ಚಿಂತಾಮಣಿ | ಕೋಲ್ಕತ್ತಾ ಘಟನೆ ಖಂಡಿಸಿ ಖಾಸಗಿ ಆಸ್ಪತ್ರೆ, ಕ್ಲೀನಿಕ್‌ಗಳು ಇಂದು ಬಂದ್

Date:

ಆಗಸ್ಟ್ 9 ರಂದು ಪಶ್ಚಿಮ ಬಂಗಾಳದ ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ಆಗಸ್ಟ್ 17 ಶನಿವಾರ ಬೆಳಗ್ಗೆ 6 ರಿಂದ ಆಗಸ್ಟ್ 18 ಭಾನುವಾರದಂದು ಬೆಳಗ್ಗೆ 6 ಗಂಟೆವರಿಗೆ ಖಾಸಗಿ ಆಸ್ಪತ್ರೆಗಳು ಬಂದ್ ಮಾಡುವುದಾಗಿ ಚಿಂತಾಮಣಿಯ ಐ.ಎಂ.ಎ. ಅಧ್ಯಕ್ಷ ಡಾ.ಪಾಷಾ ತಿಳಿಸಿದ್ದಾರೆ.

ಅತ್ಯಾಚಾರ ಹಾಗೂ ಕೊಲೆಯಾದ ಕೋಲ್ಕತ್ತಾದ ಟ್ರೈನಿ ವೈದ್ಯೆಗೆ ನ್ಯಾಯ ದೊರಕಿಸುವ ಹಿನ್ನೆಲೆಯಲ್ಲಿ ಈ ಬಂದ್‌ಗೆ ಕರೆ ನೀಡಲಾಗಿದೆ. ಬಂದ್‌ನ ಸಮಯದಲ್ಲಿ ಒಪಿಡಿ ಹಾಗೂ ಸಾಮಾನ್ಯ ಶಸ್ತ್ರಚಿಕಿತ್ಸೆಗಳನ್ನು ನಡೆಸಲಾಗುವುದಿಲ್ಲ. ದೇಶಾದ್ಯಂತ ಆಧುನಿಕ ಔಷಧ ವೈದ್ಯರ ಸೇವೆಯನ್ನು ಹಿಂತೆಗೆದುಕೊಳ್ಳಲಾಗುತ್ತದೆ. ಐಎಂಎ ತಿಳಿಸಿದೆ.

ಐ.ಎಂ.ಎ. ಕಾರ್ಯದರ್ಶಿ ಡಾ. ಶ್ರೀಧರ್ ಮಾತನಾಡಿ, “ಪಶ್ಚಿಮ ಬಂಗಾಳದ ಸರ್ಕಾರಿ ಆರ್.ಜಿ.ಕಾರ್ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ಕೊಲೆಯನ್ನು ನಡೆಸಿದ್ದಲ್ಲದೆ ಕಿಡಿಗೇಡಿಗಳು ಆಸ್ಪತ್ರೆಯ ಆವರಣಕ್ಕೆ ನುಗ್ಗಿ ಆಸ್ಪತ್ರೆಯ ಕಟ್ಟಡ, ತುರ್ತು ವಿಭಾಗ, ಶುಶ್ರೂಷೆ ಕೇಂದ್ರ, ವೈದ್ಯಕೀಯ ಯಂತ್ರೋಪಕರಣ, ಪೀಠೋಕರಣ, ಔಷಧ ಕೇಂದ್ರ, ಹೊರರೋಗಿ ವಿಭಾಗ ಹಾಗೂ ಇತರ ವೈದ್ಯಕೀಯ ಸಲಕರಣೆಗಳನ್ನು ಧ್ವಂಸಗೊಳಿಸಿದ್ದಾರೆ. ಹಿಂಸಾಚಾರ ಹಾಗೂ ದೃಷ್ಕೃತ್ಯಗಳನ್ನು ನಡೆಸಿದ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆಯಾಗಬೇಕೆಂದು ಚಿಂತಾಮಣಿ ತಾಲ್ಲೂಕು ಐ.ಎಂ.ಎ. ವತಿಯಿಂದ 24 ಗಂಟೆಗಳ ಧರಣಿಯನ್ನು ಹಮ್ಮಿಕೊಂಡಿದ್ದೇವೆ‌. ಆಗಸ್ಟ್ 17 ಶನಿವಾರ ಬೆಳಿಗ್ಗೆ 6 ರಿಂದ ಆಗಸ್ಟ್ 18 ಭಾನುವಾರದಂದು ಬೆಳಿಗ್ಗೆ 6 ಗಂಟೆವರಿಗೆ ಖಾಸಗಿ ಆಸ್ಪತ್ರೆ, ಆಯುರ್ವೇದ, ಡೆಂಟಲ್ ಡಾಕ್ಟರ್, ಕ್ಲೀನಿಕ್, ಓ.ಪಿ.ಡಿ. ಲ್ಯಾಬ್ ಸೇವೆಗಳು ಇರುವುದಿಲ್ಲ ಆದರೆ, ಅಪಘಾತ ಅಥವಾ ತುರ್ತು ಚಿಕಿತ್ಸೆ, ಪ್ರಾಣಾಪಾಯ ಸಂದರ್ಭಗಳಲ್ಲಿ ಚಿಕಿತ್ಸೆ ನೀಡಲು ಕೆಲವು ಆಸ್ಪತ್ರೆಗಳು ತೆರೆದಿರುತ್ತದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಿಂಸಾಚಾರ ಮತ್ತು ದುಷ್ಕೃತ್ಯಗಳನ್ನು ಡಾಕ್ಟರ್ ಅಥವಾ ಆಸ್ಪತ್ರೆ, ಕ್ಲೀನಿಕ್‌ಗಳ ಮೇಲೆ ನಡೆಸುವವರಿಗೆ ತಕ್ಕ ಶಿಕ್ಷೆಯನ್ನು ನೀಡುವ ನಿಯಮಾವಳಿಗಳನ್ನು ಕೇಂದ್ರ ಸರ್ಕಾರ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಧರಣಿ ನಿರತ ಡಾಕ್ಟರ್ ಹಾಗು ಸಿಬ್ಬಂದಿಗಳು ಬೆಳಿಗ್ಗೆ 10 ಗಂಟೆಗೆ ಪ್ರವಾಸಿ ಮಂದಿರದಿಂದ ಜೋಡಿ ರಸ್ತೆಯ ಪಿ.ಸಿ.ಆರ್.ಕಾಂಪ್ಲೆಕ್ಸ್ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ನಂತರ ತಾಲ್ಲೂಕು ಕಛೇರಿಯಲ್ಲಿ ತಹಶೀಲ್ದಾರ್ ರವರಿಗೆ ಮನವಿ ಪತ್ರವನ್ನು ಸಲ್ಲಿಸುವುದಾಗಿ ತಿಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...