Naxal Surrender | ಮುಖ್ಯವಾಹಿನಿಗೆ ಆರು ನಕ್ಸಲರು; ಮಾವೋವಾದಿ ನಾಯಕಿ ಮುಂಡಗಾರು ಲತಾ ಹೇಳಿದ್ದೇನು?

Date:

ನಕ್ಸಲ್ ಶರಣಾಗತಿ ರಾಜ್ಯ ಸರ್ಕಾರ ಕರೆ ನೀಡಿದ ಬಳಿಕ ಸಕ್ರಿಯ ನಕ್ಸಲರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವ ಪ್ರಕ್ರಿಯೆ ನಡೆಯುತ್ತಿದೆ. ನಕ್ಸಲ್ ನಾಯಕಿ ಮುಂಡಗಾರು ಲತಾ ಸೇರಿದಂತೆ 6 ಮಂದಿ ನಕ್ಸಲರು ಜ. 8ರಂದು ಚಿಕ್ಕಮಗಳೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಮುಂದೆ ಶರಣಾಗಲಿದ್ದಾರೆ.

ಮುಂಡಗಾರು ಲತಾ, ವನಜಾಕ್ಷಿ ಬಾಳೆಹೊಳೆ, ಸುಂದರಿ ಕುತ್ತೂರು, ಮಾರೆಪ್ಪ ಅರೋಲಿ, ಕೆ. ವಸಂತ, ಟಿ.ಎನ್. ಜೀಶ್ 2024ರ ನಕ್ಸಲ್ ಶರಣಾಗತಿ ಪ್ಯಾಕೇಜ್‌ನಡಿ ಸಮಾಜದ ಮುಖ್ಯವಾಹಿಗೆ ಬರುವುದು ಬಹುತೇಕ ಖಚಿತವಾಗಿದೆ.

ಉಡುಪಿ ಜಿಲ್ಲೆ ಕಾರ್ಕಳ ಸಮೀಪದಲ್ಲಿ ನಕ್ಸಲ್ ಮುಖಂಡ ವಿಕ್ರಮ್ ಗೌಡ ಎನ್‌ಕೌಂಟರ್ ಬಳಿಕ ಭೂಗತರಾಗಿರುವ ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಪ್ರಯತ್ನವನ್ನು ನಕ್ಸಲ್ ಶರಣಾಗತಿ ಸಮಿತಿ, ಶಾಂತಿಗಾಗಿ ನಾಗರಿಕ ವೇದಿಕೆ ಸದಸ್ಯರು ನಡೆಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂಡಗಾರು ಲತಾ ಅವರು ಮುಖ್ಯವಾಹಿನಿಗೆ ಬರುವ ಕುರಿತು ಸಮಿತಿ ಸದಸ್ಯರ ಮುಂದೆ ಮಾತನಾಡಿದ್ದು, “ಕರ್ನಾಟಕ, ತಮಿಳುನಾಡು ಹಾಗೂ ಕೇರಳದ ಆರು ಜನ ಕಾಮ್ರೇಡ್‌ಗಳು ಮುಖ್ಯವಾಹಿನಿಗೆ ಬರಬೇಕು ಎಂದುಕೊಂಡಿದ್ದೇವೆ. ಸಕಾರಾತ್ಮಕವಾಗಿ ಯೋಚಿಸಿ ನಿರ್ಧಾರ ಮಾಡಿದ್ದೇವೆ” ಎಂದಿದ್ದಾರೆ.

“ಮೊದಲ ಹಂತದಲ್ಲಿ ನಾವು ಒಂದು ಕಡೆ ಸೇರಿ ಚರ್ಚಿಸಿದ್ದೇವೆ. ಈಗ ಎರಡನೇ ಹಂತದಲ್ಲಿ ಮುಖ್ಯವಾಹಿನಿಗೆ ಬರಲು ಉತ್ಸುಕರಾಗಿದ್ದೇವೆ. ಎರಡು ಸಮತಿಯವರು ನಮ್ಮನ್ನು ಬಂದು ಭೇಟಿಯಾಗಿದ್ದಾರೆ. ಸರ್ಕಾರದ ನಿರ್ಧಾರಗಳ ಬಗ್ಗೆ ಮನವರಿಕೆ ಮಾಡಿದ್ದಾರೆ. ಸಮಿತಿಯವರ ಮಾತುಗಳ ನಮಗೆ ಖುಷಿ ತಂದಿವೆ. ನಾವೆಲ್ಲ ಕಾಮ್ರೇಡ್‌ಗಳು ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ” ಎಂದು ತಿಳಿಸಿದ್ದಾರೆ.

“ನಮ್ಮ ಬೇಡಿಕೆಗಳನ್ನು ಸರ್ಕಾರದ ಮುಂದಿಡುತ್ತೇವೆ. ಸರ್ಕಾರ ನಮ್ಮ ಭರವಸೆ ಈಡೇರಿಸುತ್ತದೆ ಎಂಬ ಭರವಸೆ ನಮಗಿದೆ. ಸಮಿತಿಯ ಸದಸ್ಯರು ಸಾಕಷ್ಟು ಶ್ರಮ ಹಾಕಿ ನಮ್ಮನ್ನು ಮುಖ್ಯವಾಹಿನಿಗೆ ಕರೆತರಲು ಶ್ರಮಿಸಿದ್ದಾರೆ. ಅವರ ಮಾತಿಗೆ ಬೆಲೆ ಕೊಡುತ್ತೇವೆ. ಪ್ರಜಾತಾಂತ್ರಿಕವಾಗಿ ಮತ್ತು ಸಂವಿಧಾನಾತ್ಮಕವಾಗಿ ಹೋರಾಟ ಮುಂದುವರಿಯುತ್ತದೆ. ಜನರ ಪರವಾಗಿ ನಾವು ಕೊನೆ ತನಕ ನಿಲ್ಲುತ್ತೇವೆ. ಈ ವಿಚಾರದಲ್ಲಿ ನಾವು ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ. ನಮ್ಮ ಉಸಿರು ಇರೋವರೆಗೂ ನಮ್ಮ ಹೋರಾಟ ಇರಲಿದೆ” ಎಂದು ಮುಂಡಗಾರು ಲತಾ ಸ್ಪಷ್ಟಪಡಿಸಿದ್ದಾರೆ.

ಶರಣಾಗುವ ನಕ್ಸಲರು ಯಾರು?

  1. ಮುಂಡುಗಾರು ಲತಾ (ಮುಂಡಗಾರು ಶೃಂಗೇರಿ)
  2. ವನಜಾಕ್ಷಿ (ಬಾಳೆಹೊಳೆ ಕಳಸ)
  3. ಸುಂದರಿ (ಕುಂತಲೂರು ದಕ್ಷಿಣ ಕನ್ನಡ)
  4. ಮಾರಪ್ಪ ಅರೋಳಿ (ಕರ್ನಾಟಕ)
  5. ವಸಂತ ಟಿ (ತಮಿಳುನಾಡು)
  6. ಎನ್. ಜೀಶಾ (ಕೇರಳ)
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...