ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದಿಂದ ಗಂಗಾ ಕಲ್ಯಾಣ ಯೋಜನೆಯಡಿ 8 ಮಂದಿ ರೈತರಿಗೆ ಕೊರೆದ ಕೊಳವೆ ಬಾವಿಗಳಿಗೆ ಪಂಪ್ ಸೆಟ್ ಮತ್ತು ಇತರೆ ಸಾಮಗ್ರಿಗಳನ್ನು ವಿತರಣೆ ಮಾಡಲಾಗಿದೆ. ಚಿಂತಾಮಣಿ ನಗರದ ಪಾಲಿಟೆಕ್ನಿಕ್ ಹಿಂಭಾಗ ಇರುವ ಮೈದಾನದಲ್ಲಿ ತಾಲೂಕು ಪಂಚಾಯತಿ ಕಾರ್ಯ ನಿರ್ವಹಣಾಧಿಕಾರಿ ಆನಂದ್ ಪಂಪ್ ಸೆಟ್ ವಿತರಣೆ ಮಾಡಿದರು.
ಬಳಿಕ ಮಾತನಾಡಿದ ಅವರು, “ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದಿಂದ ಸುಮಾರು ಎಂಟು ಜನ ಫಲಾನುಭವಿಗಳಿಗೆ 2021-22 ನೇ ಸಾಲಿಗೆ ಕೊಳವೆಬಾವಿ ಕೊರೆದಿರುವವರಿಗೆ ಪಂಪ್ ಸೆಟ್ ಹಾಗೂ ಕೇಬಲ್ ಅನ್ನು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾಕ್ಟರ್ ಎಂ ಸಿ ಸುಧಾಕರ್ ಅವರ ನಿರ್ದೇಶನದ ಮೇರೆಗೆ ವಿತರಣೆ ಮಾಡಲಾಗಿದ್ದು, ರೈತರು ಇದನ್ನು ಸದುಪಯೋಗ ಪಡೆದುಕೊಳ್ಳಬೇಕು” ಎಂದು ಶುಭ ಹಾರೈಸಿದರು.
ಇದನ್ನು ಓದಿದ್ದೀರಾ..?ಆರೋಗ್ಯ ಸಂಜೀವಿನಿಗೆ ಎಲ್ಲಾ ಖಾಸಗಿ ಆಸ್ಪತ್ರೆ, ನರ್ಸಿಂಗ್ ಹೋಂಗಳಲ್ಲಿ ಜಾರಿಗೆ ನೌಕರರ ಸಂಘ ಮನವಿ
ಈ ಸಂದರ್ಭದಲ್ಲಿ ನಿಗಮದ ಜಿಲ್ಲಾ ಮಟ್ಟದ ಅಧಿಕಾರಿ ಪ್ರಕಾಶ್,ಫಲಾನುಭವಿಗಳಾದ ಕದಿರಪ್ಪ, ಶಿವಶಂಕರಪ್ಪ, ತಿರುಮಲಮ್ಮ, ನಾರಾಯಣಸ್ವಾಮಿ, ಆಂಜಪ್ಪ, ಮುನಿ ನರಸಿಂಹಪ್ಪ, ಪಾಪಮ್ಮ, ನಾರಾಯಣಪ್ಪ ಹಾಗೂ ಇತರರು ಇದ್ದರು.





