ಚಿಂತಾಮಣಿ | ಆರು ತಿಂಗಳ ಹಿಂದೆಯೇ ಚಾಲನೆ ಸಿಕ್ಕರೂ ಆಮೆಗತಿಯಲ್ಲಿ ಸಾಗುತ್ತಿರುವ ಚೇಳೂರು ರಸ್ತೆ ಕಾಮಗಾರಿ!

Date:

ರಾಜ್ಯ ಸರ್ಕಾರವು ಹಾಗೂ ಚಿಂತಾಮಣಿ ಶಾಸಕರು, ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಸಿ.ಸುಧಾಕರ್ ಅವರು ಕಳೆದ ಆರು ತಿಂಗಳ ಹಿಂದೆಯೇ ಚಿಂತಾಮಣಿ ಚೇಳೂರು ರಸ್ತೆಯ ರೈಲ್ವೆ ಬ್ರಿಡ್ಜ್ ಯಿಂದ ಚೇಳೂರು ರಸ್ತೆಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ್ದಾರೆ. ಆದರೆ, ಕಾಮಗಾರಿ ಮಾತ್ರವು ಆಮೆಗತಿಯಲ್ಲಿ ಸಾಗುತ್ತಿರುವ ಆರೋಪ ಕೇಳಿಬಂದಿದೆ.

ಅಧಿಕಾರಿಗಳ ಮತ್ತು ಗುತ್ತಿಗೆದಾರದ ನಿರ್ಲಕ್ಷ್ಯದಿಂದ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿರುವುದಾಗಿ ಸಾರ್ವಜನಿಕರು ಆರೋಪಿಸಿದ್ದಾರೆ. ಇದರಿಂದ ರಸ್ತೆಯಲ್ಲಿ ವಾಹನ ಸಂಚಾರವು ಮತ್ತು ಬಸ್ ಸೇರಿದಂತೆ ಭಾರಿ ಗಾತ್ರದ ವಾಹನ ಸಂಚಾರಕ್ಕೆ ತೀವ್ರ ಸಮಸ್ಯೆ ಉಂಟಾಗಿದೆ.

ಆಮೆಗತಿಯಲ್ಲಿ ಕಾಮಗಾರಿ ಸಾಗುತ್ತಿರುವುದರಿಂದ ರಸ್ತೆಯಲ್ಲಿನ ಧೂಳು, ದ್ವಿಚಕ್ರ ವಾಹನ ಸವಾರರ ಜೀವಕ್ಕೆ ಅಪಾಯ ತಂದೊಡಿಡುತ್ತಿದೆ. ಇವಲ್ಲದೇ, ರಸ್ತೆಯ ಎರಡು ಬದಿಯಲ್ಲಿರುವ ರೈತರ ಜಮೀನುಗಳಲ್ಲಿ ಕಳೆದ ಆರು ತಿಂಗಳಿಂದಲೂ ಕೂಡ ಯಾವುದೇ ಬೆಳೆಗಳನ್ನು ಬೆಳೆದರೂ ಆ ಬೆಳೆಗಳ ಮೇಲೆ ಧೂಳು ತುಂಬಿಕೊಳ್ಳುತ್ತಿದೆ. ಇದರಿಂದಾಗಿ ಲಕ್ಷಾಂತರ ರೂ.ನಷ್ಟ ಕಂಡು ಬರುತ್ತಿರುವುದಾಗಿ ಸ್ಥಳೀಯ ರೈತರು ದೂರುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
chelur kamagari 2

ಅಧಿಕಾರಿಗಳು ಗುತ್ತಿಗೆದಾರರಿಗೆ ಹಲವು ಬಾರೀ ಸೂಚಿಸಿದರೂ ಕೂಡ ಮಳೆಯ ನೆಪವೊಡ್ಡಿ ರಸ್ತೆ ಅಭಿವೃದ್ಧಿಯ ಕಾಮಗಾರಿಯನ್ನು ನಿಧಾನಗತಿಯಲ್ಲಿ ಮಾಡುತ್ತಿರುವುದರಿಂದ ರಸ್ತೆಯ ಸಂಚಾರಕರಿಗೆ ಹಾಗೂ ರಸ್ತೆ ಎರಡು ಬದಿಯಲ್ಲಿರುವ ರೈತರ ಜಮೀನುಗಳಲ್ಲಿ ಬೆಳೆಯುವ ಬೆಳೆಗಳೆಲ್ಲವೂ ಹಾಳಾಗಿ ಹೋಗುತ್ತಿವೆ ಎಂದು ಸ್ಥಳೀಯರು ತಮ್ಮ ನೋವು ಹಂಚಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಬಾಗಲಕೋಟೆ | ಸರ್ಕಾರದಿಂದ ಕುರಿಗಾಹಿಗಳ ಹಿತರಕ್ಷಣೆಗೆ ಕಾಯ್ದೆ: ಕುರುಬರ ಪದವೀಧರರ ಸಂಘ ಸ್ವಾಗತ

ಅಧಿಕಾರಿಗಳು ಸಂಬಂಧಪಟ್ಟ ಗುತ್ತಿಗೆದಾರರಿಗೆ ಶೀಘ್ರದಲ್ಲೇ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಬೇಕು. ಸಾರ್ವಜನಿಕರಿಗೆ ಮತ್ತು ರೈತರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಗಮನಕ್ಕೆ ತರಬೇಕು. ನಿರ್ಲಕ್ಷ್ಯ ತೋರುತ್ತಿರುವ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸಂಬಂಧಪಟ್ಟ ಕಾಮಗಾರಿಯನ್ನು ಕೂಡಲೆ ಪೂರ್ಣಗೊಳಿಸಿ ಸಮಸ್ಯೆಗಳಿಂದ ಮುಕ್ತಿ ನೀಡುವಂತೆ ಸಾರ್ವಜನಿಕರು ಹಾಗೂ ರೈತರು ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...