ಕುಮಾರಸ್ವಾಮಿ ದತ್ತಮಾಲೆ ಹೇಳಿಕೆಗೆ ಚಪ್ಪಾಳೆ ತಟ್ಟಿದ ವಿಎಚ್‌ಪಿ

Date:

ಸಂದರ್ಭ ಬಂದರೆ ದತ್ತಮಾಲೆಯನ್ನೂ ಹಾಕುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಭಾನುವಾರ ಚಿಕ್ಕಮಗಳೂರಿನಲ್ಲಿ ಹೇಳಿದ್ದಾರೆ. ಅವರ ಹೇಳಿಕೆಯನ್ನು ವಿಶ್ವ ಹಿಂದು ಪರಿಷತ್ ಸ್ವಾಗತಿಸಿದೆ. ದತ್ತಮಾಲೆ ಧರಿಸುವ ನಿರ್ಧಾರ ಸ್ವಾಗತಾರ್ಹ ಎಂದಿದೆ.

ಪಕ್ಷದ ಹೆಸರಿನಲ್ಲಿಯೇ ‘ಜಾತ್ಯತೀತ’ತೆ ಇಟ್ಟುಕೊಂಡಿದ್ದ ಕುಮಾರಸ್ವಾಮಿ ಅವರು ಇದೀಗ ಹಿಂದುತ್ವವಾದ ಅಥವಾ ಧರ್ಮ ರಾಜಕಾರಣದ ಸೋಗು ಹಾಕಿಕೊಳ್ಳುತ್ತಿದ್ದಾರೆ. ಬಿಜೆಪಿ ಮತ್ತು ಬಲಪಂಥೀಯ ವಾದವನ್ನು ವಿರೋಧಿಸುತ್ತಿದ್ದ ಅವರು, ಈಗ ಬಿಜೆಪಿಯೊಂದಿಗೆ ಕೈ ಜೋಡಿದ್ದಾರೆ. ಬಲಪಂಥೀಯ ವಾದವನ್ನು ಬೆಂಬಲಿಸುತ್ತಿದ್ದಾರೆ. ಅಲ್ಲದೆ, ಚಿಕ್ಕಮಗಳೂರಿನ ಬಾಬಾ ಬುಡನ್‌ಗಿರಿಯಲ್ಲಿ ದತ್ತಮಾಲೆಯನ್ನೂ ಹಾಕಿಕೊಳ್ಳುತ್ತೇನೆ ಎಂದೂ ಹೇಳಿದ್ದಾರೆ.

ಅವರ ಹೇಳಿಕೆಯನ್ನು ಸ್ವಾಗತಿಸಿರುವ ವಿಎಚ್‌ಪಿ ಮುಖಂಡ ರಘು, “ಕುಮಾರಸ್ವಾಮಿ ಅವರು ದತ್ತಮಾಲೆ ಧರಿಸಲು ನಿರ್ಧರಿಸುವುದು ಸ್ವಾಗತಾರ್ಹ. ನಿಮ್ಮ ರಾಜಕೀಯ ಭವಿಷ್ಯ ಬದಲಾಗಲಿದ್ದು, ಇನ್ನಷ್ಟು ಶಕ್ತಿ ನೀಡಲಿ ಎಂದು ದತ್ತಾತ್ರೇಯ ಸ್ವಾಮಿಯಲ್ಲಿ ಬೇಡುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಧರ್ಮವನ್ನು ಮೀರಿ ಹಿಂದು-ಮುಸ್ಲಿಮರು ಒಟ್ಟಿಗೆ ಪೂಜಿಸುವ ಬಾಬಾ ಬುಡನ್‌ಗಿರಿಯನ್ನು ದತ್ತಪೀಠ ಮಾಡಲು ಹಿಂದುತ್ವವಾದಿ ಕೋಮು ಸಂಘಟನೆಗಳು ಹವಣಿಸುತ್ತಿವೆ. ಹಲವಾರು ವರ್ಷಗಳಿಂದ ಬಾಬಾ ಬುಡನ್‌ಗಿರಿ ವಿಚಾರ ವಿವಾದದಲ್ಲಿದೆ. ಈ ನಡುವೆ, ಡಿಸೆಂಬರ್ 17 ರಿಂದ 26ರವರೆಗೆ ಬಾಬಾ ಬುಡನ್‌ಗಿರಿಯಲ್ಲಿ ದತ್ತಮಾಲಾ ಅಭಿಯಾನವನ್ನು ಹಿಂದುತ್ವಾವಾದಿ ಕೋಮು ಸಂಘಟನೆಗಳು ಆಯೋಜಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...