ಚಿಂತಾಮಣಿ | ಮಂಗಳಮುಖಿಯರಿಂದ ಮುರುಗಮಲ್ಲ ದರ್ಗಾಗೆ ಅರ್ಧ ಕೆಜಿ ತೂಕದ ಬೆಳ್ಳಿ ದೀಪ ಕಾಣಿಕೆ

Date:

ಚಿಂತಾಮಣಿ ತಾಲೂಕು ಮುರಗಮಲ್ಲದಲ್ಲಿನ ಅಮ್ಮಾಜಾನ್ ಬಾಬಾಜಾನ್ ದರ್ಗಾಗೆ ಮಂಗಳಮುಖಿ ಸಲ್ಮಾ ನಾಯ್ಕ್ ರವರ ನೇತೃತ್ವದಲ್ಲಿ ಮಂಗಳಮುಖಿಯರು ಆರ್ಧ ಕೆಜಿ ತೂಕದ ಬೆಳ್ಳಿ ದೀಪದೊಂದಿಗಿನ ಹಸ್ತವನ್ನು ಕಾಣಿಕೆಯಾಗಿ ನೀಡಿದರು.

ಮುರಗಮಲ್ಲ ದರ್ಗಾಗೆ ಭೇಟಿ ನೀಡಿ ಅಮ್ಮಾಜಾನ್ ಬಾಬಾಜಾನ್ಗೆ ವಿಶೇಷ ಪೂಜೆ ಸಲ್ಲಿಸಿದ ಮಂಗಳಮುಖಿಯರು, ಚಿಕ್ಕಬಳ್ಳಾಪುರ ಜಿಲ್ಲಾ ವಕ್ಪ್ ಆಧಿಕಾರಿ ನವೀದ್ ಪಾಷಾ ಹಾಗೂ ಮುರುಗಮಲ್ಲ ದರ್ಗಾ ಸೂಪರ್ವೈಸರ್ ತಯೂಬ್ ನವಾಜ್ ರವರ ಮುಖಾಂತರ ಬೆಳ್ಳಿದೀಪ ಹಸ್ತಾಂತರ ಮಾಡಿದರು.

ಈ ವೇಳೆ ಮಂಗಳಮುಖಿಯರ ನಾಯಕಿ ಸಲ್ಮಾನಾಯ್ಕ್ ಮಾಧ್ಯಮದವರೊಂದಿಗೆ ಮಾತನಾಡಿ, “ನಾವು ಮಂಗಳಮುಖಿಯರಾಗಿ ಎಲ್ಲಾ ಜನರು ಸುಖಶಾಂತಿ ನೆಮ್ಮಂದಿಯಿಂದ ಬಾಳಲಿ ಎಂದು ದೇವರಲ್ಲಿ ಪ್ರಾರ್ಥಿಸಿಕೊಳ್ಳುತ್ತೇವೆ. ನಮಗೂ ಕೂಡ ವಸತಿ ಸೇರಿದಂತೆ ಹಲವು ಸಮಸ್ಯೆಗಳಿವೆ. ಸಚಿವರು ನಮಗೆ ಸೈಟ್ ನೀಡಿ ವಸತಿ ಸೌಲಭ್ಯ ಕಲ್ಪಿಸಬೇಕು. ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಸಮರ್ಪಕವಾಗಿ ನಮಗೆ ತಲುಪಿಸಬೇಕು. ಲೋಕಕಲ್ಯಾಣಾರ್ಥವಾಗಿ ಎಂದು ಎರಡು ತಿಂಗಳ ಹಿಂದೆ ಚಿಂತಾಮಣಿ ನಗರದಲ್ಲಿನ ಗ್ರಾಮದೇವತೆ ಗಂಗಮ್ಮದೇವಿಗೆ ಅರ್ಧ ಕೆಜಿ ಬೆಳ್ಳಿಯನ್ನು ನೀಡಿದ್ದು, ಇಂದು ಮುರುಗಮಲ್ಲ ಅಮ್ಮಾಜಾನ್ ಬಾಬಾಜಾನ್ ದರ್ಗಾಗೆ ಅರ್ಧ ಕೆಜಿ ತೂಕದ ಬೆಳ್ಳಿ ದೀಪವನ್ನು ಕಾಣಿಕೆಯಾಗಿ ನೀಡುತ್ತಿದ್ದೇವೆ. ನಮ್ಮಲ್ಲಿಯೂ ಕೂಡ ವಿದ್ಯಾವಂತರಿದ್ದು ಸರಕಾರ ನಮ್ಮಲ್ಲಿನ ವಿದ್ಯಾವಂತರನ್ನು ಗುರುತಿಸಿ ಸರಕಾರಿ ಉದ್ಯೋಗವನ್ನು ನೀಡಬೇಕೆಂದು” ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಚಿಂತಾಮಣಿ | ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಮಾಜಿ ಸೈನಿಕನ ಪತ್ನಿ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಈ ಸಂದರ್ಭದಲ್ಲಿ ಮಂಗಳಮುಖಿಯರಾದ ಪ್ರಿಯಾ, ಸಂಗೀತ, ಬಿಂದು, ಪೂನಮ್, ಅಶ್ವಿನಿ, ಪುಷ್ಪ, ಗಂಗಾ, ಮುಸ್ಕಾನ್ ಸೇರಿದಂತೆ ಮತಿತ್ತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...