ಚಿಕ್ಕಮಗಳೂರು | ಸೂರಿಗಾಗಿ 25 ವರ್ಷಗಳಿಂದ ಹೋರಾಡುತ್ತಿದೆ ಹಕ್ಕಿಪಿಕ್ಕಿ ಸಮುದಾಯ

Date:

ಕಾಫಿ ನಾಡು, ಮಲೆನಾಡು ಚಿಕ್ಕಮಗಳೂರು ಜಿಲ್ಲೆಯ ಪರಿಸರ ಎಷ್ಟು ಚಂದವೋ, ಅಷ್ಟೇ ಸಮಸ್ಯೆಗಳೂ ಜಿಲ್ಲೆಯಲ್ಲಿವೆ. ಜಿಲ್ಲೆಯ ನಾನಾ ಭಾಗಗಳಲ್ಲಿ ವಾಸಿಸುತ್ತಿರುವ ಹಕ್ಕಿಪಿಕ್ಕಿ ಸಮುದಾಯದ ಜನರು ಸ್ವಂತ ಸೂರು ಕಟ್ಟಿಕೊಳ್ಳಲು ಭೂಮಿಯಿಲ್ಲ. ವಾಸಿಸುತ್ತಿರುವ ಭೂಮಿಯೂ ತಮ್ಮದಲ್ಲ. ತಾವಿರುವ ಜಾಗ ತಮ್ಮದೆಂದು ಹಕ್ಕುಪತ್ರ ಕೊಟ್ಟರೆ, ನೆಲೆ ರೂಪಿಸಿಕೊಳ್ಳುತ್ತೇವೆಂದು ಆ ಸಮುದಾಯ ಕೇಳುತ್ತಲೇ ಇದೆ. ಆದರೆ, ಅವರ ಅಳಲಿಗೆ ಕಿವಿಗೊಡುವವರು ಇಲ್ಲದಂತಾಗಿದೆ.

ಚಿಕ್ಕಮಗಳೂರಿಗೆ ಸಮೀಪದಲ್ಲೇ ಇರುವ ಮಲ್ಲೇನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಿಂಡಿಗ ಗ್ರಾಮದಲ್ಲಿ ಹಲವಾರು ವರ್ಷಗಳಿಂದ ಹಕ್ಕಿಪಿಕ್ಕಿ ಸಮುದಾಯದ ಮಂದಿ ವಾಸಿಸುರತ್ತಿದ್ದಾರೆ. ತಾವಿರುವ ಜಾಗಕ್ಕೆ ಹಕ್ಕುಪತ್ರ ನೀಡಬೇಕೆಂದು ಕಳೆದ 25 ವರ್ಷಗಳಿಂದ ಸತತವಾಗಿ ಹೋರಾಟ ನಡೆಸುತ್ತಿದ್ದಾರೆ. ಆದರೂ, ಜಾಗ ಅವರದ್ದಾಗಿಲ್ಲ. ಹಲವರಿಗೆ ನೆಲೆಯೂ ಇಲ್ಲ. ಅವರೆಲ್ಲರೂ ಸಮುದಾಯ ಭವನವನ್ನೇ ಮನೆ ಮಾಡಿಕೊಂಡು ಬದುಕುತ್ತಿದ್ದಾರೆ. ತಮಗೆ ನಿವೇಶನಗಳನ್ನು ನೀಡುವಂತೆ ಒತ್ತಾಯಿಸುತ್ತಿದ್ದಾರೆ.

“ಚರ್ಚ್ ಗುಡ್ಡ ಕಾವಲು ಗ್ರಾಮದ ಸರ್ವೇ ನಂ.1ರಲ್ಲಿರುವ ಭೂಮಿಯನ್ನು ಸಾಗುವಳಿ ಭೂಮಿಯಾಗಿ ಗುರುತಿಸಿ 1981-82ರಲ್ಲಿ ಅರಣ್ಯ ಹಕ್ಕು ಸಮಿತಿ ಪ್ರಸ್ತಾವನೆ ಸಲ್ಲಿಸಿತ್ತು. ಅಂದಿನಿಂದಲೇ ಆ ಭೂಮಿಯಲ್ಲಿ ಹಲವರು ಸಾಗುವಳಿ ಮಾಡುತ್ತಿದ್ದರು. ಆದರೆ, 2006-07ರಲ್ಲಿ ಆ ಭೂಮಿಯನ್ನು ಅಕ್ರಮವಾಗಿ ಪಡುತೋಪು ಪ್ರದೇಶವೆಂದು ಗುರುತಿಸಲಾಗಿದೆ. ಹೀಗಾಗಿ, ಅಲ್ಲಿ ಸಾಗುವಳಿ ಮಾಡುತ್ತಿದ್ದವರು ಭೂಮಿ ಕಳೆದುಕೊಂಡಿದ್ದಾರೆ” ಎಂದು ಈದಿನ.ಕಾಮ್‌ ಜೊತೆ ಮಾತನಾಡಿದ ಗ್ರಾಮದ ನಿವಾಸಿ ವಿಶ್ವ ಮತ್ತು ಶರತ್ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

WhatsApp Image 2023 11 22 at 12.59.49 PM

“ಕೂಲಿ ಮಾಡಿ ಬದುಕು ಕಟ್ಟಿಕೊಳ್ಳಲು ನಮಗೆ ಸೂರು ಇಲ್ಲ. ಸೂರು ಹೊಂದಿರುವವರಿಗೆ ಹಕ್ಕುಪತ್ರವೂ ದೊರೆತಿಲ್ಲ. ಮಕ್ಕಳಿಗೆ ಶಿಕ್ಷಣ ಕೊಡಿಸಲು ಸಾಧ್ಯವಾಗುತ್ತಿಲ್ಲ. ಒಪ್ಪೊತ್ತಿನ ಗಂಜಿಗೂ ಪರದಾಡುವಂತಾಗಿದೆ” ಎಂದು ಶರತ್ ತಮ್ಮ ಅಳಲು ತೋಡಿಕೊಂಡಿದ್ದಾರೆ.

“ಗ್ರಾಮದಲ್ಲಿ ಮನೆಗಳನ್ನು ನಿರ್ಮಿಸಿಕೊಂಡು ಬದುಕುತ್ತಿದ್ದೇವೆ. ಮಳೆ ಬಂದರೆ, ಮನೆಗಳಿಗೆ ನೀರು ನುಗ್ಗುತ್ತದೆ. ಇನ್ನು, ಕಡಿಮೆ ಕೂಲಿಗೆ ದುಡಿಯುತ್ತಿದ್ದೇವೆ. ಬೆಲೆ ಏರಿಕೆಯ ಇಂದಿನ ದಿನಗಳಲ್ಲಿ ನಾವು ದುಡಿಯುವುದು ಸಾಕಾಗುತ್ತಿಲ್ಲ” ಎಂದು ಅವರು ಹೇಳಿದ್ದಾರೆ.

“ಜೀವನ ನಡೆಸಲು, ಹೊಟ್ಟೆ ಪಾಡಿಗೆ ಬೆಳೆ ಬೆಳೆದು ತಿನ್ನಲು ನಮಗೆ ಒಂದಿಷ್ಟು ಭೂಮಿಬೇಕು. ಆದರೆ, ನಮಗೆ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ” ಎಂದು ಹಕ್ಕಿಪಿಕ್ಕಿ ಸಮುದಾಯದ ಸರಿತಾ ಹೇಳಿದ್ದಾರೆ.

“ನಮಗೆ ಬದುಕುವುದಕ್ಕೆ ಹಾಗೂ ಬದುಕು ಕಟ್ಟಿಕೊಳ್ಳಲು ಒಂದಿಷ್ಟೂ ಭೂಮಿ ಬೇಕು. ನಾವಿರುವ ನಿವೇಶನಗಳ ಹಕ್ಕುಪತ್ರಗಳನ್ನು ನೀಡಬೇಕು” ಎಂದು ಸಮುದಾಯದ ಜನರು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಗಿರಿಜಾ ಎಸ್‌ ಜಿ
ಗಿರಿಜಾ ಎಸ್‌ ಜಿ
ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ, ಮಹಿಳಾ ಪರ ಹೋರಾಟಗಾರ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...