ಚಿಂತಾಮಣಿ | ಮುರುಗಮಲ್ಲ ದವಾ-ದುವಾ ಆಸ್ಪತ್ರೆಯಲ್ಲಿ ವೈದ್ಯರೇ ಇಲ್ಲ; ವಾರಕ್ಕೆ ಒಂದೇ ದಿನ ಚಿಕಿತ್ಸೆ ಭಾಗ್ಯ

Date:

*2 ಕೋಟಿ ವೆಚ್ಚದಲ್ಲಿ ಆರಂಭಗೊಂಡ ಆಸ್ಪತ್ರೆಯಲ್ಲಿ ಖಾಯಂ ವೈದ್ಯರೇ ಇಲ್ಲ!*

ಚಿಕ್ಕಬಳ್ಳಾಪುರದ ಪುಣ್ಯಕ್ಷೇತ್ರ ಚಿಂತಾಮಣಿಯಲ್ಲಿ ಸುಮಾರು 2 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಹೊಚ್ಚ ಹೊಸ ಆಸ್ಪತ್ರೆಯಲ್ಲಿ ವೈದ್ಯರೇ ಇಲ್ಲದೆ ವಾರಕ್ಕೆ ಒಂದು ದಿನ ಮಾತ್ರ ಚಿಕಿತ್ಸೆ ಸಿಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಮುರುಗಮಲ್ಲ ಗ್ರಾಮದ ಹಜರತ್ ಅಮ್ಮಜಾನ್ ಬಾವಾಜಾನ್ ದರ್ಗಾ ಸಮೀಪವೆ ಒಂದು ವರ್ಷದ ಹಿಂದೆ ದವಾ – ದುವಾ ಎಂಬ ಆಸ್ಪತ್ರೆ ನಿರ್ಮಾಣವಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಂ ಸಿ ಸುಧಾಕರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿದಂತೆ ಹಲವು ನಾಯಕರು ಉದ್ಘಾಟನೆ ಮಾಡಿದ್ದರು. ಆದರೆ ಈ ಆಸ್ಪತ್ರೆಯಲ್ಲಿ ವಾರಕ್ಕೆ ಒಂದೇ ದಿನ ಚಿಕಿತ್ಸೆ ಭಾಗ್ಯ ಲಭ್ಯವಾಗುವುದು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದರಿ ಗ್ರಾಮದ ದರ್ಗಾಗೆ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಬರುವುದಲ್ಲದೆ ಮಾನಸಿಕ ಅಸ್ವಸ್ಥರ ಸಂಖ್ಯೆಯೂ ಸಹ ಇಲ್ಲಿ ಹೆಚ್ಚಾಗಿದೆ. ಅವರಿಗೆ ಉತ್ತಮ ರೀತಿಯಲ್ಲಿ ಚಿಕಿತ್ಸೆ ನೀಡಬೇಕೆಂಬುದು ಸರ್ಕಾರದ ಉದ್ದೇಶವಾಗಿತ್ತು ಆದರೆ ಸರ್ಕಾರದ ಉದ್ದೇಶ ನೀರು ಪಾಲಾಗಿದೆ. ಸುಮಾರು ಎರಡು ಕೋಟಿ ಹಣ ಖರ್ಚು ಮಾಡಿ ಆಸ್ಪತ್ರೆ ಆರಂಭ ಮಾಡಲಾಗಿದ್ದು ಆಸ್ಪತ್ರೆಯಲ್ಲಿ ಖಾಯಂ ವೈದ್ಯರನ್ನೇ ಇದುವರೆಗೂ ಸರ್ಕಾರ ನೇಮಕ ಮಾಡದೇ ಇರುವುದು ಬೇಸರದ ಸಂಗತಿಯಾಗಿದೆ. ಆಸ್ಪತ್ರೆ ವಾರಕ್ಕೆ ಒಂದೇ ದಿನ ಅದು ಬುದುವಾರ ಮಾತ್ರ ಓಪನ್ ಮಾಡಲಾಗುತ್ತದೆ, ಸದರಿ ಗ್ರಾಮದ ಸರ್ಕಾರಿ ಆಸ್ಪತ್ರೆ ವೈದ್ಯರೇ ಅಲ್ಲಿ ನಿರ್ವಹಣೆ ಮಾಡುತ್ತಾರೆ ಆದರೆ ಚೀಟಿಯಲ್ಲಿ ರೋಗಿಯ ಹೆಸರನ್ನು ಬರೆದು ಬೇರೆಡೆಗೆ ರೆಫರ್ ಮಾಡುವುದು ಇವರ ಕೆಲಸ ಅಷ್ಟೇ.

ಇದನ್ನೂ ಓದಿ: ಚಿಂತಾಮಣಿ | ಬಡ್ಡಿ ಹಣದ ವಿಚಾರಕ್ಕೆ ಹಲ್ಲೆ: ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ; ಆಸ್ಪತ್ರೆಗೆ ದಾಖಲು

ಆಸ್ಪತ್ರೆಯ ಒಳಗೆ ಇರುವ ಬೆಡ್ ಮತ್ತು ಇತರೆ ಯಂತ್ರೋಪಕರಣಗಳ ಕವರ್ ಸಹ ಇದುವವರೆಗೂ ತೆಗೆದೆ ಇಲ್ಲ, ಇಲ್ಲಿ ಮಾನಸಿಕ ಅಸ್ವಸ್ತರು ಭೇಟಿ ನೀಡಿದರೆ ಈ ದರ್ಗಾದಲ್ಲಿ ಗುಣಪಡುತ್ತದೆ ಎಂಬ ನಂಬಿಕೆ ಇರುವ ಕಾರಣ ಇಲ್ಲಿಗೆ ಅಪಾರ ಸಂಖ್ಯೆಯಲ್ಲಿ ಮಾನಸಿಕ ಅಸ್ವಸ್ಥರು ಸಹ ಬರುತ್ತಿರುತ್ತಾರೆ. ಈ ಕೂಡಲೇ ಸರ್ಕಾರ ಗಮನವಹಿಸಿ ಆಸ್ಪತ್ರೆಗೆ ಖಾಯಂ ವೈದ್ಯರನ್ನು ನೇಮಿಸಿ ಆಸ್ಪತ್ರೆಯ ನಿರ್ವಹಣೆ ಮಾಡಬೇಕೆಂದು ದರ್ಗಾಗೆ ಬರುವ ಭಕ್ತರು ಮನವಿ ಮಾಡುತ್ತಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...