ಚಿಂತಾಮಣಿ | ಬ್ಯಾಂಕ್‌ಗಳಲ್ಲಿ ಗೃಹಲಕ್ಷ್ಮಿ ಹಣಕ್ಕೆ ಕತ್ತರಿ; ರೈತ ಸಂಘದಿಂದ ಘೇರಾವು ಎಚ್ಚರಿಕೆ

Date:

ರಾಜ್ಯ ಸರ್ಕಾರ ಮಹಿಳೆಯರಿಗೆ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ರೈತ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಎರಡು ಸಾವಿರಾ ರೂ.ಹಣ ಜಮಾವಣೆ ಮಾಡುತ್ತದೆ. ಆದರೆ, ಬ್ಯಾಂಕಿನವರು ಆ ಹಣವನ್ನು ಹಿಡಿಯುತ್ತಿರುವುದನ್ನು ನಿಲ್ಲಿಸದಿದ್ದರೆ ಪ್ರತಿ ಬ್ಯಾಂಕಿಗೆ ಘೇರಾವು ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಚಿಂತಾಮಣಿ ನಗರದ ತಾಲೂಕು ಪಂಚಾಯತಿ ಕಚೇರಿಯಲ್ಲಿರುವ ಸಿ ಡಿ ಪಿ ಒ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ನಂತರ ಮಾತನಾಡಿದ ಸಂಘದ ತಾಲೂಕು ಅಧ್ಯಕ್ಷ ಕದಿರೇ ಗೌಡ, “ಸ್ಥಳೀಯ ಸಿ ಡಿ ಪಿ ಒ ಅಧಿಕಾರಿಗಳಿಗೆ ಗೃಹಲಕ್ಷ್ಮಿ ಹಣವನ್ನು ಬ್ಯಾಂಕಿನವರು ಪ್ರತಿ ತಿಂಗಳು ರೈತರ ಖಾತೆಯಿಂದ ಕತ್ತರಿಸುತ್ತಿರುವ ಬಗ್ಗೆ ಬಹಳಷ್ಟು ಬಾರಿ ಹೇಳಿದ್ದರೂ ಇಲ್ಲಿವರೆಗೆ ಯಾವುದೇ ರೀತಿ ಕ್ರಮ ವಹಿಸಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಬ್ಯಾಂಕುಗಳ ವ್ಯವಸ್ಥಾಪಕರೊಂದಿಗೆ ಸಭೆ ನಡೆಸಿ ಗೃಹಲಕ್ಷ್ಮಿ ಹಣ ಕತ್ತರಿಸದಂತೆ ಸೂಚನೆ ನೀಡದೆ ನಿರ್ಲಕ್ಷ ವಹಿಸಿದ್ದಾರೆ. ರೈತರು ಬ್ಯಾಂಕುಗಳಲ್ಲಿ ಕೃಷಿ ಸಾಲ ಹಾಗೂ ಇತರೆ ಸಾಲಗಳು ಪಡೆಯಲಾಗಿದೆ. ಆದರೆ ಗೃಹಲಕ್ಷ್ಮಿ ಹಣ ಮಹಿಳೆಯರ ಖಾತೆಗೆ ಬಿದ್ದ ತಕ್ಷಣ ಬ್ಯಾಂಕಿನವರು ಅದನ್ನು ಕತ್ತರಿಸಿ ರೈತರಿಗೆ ಬಹಳಷ್ಟು ತೊಂದರೆ ನೀಡುತ್ತಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ಚಿಂತಾಮಣಿ | ನಿಮಿಷಾ ಪ್ರಿಯಾ ಪ್ರಕರಣ: ತಲಾಲ್ ಕುಟುಂಬದೊಂದಿಗೆ ಡಾ. ಸಿ ಕೆ ಮೌಲಾ ಶರೀಫ್ ಮಾತುಕತೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವ್ಯವಸ್ಥೆಯನ್ನು ಕೂಡಲೇ ಸರಿಪಡಿಸದಿದ್ದರೆ ಸಿ ಡಿ ಪಿ ಒ ಕಚೇರಿಗೂ ಸಹ ಮುತ್ತಿಗೆ ಹಾಕಿ ಉಗ್ರ ಹೋರಾಟ ಮಾಡಲಾಗುವುದು ಎಂದು ವಿವರಿಸಿದರು.

ಪ್ರತಿಭಟನೆಯಲ್ಲಿ ರಾಜ್ಯಾಧ್ಯಕ್ಷರಾದ ರಘುನಾಥರೆಡ್ಡಿ ರಾಜ್ಯ ವಲಯ ಸದ್ಯಸ್ಯ ಯಲ್ಲಪ್ಪ, ಎಸ್ ವಿ ಗಂಗುಲಪ್ಪ ನಾಗರಾಜ್, ತಿಮ್ಮೇಗೌಡ, ಆನಂದರೆಡ್ಡಿ, ಜಿ ಎಂ ಕೊನಪ್ಪ, ನರಸಿಂಹ, ಮುನಿಯಪ್ಪ, ವೆಂಕಟರವಣಪ್ಪ, ವಿ ನಾಗರಾಜ್, ಕೆ ವಿ ರಾಮಪ್ಪ, ಕೆ ಎಂ ಶ್ರೀನಿವಾಸಪ್ಪ, ನಾರಾಯಣಸ್ವಾಮಿ, ಪಿ ನಾಗರಾಜ್, ಅಂಜಪ್ಪ, ಸೀತಾರಾಮ್ ರೆಡ್ಡಿ ಸೇರಿದಂತೆ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...