ಬೀದರ್‌ ಕೋಟೆ ಮೇಲೆ ಲೋಹದ ಹಕ್ಕಿಗಳ ಚಿತ್ತಾರ; ಕಣ್ತುಂಬಿಕೊಂಡ ಜನ

Date:

ಬೀದರ್‌ ನಗರದ ಬಹಮನಿ ಕೋಟೆ ಆವರಣದಲ್ಲಿ ಜಿಲ್ಲಾಡಳಿತ ಹಾಗೂ ಭಾರತೀಯ ವಾಯುಪಡೆ ಸಹಯೋಗದಲ್ಲಿ ಏರ್ಪಡಿಸಿದ ಏರ್‌ ಶೋ ಕಾರ್ಯಕ್ರಮಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.

ಬೀದರನ ಸೂರ್ಯಕಿರಣ ಏರೋಬ್ಯಾಟಿಕ್ ತಂಡದಿಂದ ಆಕರ್ಷಕ ಏರ್ ಶೋ ನಡೆಯಿತು. ಸೂರ್ಯಕಿರಣ ತಂಡದ ನಾಯಕ ಗುರುಪ್ರಿತಸಿಂಗ್ ದಿಲ್ಲೋನ್ ನೇತೃತ್ವದಲ್ಲಿ ನಡೆದ ಏರ್ ಶೋ ಕಾರ್ಯಕ್ರಮದಲ್ಲಿ 9 ಸೂರ್ಯಕಿರಣ ವಿಮಾನಗಳು ವಿವಿಧ ರೀತಿಯಲ್ಲಿ ಆಕರ್ಷಕ ಪ್ರದರ್ಶನ ನೀಡುವ ಮೂಲಕ ನೋಡುಗರನ್ನು ಮಂತ್ರಮುಗ್ದರನ್ನಾಗಿಸಿದವು.

WhatsApp Image 2024 08 31 at 8.41.49 AM

ಸೂರ್ಯಕಿರಣ ವಿಮಾನಗಳು ಆಕಾಶದಲ್ಲಿ ಮೇಲಿನಿಂದ ಕೆಳಗೆ. ಪರಸ್ಪರ ಮುಖಾಮುಖಿ ಕ್ರಾಸಿಂಗ್, ಬ್ಯಾರಲ್ ರೋಲ್ ಸೇರಿದಂತೆ ಕೇಸರಿ, ಬಿಳಿ, ಹಸಿರು ಬಣ್ಣ ಹಾಗೂ ವಿವಿಧ ವೈಮಾನಿಕ ಪ್ರದರ್ಶನ ನೋಡುಗರನ್ನು ಮೂಕವಿಸ್ಮಿತಗೊಳಿಸಿ ಆಕಾಶದಲ್ಲಿ ಚಿತ್ತಾರಗಳನ್ನು ಮೂಡಿಸಿದವು. ಬಾನಂಗಳದಲ್ಲಿ ವಿಮಾನಗಳು ಯಾವ ದಿಕ್ಕಿನಿಂದ ಹಾರುತ್ತಿವೆ ಎನ್ನುವುದನ್ನು ಜನರು ಕುತೂಹಲದಿಂದ ವೀಕ್ಷಿಸುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 08 31 at 8.41.54 AM

1996 ರಲ್ಲಿ ಆರಂಭಿಸಲಾದ ಸೂರ್ಯಕಿರಣ ಏರೋಬ್ಯಾಟಿಕ್ ತಂಡದ ವಿಮಾನಗಳು ಇಲ್ಲಿಯವರೆಗೆ ಭಾರತ ಮಾತ್ರವಲ್ಲದೆ ಶ್ರೀಲಂಕಾ, ಸಿಂಗಾಪುರ್, ದುಬೈ ಸೇರಿದಂತೆ ಇತರೆ ದೇಶಗಳಲ್ಲಿ 600 ಕ್ಕಿಂತಲೂ ಹೆಚ್ಚಿನ ಪ್ರದರ್ಶನಗಳನ್ನು ನೀಡಿದೆ. 9 ವಿಮಾನಗಳ ಈ ಏರ್ ಕ್ರಾಪ್ಟ್ ತಂಡ ಹೊಂದಿದೆ.

ಇಂದು (ಆ.31) ರಂದು ಬೀದರ ಕೋಟೆ ಮೇಲೆ ಏರ್ ಶೋ ಕಾರ್ಯಕ್ರಮ ನಡೆಯಲಿದ್ದು, ನಗರದ ಎಲ್ಲಾ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಸರಕಾರಿ ನೌಕರರು ಮತ್ತು ಅವರ ಕುಟುಂಬದ ಸದಸ್ಯರಿಗೆ ಈ ಏರ್ ಶೋ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದ್ದು, ಮಧ್ಯಾಹ್ನ 3ಕ್ಕೆ ಕೋಟೆಯ ಒಳಗಡೆ ನಿಗದಿತ ಸ್ಥಳದಲ್ಲಿ ಹಾಜರಿದ್ದು, ಈ ಏರ್ ಶೋ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.

WhatsApp Image 2024 08 31 at 8.41.43 AM

ಏರ್ ಶೋ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ನಗರದ ಸಾರ್ವಜನಿಕರು ಕುಟುಂಬ ಸಮೇತವಾಗಿ ಆಗಮಿಸಿ ವೀಕ್ಷಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...