ಚಿಂತಾಮಣಿ | ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅದ್ದೂರಿ ಆಚರಣೆಗೆ ಪೂರ್ವಭಾವಿ ಸಭೆ

Date:

ಶ್ರೀ ಮಹರ್ಷಿ ವಾಲ್ಮೀಕಿ ಎಲ್ಲ ವರ್ಗಗಳಿಗೂ ಸೇರಿದ್ದು. ಅಂತಹ ಮಹಾನ್ ವ್ಯಕ್ತಿಯ ಜಯಂತಿಯನ್ನು ಅವರ ಮಾರ್ಗದರ್ಶನ, ತತ್ವಾದರ್ಶಗಳನ್ನು ಇಂದಿನ ಪೀಳಿಗೆಯು ಅರ್ಥಪೂರ್ಣವಾಗಿ ಅನುಕರಣೆ ಮಾಡುವ ರೀತಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಬೇಕು ಎಂದು ಚಿಂತಾಮಣಿ ತಾಲೂಕು ಆಡಳಿತ, ತಾಲೂಕು ಪಂಚಾಯತ್, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮತಿಯ ಅಧ್ಯಕ್ಷ ತಹಶೀಲ್ದಾರ್ ಸುದರ್ಶನ್ ಯಾದವ್ ಕರೆ ನೀಡಿದರು.

ಮಹರ್ಷಿ ವಾಲ್ಮೀಕಿ ಜಯಂತಿ ಹಿನ್ನಲೆ ಸಮುದಾಯದ ಮುಖಂಡರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಚಿಂತಾಮಣಿ ತಾಲೂಕು ಪಂಚಾಯತ್‌ನ ಸಾಮರ್ಥ್ಯ ಸೌಧದ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೆಲವು ಇಲಾಖೆಯ ಅಧಿಕಾರಿಗಳು ಗೈರು ಹಾಜರಿ ಆಗಿರುವುದಕ್ಕೆ ಸಮುದಾಯದ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು. ಗೈರು ಹಾಜರಾಗಿರುವ ಇಲಾಖೆಯ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡುವಂತೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಡೊಳ್ಳುಕುಣಿತ, ವೀರಗಾಸೆ, ಪೂರ್ಣಕುಂಭ ಕಳಶಗಳೊಂದಿಗೆ ಅದ್ದೂರಿಯಾಗಿ ಆಚರಿಸಲು ಸಮುದಾಯದವರು ಸಹಕಾರ ಅಗತ್ಯವೆಂದರು.

“ಎಸ್‌ಟಿ ವಸತಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಎಲ್ಲ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಸರ್ಕಾರಿ ಕಚೇರಿಯಲ್ಲಿ ಜಯಂತಿ ಆಚರಣೆ ಮಾಡಿ ದೀಪಾಲಂಕಾರದ ವ್ಯವಸ್ಥೆಯನ್ನು ಕಲ್ಪಿಸಬೇಕು. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಹಾಗೂ ಸಮುದಾಯದ ಸಾಧಕರನ್ನು ಸನ್ಮಾನಿಸಲಾಗುವುದು” ಎಂದು ತಿಳಿಸಿದರು.

ಸಮುದಾಯದ ಯುವ ಮುಖಂಡ ಆನಂದ್ ಮಾತನಾಡಿ, “ಕುರುಬ ಜನಾಂಗವನ್ನು ಎಸ್‌ಟಿ ಪಂಗಡಕ್ಕೆ ಸೇರ್ಪಡೆ ಮಾಡುತ್ತಿರುವುದಕ್ಕೆ ತೀವ್ರ ಬೇಸರ ಉಂಟಾಗಿದೆ. ಪ್ರಬಲ ಸಮುದಾಯ ಸೇರ್ಪಡೆಯಿಂದಾಗಿ ತೀರಾ ಹಿಂದುಳಿದ ಎಸ್‌ಟಿ ಸಮುದಾಯಕ್ಕೆ ಅನ್ಯಾಯವಾಗುತ್ತದೆ. ಅದನ್ನು ಸರಿಪಡಿಸುವಂತೆ ಹಾಗೂ ಸರ್ಕಾರಕ್ಕೆ ನಮ್ಮ ಸಮುದಾಯದ ಪರವಾಗಿ ಮನವಿ ಸಲ್ಲಿಸಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಆರ್ಥಿಕ ಅಭಿವೃದ್ಧಿಗೆ ಸಹಕಾರ; ಕರ್ನಾಟಕ-ನ್ಯೂಜೆರ್ಸಿ ಒಪ್ಪಂದ: ಪ್ರಿಯಾಂಕ್‌ ಖರ್ಗೆ

ಈ ಸಂದರ್ಭದಲ್ಲಿ ಬಿಇಒ ಉಮಾದೇವಿ, ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕ ಶ್ರೀನಿವಾಸ್‌ನಾಯಕ್, ಪೌರಾಯುಕ್ತ ಜಿ ಎನ್ ಚಲಪತಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್ ಅಶೋಕ್‌ಕುಮಾರ್, ಪತ್ರಕರ್ತ ಹಾಗೂ ಸಮುದಾಯದ ಹಿರಿಯ ಮುಖಂಡ ರಾಧಾಕೃಷ್ಣ, ನಲ್ಲಗುಟ್ಟಹಳ್ಳಿ ಆನಂದ್, ಕೆ ಪಿ ನಾರಾಯಣಸ್ವಾಮಿ ಮಂಜುನಾಥ್, ಸುಬ್ರಮಣಿ, ವೇಣುಗೋಪಾಲ್, ವಕೀಲ ಮುನಿಕೃಷ್ಣ, ರವಿ, ಪಿ ಸಿ ಹಳ್ಳಿ ನಾಯಕ್, ಮುನಿವೆಂಕಟಪ್ಪ, ಮಾಡಿಕೆರೆ ಮಣಿಕಂಠ, ಶಂಕರ್, ನರೇಶ್, ನರಸಿಂಹ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಸಮುದಾಯದ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...