ಚಿಂತಾಮಣಿ | ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಅಶೋಕ್ ರೆಡ್ಡಿ ಚಾಲನೆ

Date:

ನೂತನ ಕ್ರೀಡಾ ನಿಯಮಗಳಿಂದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಭಾಗವಹಿಸಲು ತೊಂದರೆಯಾಗುತ್ತಿದ್ದು, ಹಳೇ ಕ್ರೀಡಾ ನಿಯಮಗಳನ್ನು ಜಾರಿಗೊಳಿಸಬೇಕು ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಒತ್ತಾಯಿಸಿದರು.

ಚಿಂತಾಮಣಿ ಕಸಬಾ ಹೋಬಳಿ ಮಟ್ಟದ ಕ್ರೀಡಾಕೂಟಗಳನ್ನು ಗುಂಡು ಎಸೆಯುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು “14 ವರ್ಷ ಮತ್ತು 17 ವರ್ಷ ಒಳಪಟ್ಟ ವಯೋಮಾನದ ವಿದ್ಯಾರ್ಥಿಗಳನ್ನು ಎರಡು ವಿಭಾಗಗಳಾಗಿ ಮಾಡಿರುವುದರಿಂದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಪ್ರೌಢಶಾಲಾ ವಿದ್ಯಾರ್ಥಿಗಳೊಂದಿಗೆ ಭಾಗವಹಿಸುವುದು ಕಷ್ಟಕರ. ಆದುದರಿಂದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಕ್ರೀಡೆಗಳಿಂದ ವಂಚಿತರಾಗುತ್ತಿದ್ದಾರೆ. ಈ ಹಿಂದೆ ನಡೆಸುತ್ತಿದ್ದಂತೆ ಪ್ರಾಥಮಿಕ ಮತ್ತು ಪ್ರೌಢಶಾಲಾ ಕ್ರೀಡಾಕೂಟಗಳೆಂದು ಪ್ರತ್ಯೇಕವಾಗಿ ನಡೆಸಬೇಕು” ಎಂದರು.

“ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕವಾಗಿ ಉಲ್ಲಾಸ ಉತ್ಸಾಹ, ಆರೋಗ್ಯವಂತರಾಗಿರಬಹುದು. ಸ್ಪರ್ಧಾ ಮನೋಭಾವ ಬೆಳೆಸಿಕೊಳ್ಳಬಹುದು. ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳು, ಪ್ರತಿಭಾ ಕಾರಂಜಿಗಳು, ಕಲಿಕಾ ಹಬ್ಬಗಳು, ಕಲಿಕೋತ್ಸವಗಳಲ್ಲಿ ಭಾಗವಹಿಸುವುದರ ಮೂಲಕ ತಮ್ಮ ಪ್ರತಿಭೆಯನ್ನು ವ್ಯಕ್ತಪಡಿಸಲು ಸಹಕಾರಿಯಾಗುತ್ತವೆ” ಎಂದು ಆಶಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಧಾರವಾಡ | ನಿರಂತರ ಮಳೆ: ಜಾನುವಾರುಗಳಿಗೆ ಹಾನಿಯಾಗದಂತೆ ಎಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ

“ಕಸಬಾ ಹೋಬಳಿ ವಿದ್ಯಾರ್ಥಿಗಳು ತಾಲೂಕು ಮಟ್ಟದಲ್ಲಿ ವಿಜೇತರಾಗಿ ಹೆಸರು ತರಬೇಕು” ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ತಾಲೂಕು ದೈಹಿಕ ಶಿಕ್ಷಣಾಧಿಕಾರಿ ನರಸಿಂಹಪ್ಪ, ಕ್ರೀಡಾಕೂಟದ ಉಸ್ತುವಾರಿಗಳಾದ ದೈಹಿಕ ಶಿಕ್ಷಕ ಉಪೇಂದ್ರ, ನಗರ ಸಿಆರ್‌ಪಿ ಬಾಸ್ಕರ್ ರೆಡ್ಡಿ, ಬೂರಗಮಾಕಲ ಹಳ್ಳಿ ಸಿಆರ್‌ಪಿ ನಾಗರಾಜ್, ನಗರ ಸೆಕೆಂಡ್ ಸಿಆರ್‌ಪಿ ಲಕ್ಷ್ಮಣ್ ರೆಡ್ಡಿ, ಆನೂರು ಸಿಆರ್‌ಪಿ ಮೆನಸಪ್ಪ, ದೈಹಿಕ ಶಿಕ್ಷಕರು ಹಾಗೂ ವಿದ್ಯಾರ್ಥಿ ಕ್ರೀಡಾಪಟುಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...