ಚಿಕ್ಕಮಗಳೂರು | ಮಸೀದಿ ಬಳಿ ಕೇಸರಿ ಧ್ವಜ ಕಟ್ಟಲು ವಿರೋಧ; ಗಲಾಟೆ ಆರೋಪ

Date:

ಚಿಕ್ಕಮಗಳೂರು ಜಿಲ್ಲೆಯ ಹಾಂದಿ ಗ್ರಾಮದಲ್ಲಿ ಮಸೀದಿ ಬಳಿ ಕೇಸರಿ ಧ್ವಜ ಕಟ್ಟುತ್ತಿದ್ದ ದತ್ತ ಮಾಲಾಧಾರಿಗಳನ್ನು ಮತ್ತೊಂದು ಕೋಮಿನ ಯುವಕರು ತಡೆದಿದ್ದಾರೆ. ಈ ವೇಳೆ ಗಲಾಟೆ ನಡೆದಿದ್ದು, ಹಿಂದುತ್ವ ಕೋಮು ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿದೆ ಎಂದು ಆರೋಪಿಸಲಾಗಿದೆ.

ಚಿಕ್ಕಮಗಳೂರಿನ ಬಾಬಾಬುಡನ್‌ಗಿರಿಯಲ್ಲಿ ಹಿಂದುತ್ವ ಕೋಮುವಾದಿ ಸಂಘಟನೆ ವಿಶ್ವ ಹಿಂದು ಪರಿಷತ್‌ 24, 25 ಮತ್ತು 26ರಂದು ದತ್ತ ಜಯಂತಿ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ದತ್ತ ಮಾಲೆ ಧರಿಸಿರುವ ಹಿಂದುತ್ವವಾದಿ ಕೋಮು ಕಾರ್ಯಕರ್ತರು ಚಿಕ್ಕಮಗಳೂರಿನ ವಿವಿಧ ಭಾಗಗಳಲ್ಲಿ ಕೇಸರಿ ಧ್ವಜಗಳನ್ನು ಕಟ್ಟುತ್ತಿದ್ದಾರೆ.

ಈ ವೇಳೆ, ಮಸೀದಿ ಬಳಿಯೂ ಕೇಸರಿ ಧ್ವಜ ಕಟ್ಟಲು ದತ್ತಮಾಲೆ ಧರಿಸಿದ್ದವರು ಮುಂದಾಗಿದ್ದಾರೆ. ಅವರನ್ನು ತಡೆದು, ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಸ್ಥಳಕ್ಕೆ ಆಲ್ದೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿಂದು-ಮುಸ್ಲಿಂ ಸೌಹಾರ್ದ ತಾಣವಾಗಿರುವ ಬಾಬಾಬುಡನ್‌ಗಿರಿ ದರ್ಗಾವನ್ನು ದತ್ತಪೀಠ ಮಾಡುತ್ತೇವೆಂದು ಹಿಂದುತ್ವ ಕೋಮು ಸಂಘಟನೆಗಳು ವಿವಾದ ಸೃಷ್ಠಿಸಿವೆ. ಹೀಗಾಗಿ, ಪ್ರತಿ ವರ್ಷವೂ ದತ್ತ ಜಯಂತಿ ಆಚರಿಸುತ್ತಿವೆ. ಬಾಬಾಬುಡನ್‌ಗಿರಿಯಲ್ಲಿ ಡಿಸೆಂಬರ್​ 24, 25 ಮತ್ತು 26ರಂದು ದತ್ತಜಯಂತಿ ನಡೆಯುವ ಕಾರಣ, ಡಿಸೆಂಬರ್ 23ರಿಂದ 27ರವರೆಗೆ ಚಂದ್ರದ್ರೋಣ ಪರ್ವತ ಸಾಲಿನಲ್ಲಿರುವ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಭೇಟಿಯನ್ನು ನಿರ್ಬಂಧಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...