ಕಲಬುರಗಿ | ಚಿಂಚೋಳಿ ಬಂದ್‌ಗೆ ಉತ್ತಮ ಸ್ಪಂದನೆ : ಅಮಿತ್ ಶಾ ಅವರ ಅಣಕು ಶವಯಾತ್ರೆ

Date:

ರಾಜ್ಯಸಭೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ್ದ ಹೇಳಿಕೆ ಖಂಡಿಸಿ ಸೋಮವಾರ ಕರೆ ನೀಡಿದ ಚಿಂಚೋಳಿ ಬಂದ್‌ ಯಶಸ್ವಿಯಾಯಿತು. ಪ್ರತಿಭಟನೆಯಲ್ಲಿ ಅಮಿತ್‌ ಶಾ ಅವರ ಶವಯಾತ್ರೆ ಅಣಕು ಶವಯಾತ್ರೆ ನಡೆಸಿ, ಭಾವಚಿತ್ರ ಪ್ರತಿಕೃತಿ ದಹಿಸಲಾಯಿತು.

ನಾಗರಿಕ ಹಿತರಕ್ಷಣಾ ಸಮಿತಿ ಕರೆ ನೀಡಿದ ಬಂದ್‌ಗೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದರು. ಬೆಳಿಗ್ಗೆ 6 ರಿಂದ ಪ್ರತಿಭಟನೆ ಆರಂಭಿಸಿದ ಹೋರಾಟಗಾರರು, ಮಧ್ಯಾಹ್ನ 2 ಗಂಟೆವರೆಗೆ ಪಾದಯಾತ್ರೆ, ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಬಂದ್‌ ಶಾಂತಿಯುತವಾಗಿ ನಡೆಯಿತು.‌

WhatsApp Image 2025 01 07 at 12.25.01 AM

ಆಸ್ಪತ್ರೆ ಮತ್ತು ಔಷಧಿ ಅಂಗಡಿಗಳು ಹೊರತುಪಡಿಸಿ ಉಳಿದೆಲ್ಲಾ ಅಂಗಡಿಗಳು ಮುಚ್ಚಲ್ಪಟ್ಟಿದ್ದವು. ಬೆಳ್ಳಿಗೆಯಿಂದಲೇ ವ್ಯಾಪಾರಸ್ಥರು ಸ್ವಯಂ ಪ್ರೇರಣೆಯಿಂದ ಅಂಗಡಿ ಮುಚ್ಚಿ ಬಂದ್‌ಗೆ ಬೆಂಬಲಿಸಿದರು. ಸಾರಿಗೆ ಸಂಸ್ಥೆಯ ಬಸ್‌ಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಬಸ್‌ಗಳು ರಸ್ತೆಗಿಳಿಯದ ಕಾರಣ ಪ್ರಯಾಣಿಕರು ಪರದಾಡುತ್ತಿದ್ದ ದೃಶ್ಯಗಳು ಕಂಡು ಬಂದವು. ಶಾಲಾ-ಕಾಲೇಜುಗಳಿಗೆ ಒಂದು ದಿನದ ರಜೆ ಘೋಷಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಟ್ಟಣದ ಡಾ.ಬಿ.ಆರ್.‌ ಅಂಬೇಡ್ಕರ್‌ ವೃತ್ತದಿಂದ ಅಮಿತ್‌ ಶಾ ಅವರ ಅಣಕು ಶವಯಾತ್ರೆ ನಡೆಸಿ, ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಶವವನ್ನು ದಹಿಸಿ ಆಕ್ರೋಶ ಹೊರ ಹಾಕಿದರು. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರನ್ನು ಅಪಮಾನಿಸಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಸಂಪುಟದಿಂದ ವಜಾಗೊಳಿಸಿ, ಗಡಿಪಾರು ಮಾಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಬಹಳಷ್ಟು ಮಾಧ್ಯಮಗಳು ಉದ್ದಿಮೆಯಾಗಿ ಬದಲಾಗಿವೆ: ಶಾಸಕ ಬಿ ಆರ್ ಪಾಟೀಲ್‌

ಪ್ರತಿಭಟನೆಯಲ್ಲಿ ಪ್ರಮುಖರಾದ ಕನ್ನಡ ಪರ ಸಂಘಟನೆಯ ಮುಖಂಡ ಸಚಿನ್ ರಾಠೋಡ್, ತಾಲ್ಲೂಕು ಬಂಜಾರಾ ಸಮಾಜದ ಅಧ್ಯಕ್ಷ ರಾಮಶೆಟ್ಟಿ ಪವಾರ್, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಶರಣು ಪಾಟೀಲ್ ರವಿ ಪೋತಕಪಳ್ಳಿ, ತಾಲ್ಲೂಕು ಕೋಲಿ ಸಮಾಜದ ಮುಖಂಡ ಅನೀಲಕುಮಾರ ಪಾಟೀಲ್ ಹಾಗೂ ಪ್ರಮುಖರಾದ ಗೋಪಾಲ್ ರಾಂಪೂರೆ, ಕಾಮರಾವ್ ಕೊರವಿ, ಗೌತಮ್ ಬೊಮ್ಮನಳ್ಳಿ ಮಾರುತಿ ಗಂಜಗಿರಿ, ಸಂತೋಷ್ ಗುತ್ತೇದಾರ್, ಮಾಣಿಕರಾವ್ ಗುಲಗುಂಜಿ, ಮುಸ್ಲಿಂ ಸಮಾಜದ ಮುಖಂಡ ಅಬ್ದುಲ್ ಬಾಸಿತ್, ರೈತ ಸಂಘಟನೆ ಶರಣಬಸಪ್ಪ ಮಮ್ಮಶೆಟ್ಟಿ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...