ಚಿಂತಾಮಣಿ | ಸಬ್ ರಿಜಿಸ್ಟರ್ ಕಚೇರಿಯಿಂದ ʼಲಂಚ ಸ್ವೀಕರಿಸುವುದಿಲ್ಲʼವೆಂಬ ನಾಮಫಲಕ ನಾಪತ್ತೆ

Date:

ಸಬ್ ರಿಜಿಸ್ಟರ್ ನಾರಾಯಣಪ್ಪ ವರ್ಗಾವಣೆಯಾದ ಬೆನ್ನಲ್ಲೇ ಅವರು ಹಾಕಿದ್ದ ʼಲಂಚ ಸ್ವೀಕರಿಸುವುದಿಲ್ಲʼವೆಂಬ ನಾಮಫಲಕ ನಾಪತ್ತೆಯಾಗಿರುವ ಘಟನೆ ಚಿಂತಾಮಣಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಂಡುಬಂದಿದೆ.

ಚಿಂತಾಮಣಿ ವಾಣಿಜ್ಯ ನಗರಿಯೆಂದೇ ಹೆಸರುವಾಸಿಯಾಗಿದ್ದು, ಇಲ್ಲಿ ವ್ಯಾಪಾರ ವಹಿವಾಟು ಸೇರಿದಂತೆ ರಿಯಲ್ ಎಸ್ಟೇಟ್ ವ್ಯಾಪಾರವೂ ಕೂಡ ಬಲು ಜೋರಾಗಿ ನಡೆಯುತ್ತದೆ. ಇಲ್ಲಿನ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ನಿತ್ಯವೂ ಹಲವು ಜನ ಮಾರಾಟ ಮಾಡುವ ಜಮೀನುಗಳು ಸೇರಿದಂತೆ ವಿವಾಹ ನೋಂದಣಿ ಪ್ರಕ್ರಿಯೆಗಳೂ ಕೂಡ ಅತಿ ಹೆಚ್ಚಾಗಿ ನಡೆಯುತ್ತವೆ.

ಈ ಹಿಂದೆ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಹಿರಿಯ ಉಪನೋಂದಣಾಧಿಕಾರಿ ನಾರಾಯಣಪ್ಪ ಅವರು ತಮ್ಮ ಕಚೇರಿಯಲ್ಲಿ ಲಂಚವನ್ನು ಬೇಡುವುದು, ಪಡೆಯುವುದು ಅಪರಾಧ. ಭ್ರಷ್ಟತೆಯನ್ನು ವರಿಸುವುದು ಮೆರೆಸುವುದು ದೇಶ ದ್ರೋಹ. ಪ್ರಮಾಣಿಕತೆಯ ಅಳವಡಿಕೆ ನಡವಳಿಕೆ ದೇಶ ಸೇವೆಯಾದರೆ, ಪ್ರಾಮಾಣಿಕರು ನಾವಾಗಿ ದೇಶ ಸೇವೆಯಲ್ಲಿ ಭಾಗಿಯಾಗೋಣ, ಪ್ರಾಮಾಣಿಕ ನಡವಳಿಕೆಯೇ ನಿಜವಾದ ದೇಶ ಸೇವೆ. ʼಲಂಚ ಸ್ವೀಕರಿಸುವದಿಲ್ಲ, ಭ್ರಷ್ಟಾಚಾರವನ್ನು ಬೆಂಬಲಿಸದಿರುವುದಕ್ಕೆ ತಮಗೆ ಧನ್ಯವಾದಗಳುʼ ಎಂಬ ನಾಮಫಲಕವನ್ನು ಕಚೇರಿಯಲ್ಲಿ ಅಳವಡಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾರಾಯಣಪ್ಪ ಅವರು ಕೆಲಸ ನಿರ್ವಹಿಸುತ್ತಿದ್ದಾಗ ಕಚೇರಿಯ ವ್ಯವಸ್ಥೆ ಉತ್ತಮ ರೀತಿಯಲ್ಲಿ ನಡೆಯುತ್ತಿತ್ತು. ಯಾವುದೇ ಕೆಲಸಕ್ಕೆ ಕಚೇರಿಯಲ್ಲಿ ಲಂಚದ ವಾಸನೆ ಬರುತ್ತಿರಲಿಲ್ಲ. ನಾರಾಯಣಪ್ಪ ಒಬ್ಬ ನಿಷ್ಠಾವಂತ ಹಾಗೂ ಭ್ರಷ್ಟಮುಕ್ತ ಅಧಿಕಾರಿಯಾಗಿ ಕೆಲಸ ನಿರ್ವಹಿಸಿದ ಕಾರಣ ಅವರಿಗೆ ಪ್ರಶಸ್ತಿಯೂ ಸಹ ಲಭಿಸಿತ್ತು. ಆದರೆ ಅವರ ಅವಧಿಯಲ್ಲಿ ಕಚೇರಿಗೆ ಅಳವಡಿಸಿದ್ದ ನಾಮಪಲಕಗಳು ಕಾಣುತ್ತಿಲ್ಲ. ಅವರು ವರ್ಗಾವಣೆಯಾದ ಕೂಡಲೇ ಕಚೇರಿಯಲ್ಲಿದ್ದ ನಾಮಫಲಕಗಳು ಎಲ್ಲಿ ಹೋದವು. ಆ ನಾಮಫಲಕಗಳನ್ನು ತೆಗೆದು ಹಾಕಿದವರು ಯಾರು ಎಂಬ ಹತ್ತಾರು ಪ್ರಶ್ನೆಗಳು ಈಗ ಸಾರ್ವಜನಿಕ ವಲಯಗಳಲ್ಲಿ ಸದ್ದು ಮಾಡುತ್ತಿವೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ |‌ ಕುರುಬರಿಗೆ ಎಸ್‌ಟಿ ಮೀಸಲಾತಿ ಕಲ್ಪಿಸುವಂತೆ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಆಗ್ರಹ

ಕಚೇರಿಯಲ್ಲಿ ಯಾವುದೇ ಕೆಲಸ ಮಾಡಿಸಬೇಕೆಂದರೆ ಲಂಚವಿಲ್ಲದೆ ಯಾವುದೇ ಕೆಲಸ ಆಗುವುದಿಲ್ಲವಂತೆ ಎಂಬು ಮಾತುಗಳು ಸಾರ್ವಜನಿಕರಿಂದ ಕೇಳಿಬರುತ್ತಿವೆ.

ಸಬ್ ರಿಜಿಸ್ಟರ್ ಕಚೇರಿಯಿಂದ ಮಾಯವಾಗಿರುವ ʼಲಂಚ ಸ್ವೀಕರಿಸುವುದಿಲ್ಲʼ ಎಂಬ ನಾಮಫಲಕವನ್ನು ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು ಮತ್ತೆ ಹಾಕಿಸುತ್ತಾರೋ ಇಲ್ಲವೋ ಎಂಬುದನ್ನು ಕಾದುನೋಡಬೇಕಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...