ಚಿಂತಾಮಣಿ | ಅಧಿಕಾರಿಗಳ ಕಣ್ತಪ್ಪಿಸಿ ಮುನಗನಹಳ್ಳಿ ಕೆರೆಯ ಮಣ್ಣು ಅಕ್ರಮ ‌ಸಾಗಣೆ: ಕ್ರಮಕ್ಕೆ ಒತ್ತಾಯ

Date:

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕಸಬಾ ಹೋಬಳಿಯ ಮುನಗನಹಳ್ಳಿಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ಮೂಲಕ ಕೆರೆಗಳ ಮೂಲ ಸ್ವರೂಪವನ್ನೇ ಹಾಳು ಮಾಡುತ್ತಿದ್ದಾರೆ. ಕೆರೆಗಳನ್ನು ಸಂರಕ್ಷಣೆ ಮಾಡಬೇಕಾದ ಅಧಿಕಾರಿಗಳು ಜಾಣ ಮೌನ ವಹಿಸಿದ್ದಾರೆ ಎಂದು ಸ್ಥಳೀಯರು ಆರೋಸಿದ್ದಾರೆ.

ಚಿಂತಾಮಣಿ ತಾಲೂಕಿನ ಮುನಗನಹಳ್ಳಿ ಗ್ರಾಮದ ಕೆರೆ ಹಾಗೂ ಅಂಗಳದ ಅಕ್ಕಪಕ್ಕ ಹಾಡಹಗಲೇ ರಾಜಾರೋಷವಾಗಿ ಇಲಾಖೆ ಅಧಿಕಾರಿಗಳ ಅನುಮತಿ ಪಡೆಯದೆ ಜೆಸಿಬಿ ಬಳಸಿ ತೋಟಗಳಿಗೆ ಅಕ್ರಮವಾಗಿ ಮಣ್ಣು ಸಾಗಣೆ ಮಾಡುತ್ತಿದ್ದಾರೆ. ಕೆರೆ ಕುಂಟೆ ಸರಿಯಾಗಿ ಇದ್ದರೆ ಮಾತ್ರ ಮಳೆ ನೀರು ಶೇಖರಣೆಯಾಗುತ್ತದೆ. ಇದರಿಂದಾಗಿ ಅಂತರ್ಜಲ ಮಟ್ಟ ವೃದ್ಧಿಯಾಗುತ್ತದೆ. ಆದರೆ,ಕೆಲವು ಜನರು ಹಣದಾಸೆಗೆ ಕೆರೆಗಳಲ್ಲಿ ಅಕ್ರಮವಾಗಿ ಮಣ್ಣುಗಾರಿಕೆ ಮಾಡುವ ಮೂಲಕ ಕೆರೆಗಳ ನಾಶಕ್ಕೆ ಮುಂದಾಗಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.

ಬೇಸಿಗೆ ಕಾಲದಲ್ಲಿ ಕೆರೆಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿದ್ದಂತೆ ನಿತ್ಯ ಜೆಸಿಬಿಯೊಂದಿಗೆ ಹತ್ತಾರು ಟ್ರ್ಯಾಕ್ಟರ್‌ ಬಳಸಿ ಮಣ್ಣು ತೆಗೆಯುವ ದಂಧೆ ಹೆಚ್ಚಾಗುತ್ತಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಸೇರಿದಂತೆ ಇತರ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳು ಕೆರೆಗಳಲ್ಲಿ ಇರುವ ಹೂಳು ತೆಗೆದು ಕೆರೆಗಳನ್ನು ಜೀರ್ಣೋದ್ಧಾರ ಮಾಡುತ್ತಿದ್ದರೆ ಮತ್ತೊಂದು ಕಡೆ ಕೆಲವರು ಅಕ್ರಮ ಮಣ್ಣುಗಾರಿಕೆಯಿಂದ ಹಣ ಸಂಪಾದಿಸಲು ಕೆರೆಗಳನ್ನು ಹಾಳು ಮಾಡಲು ಹೊರಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 07 07 at 10.14.26 AM

ಮಣ್ಣು ತೆಗೆಯುವವರು ವಾರದ ರಜಾ ದಿನಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದು, ಅಧಿಕಾರಿಗಳ ಭಯವಿಲ್ಲದೇ ಮಣ್ಣನ್ನು ಅಕ್ರಮವಾಗಿ ಸಾಗಿಸುತ್ತಿದ್ದಾರೆ ಎಂಬ ದೂರುಗಳು ಕೇಳಿ ಬಂದಿದೆ. ಕಂದಾಯ ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆ,ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ರಜೆ ಇದ್ದರೆ ಸ್ಥಳಕ್ಕೆ ಬರುವುದಿಲ್ಲ ಎಂಬ ಮುಂದಾಲೋಚನೆಯಿಂದ ಮಣ್ಣು ಎತ್ತುವುದು ಎಗ್ಗಿಲ್ಲದೆ ನಡೆಯುತ್ತಿದೆ ಎಂಬುದು ಸಾರ್ವಜನಿಕರ ಆರೋಪ.

ಅಕ್ರಮ ದಂಧೆಯಲ್ಲಿ ತೊಡಗಿರುವವರನ್ನು ಸಾರ್ವಜನಿಕರು ತಡೆದು ಮಣ್ಣು ತೆಗೆಯುವವರನ್ನು ಪ್ರಶ್ನಿಸಿದರೆ ‘ನಾವು ಪರವಾನಗಿ ಪಡೆದಿದ್ದೇವೆ’ ಎಂದು ಸಬೂಬು ಹೇಳುವ ಮೂಲಕ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಆದ್ದರಿಂದ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕೆರೆಗಳಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದರ ಮೂಲಕ ಕೆರೆಗಳನ್ನು ಸಂರಕ್ಷಣೆ ಮಾಡಬೇಕು ಎಂದು ಸಾರ್ವಜನಿಕರ ಒತ್ತಾಯವಾಗಿದೆ.

ಇದನ್ನು ಓದಿದ್ದೀರಾ? ಮಂಗಳೂರು ಗುಂಪು ಹತ್ಯೆ | ಸಂತ್ರಸ್ತ ಅಶ್ರಫ್ ಕುಟುಂಬಕ್ಕೆ ಯುಟಿ ಖಾದರ್, ಸಚಿವ ಜಮೀರ್‌ರಿಂದ ಪರಿಹಾರ ವಿತರಣೆ

ಮುನಗನಹಳ್ಳಿಯ ಕೆರೆ ಹಾಗೂ ಅಂಗಳದಲ್ಲಿ ಅಕ್ರಮವಾಗಿ ಜೆಸಿಬಿ ಮುಖಾಂತರ ಮಣ್ಣು ಎತ್ತುತ್ತಿದ್ದನ್ನು ಸೆರೆ ಹಿಡಿಯಲು ಮಾಧ್ಯಮದವರು ಹೋದ ನಂತರ ಜೆಸಿಬಿ ಹಾಗೂ ಟ್ರಾಕ್ ಅಲ್ಲಿಂದ ನಾಪತ್ತೆಯಾಗಿದೆ. ಇದರ ಮಾಹಿತಿ ಕೂಡಲೇ ತಾಲೂಕು ದಂಡಾಧಿಕಾರಿಗಳ ಗಮನಕ್ಕೆ ತಂದ ತಕ್ಷಣ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ವಾಪಸ್ ಬಂದಿದ್ದಾರೆ.

WhatsApp Image 2025 07 07 at 10.14.26 AM 1

ಈ ಕುರಿತು ಸ್ಥಳೀಯ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯನ್ನು ದೂರವಾಣಿ ಮುಖಾಂತರ ಸಂಪರ್ಕಿಸಿದಾಗ ಕೆರೆಯಲ್ಲಿ ಮಣ್ಣು ಎತ್ತಲು ಪಂಚಾಯತಿಯಿಂದ ಯಾವುದೇ ಅನುಮತಿ ಕೊಟ್ಟಿಲ್ಲ ಎಂದು ಉತ್ತರಿಸಿದ್ದಾರೆ. ಇನ್ನು ತಾಲೂಕು ದಂಡಾಧಿಕಾರಿಗಳು ಮಣ್ಣು ಎತ್ತಿರುವವರ ವಿರುದ್ಧ ಕ್ರಮ ಜರುಗಿಸಲು ಸ್ಥಳೀಯ ಪಂಚಾಯಿತಿಗೆ ನೋಟಿಸ್ ನೀಡಿ ಮಣ್ಣು ಎತ್ತಿರುವವರಿಂದ ದಂಡ ವಸೂಲಿ ಮಾಡಲಾಗುವುದು ಎಂದು ಹೇಳಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...