ಚಿಂತಾಮಣಿ | ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರಿಂದ ರಸ್ತೆತಡೆ ಪ್ರತಿಭಟನೆ

Date:

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರಗಳನ್ನು ಕೂಗುತ್ತ ರಸ್ತೆಗೆ ಇಳಿದ ಹಾಸ್ಟೆಲ್‌, ಅಂಗನವಾಡಿ, ಗ್ರಾಮ ಪಂಚಾಯಿತಿ, ಬಿಸಿಯೂಟ ಕಾರ್ಯಕರ್ತೆಯರು ಚಿಂತಾಮಣಿ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ನಗರದ ತಾಲೂಕು ಕಚೇರಿ ಎದುರು ಇರುವ ವೃತ್ತದ ರಸ್ತೆಯಲ್ಲಿಯೇ ಮಲಗುವ ಮೂಲಕ ಬೃಹತ್ ರಸ್ತೆತಡೆ ಪ್ರತಿಭಟನೆ ನಡೆಸಿದರು.

ಕಾರ್ಮಿಕ ವಿರೋಧಿ ನಾಲ್ಕು ಲೇಬರ್ ಕೋಡ್‌ಗಳ ಜಾರಿ ವಿರೋಧಿಸಿ, ರೈತ ವಿರೋಧಿ ನೀತಿಗಳನ್ನು ರದ್ದುಮಾಡಲು ಆಗ್ರಹಿಸಿ ಹಾಗೂ ದುಡಿಯುವ ವರ್ಗದ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

“ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡು ದುಡಿಯುವ ಜನರ ಬದುಕನ್ನು ಛಿದ್ರಗೊಳಿಸುವ, ಕಾರ್ಪೊರೇಟ್ ಕಂಪನಿಗಳ ಲೂಟಿಗೆ ರತ್ನಗಂಬಳಿ ಹಾಸುವ ಸಾಲು-ಸಾಲು ಕಾಯ್ದೆಗಳನ್ನು ತರಲು ಹೊರಟಿವೆ. ದುಡಿಯುವ ಜನರ ಬದುಕಿನ ಮೇಲೆ ನಡೆಯಲಿರುವ ಈ ಪ್ರಹಾರವನ್ನು ವಿರೋಧಿಸಿ ದೇಶ ವ್ಯಾಪ್ತಿ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಚಿಂತಾಮಣಿಯಲ್ಲಿಯೂ ಕೂಡ ಪ್ರತಿಭಟನೆ ನಡೆಸುತ್ತಿದ್ದೇವೆ” ಎಂದು ಪ್ರತಿಭಟನಾಕಾರರುನ ಆಕ್ರೋಶ ಹೊರಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಅಂಗನವಾಡಿ ಕಾರ್ಮಿಕರ ಪ್ರತಿಭಟನೆ

“ರಾಜ್ಯದಲ್ಲಿ ಎರಡು ವರ್ಷದ ಹಿಂದೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಒಂದಾದ ಮೇಲೊಂದರಂತೆ ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೊಳಿಸಲು ಮುಂದಾಗಿದೆ. ಎಂಟು ಗಂಟೆಗಳ ದುಡಿತದ ಅವಧಿಯನ್ನು 12 ಗಂಟೆಗಳಿಗೆ ಹೆಚ್ಚಿಸಲು ತಯಾರಿ ನಡೆಸಿದೆ. ಮೂರನೇ ಅವಧಿಗೆ ಅಧಿಕಾರಕ್ಕೆ ಬಂದಿರುವ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ದುಡಿಯುವ ಜನರ ಹಕ್ಕುಗಳನ್ನು ಕಸಿಯುತ್ತಿದೆ. ಈ ಪರಿಸ್ಥಿತಿಗಳನ್ನು ಸುಧಾರಿಸಬೇಕಾದಂತಹ ರಾಜ್ಯ ಸರ್ಕಾರ ತದ್ವಿರುದ್ಧವಾಗಿ 4 ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತರುವ ಮೂಲಕ ಇವುಗಳನ್ನು ದುಡಿಯುವ ಜನರ ಮೇಲೆ ಒತ್ತಾಯ ಪೂರ್ವಕವಾಗಿ ಹೇರುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಚಿಂತಾಮಣಿ | ವಿವಿಧ ಬೇಡಿಕೆ ಈಡೇರಿಸುವಂತೆ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಪ್ರತಿಭಟನೆಯ ನಂತರ ಸಿಡಿಪಿಒ ಇಲಾಖೆಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಿದ ನಂತರ ಪ್ರತಿಭಟನೆಯನ್ನು ಹಿಂಪಡೆದರು.

ಪ್ರತಿಭಟನೆಯಲ್ಲಿ ಕೆಪಿಆರ್‌ಎಸ್ ಆನಂದ್ ಎಂ ಎಸ್, ಹೆಚ್ ಎಸ್ ರಾಜಕುಮಾರ್, ಕೃಷ್ಣಾರೆಡ್ಡಿ, ಟಿ ಎಸ್ ಸೌಭಾಗ್ಯಲಕ್ಷ್ಮಿ, ಹೆಚ್ ಜಿ ಲಕ್ಷ್ಮಿ ನರಸಮ್ಮ, ಆರ್ ಅಮರಾವತಿ, ಸುಜಾತ, ಮಂಜುನಾಥ್, ನರಸಿಂಹಪ್ಪ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...