ದಾವಣಗೆರೆ | ಜೀವನಾಡಿ ಭದ್ರಾ ಜಲಾಶಯದ ನೀರು ರೈತರಿಗೆ ತಪ್ಪುವ ಆತಂಕ ಬೇಡ ನಾವಿದ್ದೇವೆ; ಸಚಿವ ಎಸ್ ಎಸ್ ಮಲ್ಲಿಕಾರ್ಜುನ್

Date:

“ದಾವಣಗೆರೆ ಜಿಲ್ಲೆಯ ಜೀವನಾಡಿ ಭದ್ರಾ ಜಲಾಶಯದ ನೀರು ಕೈ ತಪ್ಪುವ ಹಂತದಲ್ಲಿದೆ ಎನ್ನುವುದು ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಆತಂಕವಾಗಿದ್ದು, ಯಾವುದೇ ಸಂದರ್ಭದಲ್ಲಿ ನಿಮ್ಮೊಂದಿಗೆ ನಾವಿದ್ದೇವೆ ಧೈರ್ಯದಿಂದಿರಿ” ಎಂದು ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಭರವಸೆ ನೀಡಿದರು.

ದಾವಣಗೆರೆ ನಗರದಲ್ಲಿನ ತಮ್ಮ ಗೃಹ ಕಚೇರಿಗೆ ಆಗಮಿಸಿದ ಭದ್ರಾ ಅಚ್ಚುಕಟ್ಟು ಭಾಗದ ರೈತರ ಮನವಿಗೆ ಸ್ಪಂದಿಸಿ ಮಾತನಾಡಿದ ಸಚಿವರು “ನೀರಿನ ಸಮಸ್ಯೆ ಉಲ್ಬಣವಾಗದಂತೆ ಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವರೊಂದಿಗೆ ಸಭೆ‌ಮಾಡಲು ನಿರ್ಧರಿಸಲಾಗಿದೆ” ಎಂದು ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ತಿಳಿಸಿದರು.‌

“2020 ರಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಜಲ ಸಂಪನ್ಮೂಲ ಇಲಾಖೆ ಅಧ್ಯಕ್ಷತೆಯಲ್ಲಿ ಸಭೆ ನಡೆದ ತೀರ್ಮಾನದಂತೆ, ಚಿತ್ರದುರ್ಗ ಜಿಲ್ಲೆಯ ಕೆಲವು ಪಟ್ಟಣಗಳು ಹಾಗೂ ಚಿಕ್ಕಮಗಳೂರು ತಾಲ್ಲೂಕಿನ ಕೆಲವು ಗ್ರಾಮಗಳ ಕುಡಿಯುವ ನೀರಿನ ವಿಷಯಕ್ಕೆ ಸಂಬಂಧ ಪಟ್ಟಂತೆ ಯೋಜನೆಯನ್ನು ರೂಪಿಸಲಾಗಿದ್ದು, ಪ್ರಸ್ತುತ ಕಾಮಗಾರಿಯನ್ನು ಕೈ ಗೆತ್ತಿಕೊಳ್ಳಲಾಗಿದೆ. ಆದರೆ ಕಾಮಗಾರಿಯು ಅವೈಜ್ಞಾನಿಕವಾಗಿದೆ ಎನ್ನುವುದು ನಮ್ಮ ರೈತರ ಅಭಿಪ್ರಾಯವಾಗಿದ್ದು, ನಾವು ಈ ಹಿಂದೆಯೇ ಕಾಮಗಾರಿಯನ್ನು ತಡೆ ಹಿಡಿಯುವಂತೆ ಕೋರಿದ್ದೆವು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ಜಿಲ್ಲೆಯ ಅನ್ನದಾತರಿಂದ ಕುಡಿಯುವ ನೀರಿನ ಬಗ್ಗೆ ವಿರೋಧವಿಲ್ಲ. ಆದರೆ ಭದ್ರಾ ಕಾಲುವೆ ಬಲದಂಡೆಯ (ಆರ್.ಬಿ.ಸಿ) 250 ಮೀಟರ್ ನಲ್ಲಿ ಚಾನಲ್ ಸೀಳಿ ನೀರು ತೆಗೆದುಕೊಳ್ಳುವ ವಿಚಾರಕ್ಕೆ ವಿರೋಧವಿದೆ” ಎಂದರು.

“ಒಟ್ಟು ಜಲಾಶಯದ ಹಿನ್ನೀರಿನಲ್ಲಿ ಕಾಮನ್ ಇಂಟ್ಯಾಕ್ ಜಾಕ್ ವೆಲ್ ನಿರ್ಮಿಸಿ ಪಂಪಿಂಗ್ ಮೂಲಕ ಕಚ್ಚಾ ಮೂಲಕ ತೆಗೆದುಕೊಳ್ಳುವುದು ಮತ್ತು ಒಟ್ಟು ಪ್ರಮಾಣದ ನೀರನ್ನು 9 ತಿಂಗಳುಗಳ ಜಲಾಶಯದ ಕ್ಯಾನಲ್‌ ನಿಂದ ಗ್ರಾವಟಿ ಮೂಲಕ ತೆಗೆದು ಕೊಳ್ಳುವುದು. ಕ್ಯಾನಲ್ ನಲ್ಲಿ ನೀರು ಲಭ್ಯವಿಲ್ಲದಿರುವ ಮೂರು ತಿಂಗಳ ಅವಧಿಯಲ್ಲಿ ಭದ್ರಾ ಜಲಾಶಯ ಹಿನ್ನೀರಿನಲ್ಲಿ ಕಾಮನ್ ಇಂಟ್ಯಾಕ್ ಜಾಕ್ ವೆಲ್ ನಿರ್ಮಿಸಿ ಪಂಪಿಂಗ್ ಮೂಲಕ ಕಚ್ಚಾ ನೀರನ್ನು ತೆಗೆದುಕೊಳ್ಳುವುದರಿಂದ ಸರ್ಕಾರಕ್ಕೆ 9 ತಿಂಗಳು ವಿದ್ಯುತ್ ಶುಲ್ಕ ಉಳಿತಾಯ ಮತ್ತು ಗ್ರಾವಿಟಿ ಪ್ಲೋವನ್ನು ಸಮರ್ಥವಾಗಿ ಬಳಸಬಹುದಾಗಿದೆ ಎಂದು ತಿಳಿಸಲಾಗಿರುವುದು ಇವೆರಡು ನಮ್ಮ ಭಾಗದ ರೈತರಿಗೆ ಮಾರಕವಾಗಲಿದೆ” ಎನ್ನುವುದು ಆರೋಪ.

“ಜಲಾಶಯದ ಸ್ಥಳದಿಂದ ಕೇವಲ 500 ಮೀಟರ್ ದೂರದಲ್ಲಿ ಭದ್ರಾ ನದಿ ಇದ್ದು ಇಲ್ಲಿ ನೀರಿನ ಪ್ರಮಾಣ 365 ದಿನವು ಹರಿವು ಇರುವ ಕಾರಣ ನದಿ ಭಾಗದಿಂದ ಜಾಕ್‌ವೆಲ್ ನಿರ್ಮಿಸಿ ಈ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನ ಗೊಳಿಸಿದ್ದಲ್ಲಿ ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಬೆಳೆ ಬೆಳೆಯಲು ಯಾವುದೇ ತೊಂದರೆಯಾಗುವುದಿಲ್ಲ ಎಂಬುದು ರೈತರುಗಳ ಬೇಡಿಕೆಯಾಗಿದೆ” ಎಂದರು.

“ಈ ವಿಚಾರವನ್ನು ಶೀಘ್ರದಲ್ಲಿ ಮುಖ್ಯಮಂತ್ರಿಗಳೊಂದಿಗೆ ಹಾಗೂ ಜಲ ಸಂಪನ್ಮೂಲ ಸಚಿವರ ಗಮನಕ್ಕೆ ತರಲಾಗುವುದು. ಭದ್ರಾ ಅಚ್ಚುಕಟ್ಟು ಭಾಗದ ರೈತರೊಂದಿಗೆ ನಾವಿದ್ದೇವೆ, ಎಲ್ಲರೂ ಒಟ್ಟಾಗಿ ಸಮಸ್ಯೆ ಉಲ್ಬಣವಾಗದ ರೀತಿಯಲ್ಲಿ ಚರ್ಚಿಸೋಣ” ಎಂದು ರೈತರಿಗೆ ಸಚಿವರು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಕುಡಿಯುವ ನೀರಿನ ಯೋಜನೆಗೆ ಅಡ್ಡಿಪಡಿಸಿ ರಾಜಕೀಯ ಮಾಡುವುದು ಬೇಡ; ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ

ಈ ಸಂದರ್ಭದಲ್ಲಿ ಭದ್ರಾ ಮಹಾಮಂಡಳಿಯ ಅಧ್ಯಕ್ಷ ದ್ಯಾವಪ್ಪರೆಡ್ಡಿ, ಮುದೇಗೌಡ್ರು ಗಿರೀಶ್, ಮಾನಗಹಳ್ಳಿ ಪರಶುರಾಮ್, ನಂದಿಗಾವಿ ಶ್ರೀನಿವಾಸ್, ಕಾಡಾ ಮಾಜಿ ನಿರ್ದೇಶಕ ಕೆ.ಆಂಜನೇಯ, ತಿಪ್ಪೇರುದ್ರಪ್ಪ ಸಿರಿಗೆರೆ, ಪ್ರಭು ಸಿರಿಗೆರೆ, ರೈತ ಸಂಘದ ಅಧ್ಯಕ್ಷ ನಂದಿತಾವರೆ ಮುರುಗೇಂದ್ರಪ್ಪ, ಹಳೇಬಾತಿ ಶಾಂತಪ್ಪ, ರವಿ, ಮಂಜುನಾಥ ರೆಡ್ಡಿ, ಕುಂಬಳೂರು ಗಿರೀಶ್, ಕುಂದೂರು ರಾಜಪ್ಪ, ಮಾಗೋಡ್ ದೇವೇಂದ್ರಪ್ಪ, ಅಂಜುಬಾಬು, ಕೆ.ಬಿ ಬಸವಲಿಂಗಪ್ಪ, ಕಲ್ಪನಹಳ್ಳಿ ನಾಗರಾಜ್, ಚೇತನ್, ಕೆ.ಎನ್ ಹಳ್ಳಿ ದಿವಾಕರಪ್ಪ, ಬಾತಿ ಉಮೇಶ್, ಆಂಜನೇಯ, ಸೇರಿದಂತೆ ಕಾಡಜ್ಜಿ, ಬಿ.ಕಲ್ಪನಹಳ್ಳಿ, ಬೇತೂರು ಕಡ್ಲೆಬಾಳು, ಅರಸಾಪುರ, ಹಳೇಭಾತಿ, ದೊಡ್ಡಭಾತಿ, ನಾಗರಕಟ್ಟೆ, ರಾಂಪುರ ಹಾಗೂ ಇತರೆ ಗ್ರಾಮಗಳ ರೈತ ಮುಖಂಡರುಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...