ಚಿಂತಾಮಣಿ | ಹಳೆ ವೈಷಮ್ಯ ಹಿನ್ನೆಲೆ: ದಂಪತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ವ್ಯಕ್ತಿ

Date:

ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ದಂಪತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮುರುಗಮಲ್ಲ ಹಾಗೂ ಗಂಡ್ರಗಾನಹಳ್ಳಿ ಮಧ್ಯ ಇರುವ ದುಗ್ಗನಾರೆಪಲ್ಲಿ ಬಳಿ ನಡೆದಿದೆ.

ಹಲ್ಲೆಗೆ ಒಳಗಾದ ವ್ಯಕ್ತಿ ಮುರುಗಮಲ್ಲ ಹೋಬಳಿ ಗಂಡ್ರಗಾನಹಳ್ಳಿ ಗ್ರಾಮದ ಖದೀರ್ ಬೇಗ್ ಎಂಬುವವರ ಪುತ್ರ ರೋಷನ್ ಬೇಗ್(30), ಪತ್ನಿ ಅಸ್ಮ ಸುಲ್ತಾನ(28) ಎಂದು ಗುರುತಿಸಲಾಗಿದೆ.

ರೋಷನ್ ಬೇಗ್ ಸುಮಾರು ಎರಡು ವರ್ಷಗಳಿಂದ ಕಲ್ಪವೃಕ್ಷ ಖಾಸಗಿ ಬಸ್‌ನಲ್ಲಿ ಡ್ರೈವರ್ ಕೆಲಸ ಮಾಡಿಕೊಂಡು ಬರುತ್ತಿದ್ದಾರೆ. ಮುರುಗಮಲ್ಲ ಗ್ರಾಮದ ರಘು ರವರ ಅನುಯಾಯಿ ಗಂಡ್ರಗಾನಹಳ್ಳಿ ಗ್ರಾಮದ ವಾಸಿಯಾದ ಸುರೇಶ್ ಬಿನ್ ನಾರಾಯಣಸ್ವಾಮಿ (32)ಇವರಿಗೂ ಹಾಗೂ ರೋಷನ್ ಬೇಗ್ ನಡುವೆ ಎರಡು ತಿಂಗಳ ಹಿಂದೆ ಮೀಲಾದುನ್ನಬಿ ಹಬ್ಬದಂದು ಗಲಾಟೆಯಾಗಿದ್ದು, ಗ್ರಾಮದ ಹಿರಿಯ ಮುಖಂಡರು ಪಂಚಾಯಿತಿಗಳು ಮಾಡಿ ರಾಜಿ ಪಂಚಾಯತಿ ಮಾಡಿದ್ದಾರೆ. ಹೀಗಿರುವಾಗ, ಮತ್ತೆ ಪದೇ ಪದೇ ಸುರೇಶ್ ಹಾಗೂ ಅವನ ಅನುಯಾಯಿಗಳನ್ನು ಕರೆದುಕೊಂಡು ಹೋಗಿ ರೋಷನ್ ಬೇಗ್‌ಗೆ ಗುರಾಯಿಸುವುದು ರೇಗಿಸುವುದು ಮಾಡುತ್ತಿದ್ದ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾನುವಾರ ರಾತ್ರಿ 10:30ಕ್ಕೆ ಡ್ರೈವರ್ ಕೆಲಸ ಮುಗಿಸಿ ಮನೆ ಕಡೆ ರೋಷನ್ ಬೇಗ್ ತನ್ನ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಸುರೇಶ್ ಹಿಂಬಾಲಿಸಿ ಚಾಕುವಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಇನ್ನೂ ಅಲ್ಲಿಗೆ ಬಂದ ರೋಶನ್ ಬೇಗ್ ಅವರ ಧರ್ಮಪತ್ನಿ ಅಸ್ಮ ಸುಲ್ತಾನ ಅವರ ಮೇಲೆಯೂ ಸಹ ಹಲ್ಲೆ ನಡೆಸಿದ್ದು, ಹಲ್ಲೆಗೆ ಒಳಗಾದ ಪತಿ-ಪತ್ನಿ ಚಿಂತಾಮಣಿ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನು ಓದಿದ್ದೀರಾ? ಉಡುಪಿ | ಸಿಎನ್‌ಜಿ ಇಂಧನ ಕೇಂದ್ರಗಳ ಕೊರತೆ; ಶಾಶ್ವತ ಪರಿಹಾರಕ್ಕೆ ಕಾಯುತ್ತಿದ್ದಾರೆ ಆಟೋ ಚಾಲಕರು

ಕೆಂಚಾರ್ಲಹಳ್ಳಿ ಪೊಲೀಸರಿಗೆ ಮಾಹಿತಿ ಮುಟ್ಟಿಸಿದ ತಕ್ಷಣ ಪೊಲೀಸರು ಆಸ್ಪತ್ರೆಗೆ ಧಾವಿಸಿ ಇಬ್ಬರಿಂದ ಹೇಳಿಕೆ ಪಡೆದುಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...