ಮಾದಿಗ ಸಮಾಜದ ಒಳಮೀಸಲಾತಿ ವರ್ಗೀಕರಣ ಹುದ್ದೆ ಭರ್ತಿಯಲ್ಲಿ ಅನ್ಯಾಯವಾಗುತ್ತಿರುವ ಬಗ್ಗೆ ಸದನದಲ್ಲಿ ಧ್ವನಿ ಎತ್ತಿ ಸಮಾಜದ ಹಿತ ಕಾಪಾಡಬೇಕು ಎಂದು ಮಾದಿಗ ಒಳಮೀಸಲಾತಿ ಹೋರಾಟ ಸಮಿತಿಯಿಂದ ಕಡೂರು ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

35 ವರ್ಷ ಗಳಿಂದ ಮಾದಿಗರಿಗೆ ಮೀಸಲಾತಿಯಲ್ಲಿ ಅನ್ಯಾಯ ವಾಗುತ್ತಿದೆ. ಅದನ್ನು ಸರಿಪಡಿಸಿ ರಾಜ್ಯ ಸರ್ಕಾರ ಒಳಮೀಸಲಾತಿ ನೀಡುವಂತೆ ಒತ್ತಾಯಿಸಿದ ಪರಿಣಾಮಸುಪ್ರಿಂಕೋರ್ಟ್ ನಿರ್ದೇಶನದಂತೆ ರಾಜ್ಯ ಸರ್ಕಾರ ಮಾದಿಗ ರಿಗೆ ಶೇ.6ರಷ್ಟುಒಳ ಮೀಸಲಾತಿ ನೀಡಿದ ಕಡತಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ ಎಂದು ರಾಜ್ಯ ಮಾದಿಗ ಮೀಸಲಾತಿ ಹೋರಾಟ ಸಮಿತಿ ಕಾರ್ಯದರ್ಶಿ ಬಿ.ಟಿ.ಚಂದ್ರ ಶೇಖರ್ ಮಾತನಾಡಿದರು.
ಆದರೆ ರಾಜ್ಯ ಸರ್ಕಾರ ಪರಿಶಿಷ್ಟರಿಗೆ ನೀಡಿದ ಶೇ.17ರಲ್ಲಿ ಕಾನೂನು ತೊಡಕಾಗುತ್ತದೆ ಎಂಬ ನೆಪವೊಡ್ಡಿ ಶೇ.15ಕ್ಕೆ ಇಳಿಸಿ 56 ಸಾವಿರ ಹುದ್ದೆ ಭರ್ತಿ ಮಾಡಲು ಹೊರಟಿ ರುವುದು ಮಾದಿಗ ಸಮುದಾಯಕ್ಕೆ ಮಾಡಿದ ಅನ್ಯಾಯ. ರಾಜ್ಯದ ಬಜೆಟ್ ಅಧಿವೇಶನ ದಲ್ಲಿ ಶಾಸಕರು ಸಮುದಾಯದ ಧ್ವನಿಯಾಗಿ ಅನ್ಯಾಯ ಸರಿಪಡಿಸುವಂತೆ ಒತ್ತಾಯಿಸಬೇಕು ಸರ್ಕಾರ ಖಾಲಿ ಹುದ್ದೆಗಳನ್ನು ಭರ್ತಿಗೆ ಮುಂದಾದರೆ ಮಾದಿಗ ಸಮಾಜಕ್ಕೆ ಸಾಕಷ್ಟು ಅನ್ಯಾಯವಾಗಲಿದೆ. ಶೇ.15 ರ ಮೀಸಲಾತಿಯಲ್ಲಿ ಎಡಗೈ- ಬಲಗೈ ಸಮು ದಾಯಕ್ಕೆ ಶೇ5:5ರ ಅನುಪಾತದಲ್ಲಿ ನೀಡಿದರೆ ಮಾದಿಗ ಸಮಾಜದ 3 ಸಾವಿರ ಯುವಕ ರಿಗೆ ಸರ್ಕಾರಿ ನೌಕರಿ ದೊರೆಯಲಿದೆ ಈ ನಿಟ್ಟಿನಲ್ಲಿ ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಗೊಳಿಸದೇ ವಿವಿಧ ಇಲಾಖೆ ಗಳಖಾಲಿ ಹುದ್ದೆ ಭರ್ತಿ ನಿರ್ಧಾರ ರಾಜ್ಯ ಸರಕಾರ ಕೈ ಬಿಡಬೇಕು ಎಂದು ಶೂದ್ರ ಶ್ರೀನಿವಾಸ್ ತಿಳಿಸಿದರು.

ಪ್ರತಿಭಟನಾ ಸಂದರ್ಭದಲ್ಲಿ ಶಾಸಕ ಕೆ.ಎಸ್.ಆನಂದ್ ಮಾತನಾಡಿ “ಮೀಸಲಾತಿಯನ್ನು ರಾಜ್ಯ ಸರ್ಕಾರ ಗಂಭೀ ರವಾಗಿ ಪರಿಗಣಿಸಿ ಬೆಳಗಾವಿ ಅಧಿವೇಶನ ದಲ್ಲಿ ವಿಧೇಯಕ ಮಂಡಿಸಿದೆ. ಧಾರವಾಡ ದಲ್ಲಿ ನಡೆದ ಉದ್ಯೋಗಾಕಾಂಕ್ಷಿಗಳ ಪ್ರತಿ ಭಟನೆ ತೀವ್ರಗೊಂಡ ಬೆನ್ನಲ್ಲೇ ಮೀಸಲಾತಿ ಅನುಪಾತದಲ್ಲಿ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಕಳೆದ 6-7 ವರ್ಷಗಳಿಂದ ಖಾಲಿಹುದ್ದೆ ಭರ್ತಿಗೆ ಹಿಂದಿನ ಸರ್ಕಾರಗಳು ಕ್ರಮಕೈಗೊಂಡಿಲ್ಲದೆ ವಿದ್ಯಾವಂತರಿಗೆ ಅನ್ಯಾಯವಾಗಿದೆ. ಈ ಪರಿಸ್ಥಿತಿ ಸರ್ಕಾರಕ್ಕೆ ಮನವರಿಕೆ ಮಾಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಂದು ತಿಳಿಸಿದರು.
ಇದನ್ನೂ ಓದಿದ್ದೀರಾ?ಬಾಬಾ ಬುಡನ್ಗಿರಿ ʼಉರುಸ್ʼ ವಿವಾದ; ಸರ್ಕಾರದ ವಿರುದ್ಧ ಕಾವೇರಿದ ಪ್ರತಿಭಟನೆ
ಈ ವೇಳೆ ಬಿ.ಟಿ.ಚಂದ್ರಶೇಖರ್, ಶೂದ್ರಶ್ರೀನಿವಾಸ್, ವೈ.ಟಿ.ಗೋವಿದಂಪ್ಪ, ಬೀರೂರು ಎನ್.ಗಿರೀಶ್, ಕೃಷ್ಣಪ್ಪ, ಚಿಕ್ಕಿಂಗಳ ಲಕ್ಷ್ಮಣ್, ಜಗದೀಶ್, ಮಂಜಪ್ಪ, ಸುರೇಶ್, ವಾಸು, ತಮ್ಮಯ್ಯ, ಹುಲ್ಲೇಹಳ್ಳಿ ಲಕ್ಷ್ಮಣ್, ಸಗುನಪ್ಪ, ನಾರಾಯಣ್ ಹಾಗೂ ಸಂಘಟನೆಯ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.





