ಚಿಂತಾಮಣಿ | ಕೀಟ ನಾಶಕಗಳ ಅಸುರಕ್ಷಿತ ಬಳಕೆಯಿಂದ ನಮ್ಮ ಆಹಾರ ಕಲುಷಿತವಾಗುತ್ತಿದೆ: ಡಾ. ಎ. ಸಿದ್ದೀಕಿ

Date:

ಇತ್ತೀಚಿನ ವರ್ಷಗಳಲ್ಲಿ ಕೀಟನಾಶಕಗಳ ಅಸುರಕ್ಷಿತ ಬಳಕೆಯಿಂದ ನಾವು ತಿನ್ನುವ ಆಹಾರ ಕಲುಷಿತವಾಗುತ್ತಿದೆ, ಹಾಗೆಯೇ ನಮ್ಮ ಪರಿಸರ ಕೂಡ ಮಾಲಿನ್ಯಗೊಳ್ಳುತ್ತಿದೆ. ಇಂದರಿಂದಾಗಿ ಮನುಷ್ಯರ ಆರೋಗ್ಯ ಕೂಡ ತೀವ್ರವಾಗಿ ಹದಗೆಡುತ್ತಿದೆ ಎಂದು ಬೆಂಗಳೂರಿನ ಪ್ರಾದೇಶಿಕ ಕೇಂದ್ರೀಯ ಸಮಗ್ರ ಪೀಡೆ ನಿರ್ವಹಣಾ ಕೇಂದ್ರದ ಜಂಟಿ ನಿರ್ದೇಶಕ ಡಾ. ಎ. ಸಿದ್ದೀಕಿ ತಿಳಿಸಿದರು.

ಅವರು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿರುವ ರೇಷ್ಮೆ ಮತ್ತು ಕೃಷಿ ಕಾಲೇಜಿನಲ್ಲಿ ಕೇಂದ್ರ ಸರ್ಕಾರದ ಸಂಸ್ಥೆಯಾದ, ಸಸ್ಯ ಸಂರಕ್ಷಣೆ, ಸಂಘರೋಧ ಮತ್ತು ಸಂಗ್ರಹಣಾ ನಿರ್ದೇಶನಾಲಯದಡಿಯಲ್ಲಿ ಬೆಂಗಳೂರಿನ ಪ್ರಾದೇಶಿಕ ಕೇಂದ್ರೀಯ ಸಮಗ್ರ ಪೀಡೆ ನಿರ್ವಹಣಾ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ ಎರಡು ದಿನದ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.

“ಪೀಡೆನಾಶಕಗಳ ಬಳಕೆಯ ಕುರಿತು ರೈತ ಬಾಂಧವರಿಗೆ ಜಾಗೃತಿ ಮೂಡಿಸುವುದು ಅತ್ಯಾವಶ್ಯಕವಾಗಿದೆ. ಸಮಗ್ರ ಪೀಡೆ ನಿರ್ವಹಣೆಯ ಪ್ರಾಮುಖ್ಯತೆಯನ್ನು ತಿಳಿಸುವ ಅವಶ್ಯಕತೆ ಇದೆ” ಎಂದು ಅಭಿಪ್ರಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 08 13 at 2.34.34 PM

ಮಿತ-ಶತ್ರು ಕೀಟಗಳು ಮತ್ತು ಸಮಗ್ರ ಪೀಡೆ ನಿರ್ವಹಣಾ ಕೇಂದ್ರದ ಕಾರ್ಯವೈಖರಿಯ ಬಗ್ಗೆ ಸಸ್ಯ ಸಂರಕ್ಷಣಾ ಅಧಿಕಾರಿ (ಕೀಟಶಾಸ್ತ್ರ) ಡಾ. ವಿವೇಕ್ ಉಪ್ಪಾರ್ ಹಾಗೂ ಸಹಾಯಕ ಸಸ್ಯ ಸಂರಕ್ಷಣಾ ಅಧಿಕಾರಿ (ಸಸ್ಯ ರೋಗಶಾಸ್ತ್ರ) ಡಾ. ವಿನಯ್, ಜೆ. ಯು. ಸಮಗ್ರ ರೋಗ ನಿರ್ವಹಣೆಯ ಮಹತ್ವ ಮತ್ತು ವಿಧಾನಗಳ ಬಗ್ಗೆ ಉಪನ್ಯಾಸ ನೀಡಿದರು.

ಕೃಷಿ ಕೀಟಶಾಸ್ತ್ರದ ಪ್ರಾಧ್ಯಾಪಕ ಡಾ. ಮಂಜುನಾಥ .ಆರ್, ಬೆಳೆಗಳಲ್ಲಿ ಸಮಗ್ರ ಕೀಟ ನಿರ್ವಹಣೆ ಕುರಿತು ಉಪನ್ಯಾಸ ನೀಡಿದರು. ಡಾ. ನರಸಾರೆಡ್ಡಿ, ಜಿ ಪೀಡೆನಾಶಕಗಳ ಸುರಕ್ಷಿತ ಉಪಯೋಗದ ಕುರಿತು ಉಪನ್ಯಾಸ ನೀಡಿದರು.

ಸಹಪ್ರಾಧ್ಯಾಪಕ ಡಾ. ಮಹೇಶ್, ಎಂ ಸಸ್ಯ ರೋಗ ನಿರ್ವಹಣೆಯಲ್ಲಿ ಜೈವಿಕ ರೋಗನಾಶಗಳ ಬಳಕೆ ಮತ್ತು ಇವುಗಳ ಅಭಿವೃದ್ಧಿ ಕುರಿತು ಉಪನ್ಯಾಸ ಮತ್ತು ಪ್ರಾಯೋಗಿಕ ತರಬೇತಿಯನ್ನು ನೀಡಿದರು.

ಡಾ. ಮಂಜುನಾಥ, ಆರ್., ಶಿಬಿರಾರ್ಥಿಗಳನ್ನು ಕ್ಷೇತ್ರ ಭೇಟಿಗೆ ಕರೆದೊಯ್ದು ಮಾವು ಬೆಲೆಯಲ್ಲಿ ಸಮಗ್ರ ಪೀಡೆ ನಿರ್ವಹಣೆ ಕುರಿತು ತಿಳಿಸಿಕೊಟ್ಟರು. ಡಾ. ಆರತಿ ಪನ್ನೂರೆ ಪರಭಕ್ಷಕ ಮತ್ತು ಪರಾವಲಂಬಿ ಜೀವಿಗಳ ಅಭಿವೃದ್ಧಿ ಮತ್ತು ಉಪಯೋಗಗಳ ಬಗ್ಗೆ ತಿಳಿಸಿಕೊಟ್ಟರು. ಮಣ್ಣಿನ ಅರೋಗ್ಯ ಮತ್ತು ಪೀಡೆನಾಶಕಗಳ ಅವಶೇಷಗಳ ಬಗ್ಗೆ ಸಹಾಯಕ ಪ್ರಾಧ್ಯಾಪಕ ಡಾ. ನವೀನ್ ಅವರು ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಹುಣಸೆಯಲ್ಲಿ ಬರುವ ಚಹಾ ಸೊಳ್ಳೆಯ ಸಮಗ್ರ ನಿರ್ವಹಣೆಯ ಬಗ್ಗೆ ಪ್ರಕಟಣೆಯನ್ನು ಬಿಡುಗಡೆಗೊಳಿಸಲಾಯಿತು. ಶಿಬಿರಾರ್ಥಿಗಳಿಗೆ ಜೈವಿಕ ರೋಗನಾಶಕಗಳಾದ, ಸುಡೋಮೋನಾಸ್ ಫ್ಲ್ಯೂರೋಸೆನ್ಸ್ ಮತ್ತು ಟ್ರೈಕೋಡರಂ ವಿರಿಡೆಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿಂತಾಮಣಿಯ ರೇಷ್ಮೆ ಮತ್ತು ಕೃಷಿ ಕಾಲೇಜಿನ ಸಸ್ಯ ಸಂರಕ್ಷಣೆ ವಿಭಾಗದ ಮುಖ್ಯಸ್ಥ ಡಾ. ರಾಮಕೃಷ್ಣ ನಾಯ್ಕ ವಹಿಸಿದ್ದರು. ಸಹಾಯಕ ಪ್ರಾಧ್ಯಾಪಕ ಡಾ. ಎಂ. ವಿ. ಶ್ರೀನಿವಾಸರೆಡ್ಡಿ, ಉಪ-ನಿರ್ದೇಶಕರಾದ ಡಾ. ಅತಿಷಿ ಪಾಂಡೆ, ಸಸ್ಯ ಸಂರಕ್ಷಣಾ ಅಧಿಕಾರಿ ಡಾ. ವಿವೇಕ್ ಉಪ್ಪಾರ್, ಸಹಾಯಕ ಸಸ್ಯ ಸಂರಕ್ಷಣಾ ಅಧಿಕಾರಿ ಡಾ. ವಿನಯ್, ಜೆ. ಯು ಉಪಸ್ಥಿತರಿದ್ದರು.

WhatsApp Image 2024 08 13 at 2.34.22 PM
WhatsApp Image 2024 08 13 at 2.34.23 PM
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...