ್ಪನವರು ದಾವಣಗೆರೆಯ ಸಾರಿಗೆ ಕಚೇರಿಯಲ್ಲಿ ಕಳೆದ ಮೂರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದರು. ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನವರಾದ ಅವರು ದಾವಣಗೆರೆಯ ಜೆ ಎಚ್ ಪಟೇಲ್ ಬಡಾವಣೆಯಲ್ಲಿ ವಾಸವಿದ್ದು, ಕಚೇರಿಗೆ ಹೊರಹೊರ್ತುಲ ರಸ್ತೆ ಮಾರ್ಗವಾಗಿ ಪ್ರತಿನಿತ್ಯ ಕಚೇರಿಗೆ ಆಗಮಿಸುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸ್ಮಶಾನ ಒತ್ತುವರಿ | ಹಲವು ವರ್ಷಗಳಾದರೂ ತೆರವುಗೊಳಿಸದೆ ಅಧಿಕಾರಿಗಳ ನಿರ್ಲಕ್ಷ್ಯ

ಅಪಘಾತ ಸಂಭವಿಸುತ್ತಿದ್ದಂತೆ ಜನರು ದೌಡಾಯಿಸಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಪ್ರಯತ್ನ ಮಾಡಿದರಾದರೂ ತೀವ್ರ ಸ್ವರೂಪದ ಗಾಯಗಳಾಗಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದರು. ಸೌಮ್ಯ ಸ್ವಭಾವದ ವ್ಯಕ್ತಿಯೆಂದೇ ಹೆಸರಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...