ಚಿಂತಾಮಣಿ | ಸೆ.13ರಂದು ಲೋಕ ಅದಾಲತ್: ಸದುಪಯೋಗ ಪಡೆದುಕೊಳ್ಳಲು ನ್ಯಾಯಾಧೀಶರ ಮನವಿ

Date:

ಕಕ್ಷಿದಾರರು ಸಣ್ಣಪುಟ್ಟ ವ್ಯಾಜ್ಯಗಳನ್ನು ರಾಜಿ ಸಂಧಾನದ ಮೂಲಕ ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಲೋಕ ಅದಾಲತ್‌ ಕಾರ್ಯಕ್ರಮವು ವರದಾನವಾಗಿವೆ ಎಂದು 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಜಶೇಖರ್ ಅಭಿಪ್ರಾಯಪಟ್ಟರು.

ಚಿಂತಾಮಣಿ ನಗರದ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಸೆಪ್ಟೆಂಬರ್ 13 ರಂದು ನಡೆಯಲಿರುವ ಲೋಕ ಅದಾಲತ್‌ಗೆ ಸಿದ್ದತೆ ಕೈಗೊಳ್ಳುವ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ರಾಜಿ ಸಂಧಾನದ ಮೂಲಕ ವ್ಯಾಜ್ಯಗಳನ್ನು ಇತ್ಯರ್ಥಪಡಿಸಿಕೊಂಡರೆ ಸೌಹಾರ್ದಯುತ ವಾತಾವರಣ ಏರ್ಪಡುತ್ತದೆ. ನ್ಯಾಯಾಲಯಗಳಲ್ಲಿ ಮುಂದುವರೆಸಿಕೊಂಡು ಹೋಗುವುದರಿಂದ ದ್ವೇಷ, ವೈಷಮ್ಯ ಹೆಚ್ಚಾಗುತ್ತದೆ. ಮೊಕದ್ದಮೆಗಳಲ್ಲಿ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಂಡರೆ ಇಬ್ಬರೂ ಗೆದ್ದಂತೆ. ವಿಶೇಷ ಆಂದೋಲನದ ಮೂಲಕ ಎರಡು ತಿಂಗಳ ಕಾಲ ಎಲ್ಲ ಬಗೆಯ ವ್ಯಾಜ್ಯಗಳನ್ನು ರಾಜಿ ಸಂಧಾನದ ಇತ್ಯರ್ಥ ಪಡಿಸಿಕೊಳ್ಳಲು ಕಾಲಾವಧಿ ನೀಡಿರುವುದು ಸುವರ್ಣಾವಕಾಶವಾಗಿದೆ. ಸಾರ್ವಜನಿಕರು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲೋಕ ಅದಾಲತ್‌ಗಳಲ್ಲಿ ಯಾವುದೇ ರೀತಿಯ ಒತ್ತಾಯವಿರುವುದಿಲ್ಲ. ಎರಡೂ ಕಡೆಯವರಿಗೆ ಹಿರಿಯ ವಕೀಲರು ಮಾರ್ಗದರ್ಶನ ಮಾಡುತ್ತಾರೆ. ಸಿವಿಲ್ ವ್ಯಾಜ್ಯಗಳು, ಕುಟುಂಬಗಳ ಆಸ್ತಿ, ಜಮೀನುಗಳ ಪಾಲುದಾರಿಕೆ ವಿವಾದಗಳು, ಸಾಲದ ಪ್ರಕರಣಗಳು ಮತ್ತಿತರ ಪ್ರಕರಣಗಳನ್ನು ಸಂಧಾನದಿಂದ ಬಗೆಹರಿಸಿಕೊಂಡರೆ ಇಬ್ಬರಿಗೂ ಸಹಾಯವಾಗುತ್ತದೆ. ನ್ಯಾಯಾಲಯಗಳಿಗೆ ಅಲೆದಾಡುವ ಸಮಯ, ಹಣಕಾಸಿನ ಖರ್ಚು ಉಳಿತಾಯವಾಗುತ್ತವೆ ಎಂದು ತಿಳಿಸಿದರು.

ಸಣ್ಣ-ಪುಟ್ಟ ಪ್ರಕರಣಗಳನ್ನು ಅದಾಲತ್‌ಗಳಲ್ಲಿ ಇತ್ಯರ್ಥ ಪಡಿಸಿಕೊಳ್ಳುವುದರಿಂದ ನ್ಯಾಯಾಲಯಗಳ ಮೇಲಿನ ಹೊರೆಯೂ ತಗ್ಗುತ್ತದೆ. ಇತರೆ ಪ್ರಕರಣಗಳ ಶೀಘ್ರ ನ್ಯಾಯದಾನಕ್ಕೆ ಅವಕಾಶವಾಗುತ್ತದೆ. ನ್ಯಾಯಾಲಯಗಳಲ್ಲಿ ತೀರ್ಪು ಬರುವುದು ತುಂಬಾ ತಡವಾಗುತ್ತದೆ ಎಂಬುದು ಸಾರ್ವತ್ರಿಕ ದೂರಾಗಿದೆ. ನ್ಯಾಯಾಲಯಗಳ ಮೇಲಿನ ಅಧಿಕ ಹೊರೆ, ಒತ್ತಡ ಇದಕ್ಕೆ ಕಾರಣವಾಗಿದೆ ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶೆ ಜಿ.ಗೀತಾಂಜಲಿ ಮಾತನಾಡಿ, “ಕಳೆದ ಲೋಕ ಅದಾಲತ್‌ನಲ್ಲಿ ದಾಂಪತ್ಯ ವಿರಸದಿಂದ ದೂರವಾಗಿದ್ದ ಎರಡು ಜೋಡಿಗಳು ಒಂದಾದರು. ಹಿರಿಯ ನಾಗರಿಕರೊಬ್ಬರ ಕುಟುಂಬ ಸಮಸ್ಯೆ ಇತ್ಯರ್ಥವಾಯಿತು. ಮಧ್ಯಸ್ಥಿಕೆದಾರರ ಸಂಧಾನದ ಮೂಲಕ ಕಡಿಮೆ ಸಮಯದಲ್ಲಿ ಹೆಚ್ಚಿನ ಖರ್ಚಿಲ್ಲದೆ  ಪರಿಹಾರ ದೊರೆಯುತ್ತದೆ. ಲೋಕ ಅದಾಲತ್‌ಗಳಲ್ಲಿ ಇತ್ಯರ್ಥವಾದ ಪ್ರಕರಣಗಳು ಸಹ ನ್ಯಾಯಾಲಯದ ತೀರ್ಪುಗಳಷ್ಟೇ ಪರಿಣಾಮಕಾರಿಯಾಗಿರುತ್ತವೆ” ಎಂದರು.

ನ್ಯಾಯಾಲಯಗಳಲ್ಲಿ ಇತ್ಯರ್ಥವಾದ ಪ್ರಕರಣಗಳು ಅಲ್ಲಿಗೆ ಮುಕ್ತಾಯವಾಗುವುದಿಲ್ಲ. ತೀರ್ಪಿನ  ವಿರುದ್ಧ ಉನ್ನತ ನ್ಯಾಯಾಲಯಗಳಿಗೆ ಅಪೀಲು ಹೋಗಬಹುದು. ವರ್ಷಗಟ್ಟಲೇ ಅಲೆದಾಡಬೇಕಾಗುತ್ತದೆ. ಲೋಕ ಅದಾಲತ್‌ಗಳಲ್ಲಿ ಇತ್ಯರ್ಥವಾದ ಪ್ರಕರಣಗಳು ಮುಕ್ತಾಯವಾಗುತ್ತವೆ. ಅಪೀಲು ಹೋಗಲು ಅವಕಾಶವಿರುವುದಿಲ್ಲ. ಹೀಗಾಗಿ ಒಮ್ಮೆಲೇ ಪ್ರಕರಣದ ಮುಕ್ತಾಯವಾಗುತ್ತದೆ. ಜನರು ಅದಾಲತ್‌ಗಳ ಬಗ್ಗೆ ತಾತ್ಸಾರ, ಉದಾಸೀನತೆ ತೋರದೆ ವ್ಯಾಜ್ಯಗಳನ್ನು ಇತ್ಯರ್ಥಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಇದನ್ನು ಓದಿದ್ದೀರಾ? ವಿಜಯಪುರ | ಕುರಿಗಾಹಿಗಳ ರಕ್ಷಣೆಗೆ ಆಗ್ರಹ: ಆ.19ರಂದು ‘ಕುರಿಗಾರರ ನಡಿಗೆ ವಿಧಾನಸೌಧದ ಕಡೆಗೆ’ ಹೋರಾಟ

ಪ್ರಧಾನ ಸಿವಿಲ್ ನ್ಯಾಯಾಧೀಶೆ ಆರ್ ಶಕುಂತಲಾ, ಅಧಿಕ ಸಿವಿಲ್ ನ್ಯಾಯಾಧೀಶೆ ಹರ್ಷಿತ, ತಹಶೀಲ್ದಾರ್ ಸುದರ್ಶನ ಯಾದವ್, ವಕೀಲರ ಸಂಘದ ಅಧ್ಯಕ್ಷ ಶ್ರೀನಿವಾಸ್, ಉಪಾಧ್ಯಕ್ಷ ಶಿವಾನಂದ, ಕಾರ್ಯದರ್ಶಿ ಆರ್ ಎಸ್.ಶ್ರೀನಾಥ್ , ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಆನಂದ್ , ಡಿವೈಎಸ್ಪಿ ಮುರಳಿಧರ್, ನಗರಸಭೆ ಪೌರಾಯುಕ್ತ ಜಿ ಎನ್ ಚಲಪತಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...