ಚಿಂತಾಮಣಿ | ವಿಶೇಷ ಪ್ಯಾಕೇಜ್‌ಗಾಗಿ ಯರಕೋಟೆ ಗ್ರಾಮದಿಂದ ಬೆಂಗಳೂರಿಗೆ ಪಾದಯಾತ್ರೆ

Date:

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಯರಕೋಟೆ ಗ್ರಾಮದ ಅಭಿವೃದ್ಧಿಗೆ ಕೇಂದ್ರ, ರಾಜ್ಯ ಮತ್ತು ಸ್ಥಳೀಯ ಸರ್ಕಾರಗಳಿಂದ ವಿಶೇಷ ಪ್ಯಾಕೇಜ್‌ ಘೋಷಿಸುವಂತೆ ಒತ್ತಾಯಿಸಿ ಯರಕೋಟೆ ಗ್ರಾಮದಿಂದ ಬೆಂಗಳೂರು ಫ್ರೀಡಂ ಪಾರ್ಕ್‌ವರೆಗೆ ಪಾದಯಾತ್ರೆ ಆರಂಭಿಸಲಾಗಿದೆ.

ಯರಕೋಟೆ ಗ್ರಾಮದ ಮಂಜುನಾಥ್ ವೈ ಎನ್ ಎಂಬುವರು ತಮ್ಮ ಗ್ರಾಮದಿಂದ ಬೆಂಗಳೂರಿಗೆ ಪಾದಯಾತ್ರೆ ಬೆಳೆಸಿದ್ದಾರೆ. ಇಂದು ಗ್ರಾಮದ ಶ್ರೀ ಗಂಗಮ್ಮ ದೇವಸ್ಥಾನದಿಂದ ನಾಲ್ಕು ದಿನಗಳ ಕಾಲ್ನಡಿಗೆ ಜನಜಾಥಾ ಮತ್ತು ರಥಯಾತ್ರೆ ಚಲೋ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, “ಯರಕೋಟೆ ಗ್ರಾಮದ ಬಗ್ಗೆ ಹಿರಿಯರಾದ ನೀರಗಂಟಿ ಚಿಂತಪ್ಪನವರು ಹೇಳಿದ ಕಥೆಗಳಿಂದ ಪ್ರೇರಿತಗೊಂಡು 32 ವರ್ಷಗಳ ಕಾಲ ಒಂದು ಗ್ರಾಮದ ಅಭಿವೃದ್ಧಿಯ ಬಗ್ಗೆ ಅಧ್ಯಯನ ಮಾಡಿ 156 ಗ್ರಾಮಗಳಿಗೆ ಸಂಚಾರ ಮಾಡಿದ್ದೇನೆ. ಯಾವುದೇ ರಾಜಕೀಯ ಅಧಿಕಾರವಿಲ್ಲದೇ ಸತತವಾಗಿ 32 ವರ್ಷಗಳಿಂದ ಯರಕೋಟೆ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕೆಲಸ ಮಾಡಲಾಗಿದೆ. ಇದನ್ನು ಮುಂದುವರೆಸಲು ಸರ್ಕಾರಗಳು ಸಹಕಾರ ನೀಡಬೇಕು”

ಸಾಕಷ್ಟು ಕಾರ್ಯಕ್ರಮಗಳ ಅನುಭವದಿಂದ 50 ವರ್ಷಗಳಲ್ಲಿ ಕಾಣದೇ ಇರುವ ಗ್ರಾಮದ ಅಭಿವೃದ್ಧಿ ಕೆಲಸಗಳನ್ನು ಕೇವಲ 5 ವರ್ಷಗಳಲ್ಲಿ ಮಾಡಲು ಸಿದ್ಧನಿದ್ದೇನೆ. ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯಕ್ಕೆ ಮಾದರಿಯಾಗಿ ಅಭಿವೃದ್ಧಿ ಮಾಡಲು ಒತ್ತಾಯಿಸಿ ಈಗಾಗಲೇ 2014 ರಿಂದ 2025 ರವರೆಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಹಲವಾರು ಮನವಿ ಪತ್ರಗಳನ್ನು ನೀಡಲಾಗಿದ್ದು, ಯಾವುದೇ ಪ್ರಯೋಜನವಾಗಿಲ್ಲ. ಯರಕೋಟೆ ಗಂಗಮ್ಮ ದೇವಸ್ಥಾನಕ್ಕೆ ಇಡೀ ಕರ್ನಾಟಕ, ಆಂಧ್ರ ಪ್ರದೇಶ, ತಮಿಳುನಾಡು, ಕೇರಳ ಮತ್ತಿತರ ರಾಜ್ಯಗಳಿಂದ ಸಾವಿರಾರು ಭಕ್ತಾಧಿಗಳಿಗೆ ಭೇಟಿ ನೀಡುತ್ತಾರೆ. ಇದಕ್ಕಾಗಿ ಯರಕೋಟೆ ಗ್ರಾಮದ ಅಭಿವೃದ್ಧಿಗೆ ಕೇಂದ್ರ, ರಾಜ್ಯ ಮತ್ತು ಸ್ಥಳೀಯ ಸರ್ಕಾರಗಳಿಂದ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಬೇಕು” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಚಿಕ್ಕಬಳ್ಳಾಪುರ | ಸರ್ಕಾರಿ ನೌಕರರು ತಮ್ಮ ಹುದ್ದೆಯ ಪಾವಿತ್ರ್ಯತೆಯನ್ನು ಕಾಪಾಡಬೇಕು: ಷಡಕ್ಷರಿ

ಯರಕೋಟೆ ಗ್ರಾಮದಲ್ಲಿ ಉದ್ಯೋಗ ಖಾತರಿ ಯೋಜನೆ ಪ್ರಾರಂಭವಾದಾಗಿನಿಂದ ಲಕ್ಷಾಂತರ ಹಣ ಲೂಟಿಯಾಗುತ್ತಿದ್ದು, ಇದರ ಸಂಪೂರ್ಣ ತನಿಖೆಯಾಗಬೇಕು. ಗ್ರಾಮಸ್ಥರು ವಲಸೆ ಹೋಗುವುದನ್ನು ತಡೆಗಟ್ಟಿ, ಗ್ರಾಮದ ಮೂಲ ಸೌಕರ್ಯ ಅಭಿವೃದ್ಧಿ ಕೆಲಸಗಳಿಗೆ ಅವಕಾಶ ಮಾಡಿಕೊಡಬೇಕು. ಗ್ರಾಮ ಪಂಚಾಯ್ತಿಯಲ್ಲಿ ಅಕ್ರಮವಾಗಿ ಬಿಲ್ಲುಗಳನ್ನು ಮಾಡುತ್ತಿದ್ದಾರೆ. ಇದನ್ನು ಪರಿಶೀಲಿಸಿ ಕೂಡಲೇ ತಪ್ಪಿತಸ್ಥ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರನ್ನು ಕೆಲಸದಿಂದ ಅಮಾನತು ಮಾಡಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...