ಚಿತ್ರದುರ್ಗ | ಸಿಡಿಲು ಬಡಿದು 106 ಕುರಿಗಳ ದಾರುಣ ಸಾವು; ಸಂಕಷ್ಟದಲ್ಲಿ ಕುರಿಗಾಹಿಗಳು

Date:

ಸಿಡಿಲು ಬಡಿದು 106 ಕುರಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಜಾಜೂರು ಗ್ರಾಮದಲ್ಲಿ ನಡೆದಿದೆ.

ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗಿದ್ದು, ಈ ವೇಳೆ ಕುರಿಹಟ್ಟಿಯಲ್ಲಿದ್ದ ಆಂಜನೇಯ ಎಂಬ ಕುರಿಗಾಹಿಯ 90 ಹಾಗೂ ಓಬಣ್ಣ ಎಂಬವರ 16 ಕುರಿಗಳು ಸೇರಿದಂತೆ ಒಟ್ಟು 106 ಕುರಿಗಳು ಸಿಡಿಲಿಗೆ ಬಲಿಯಾಗಿವೆ.

ಈ ಘಟನೆಯಿಂದಾಗಿ ಕುರಿಗಾಹಿಗಳಿಗೆ ಅಪಾರ ನಷ್ಟವಾಗಿದೆ. ಜೀವನೋಪಾಯಕ್ಕೆ ದಾರಿಯಾಗಿದ್ದ ಕುರಿಗಳ ಸಾವಿನಿಂದಾಗಿ ಕುರಿಗಾಹಿಗಳು ಸಂಕಷ್ಟಕ್ಕೆ ಸಿಲುಕಿದೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ಪರಿಹಾರ ದೊರಕಿಸಿಕೊಡುವಂತೆ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
sidilu

ಮಳೆ ಇಲ್ಲದೇ ಬರಗಾಲದ ಪರಿಸ್ಥಿತಿಯಲ್ಲಿ ಮಲೆನಾಡು ಸೀಮೆಯ ಕಡೆ ಪಡುವು ಹೋಗಿ ಸಣ್ಣ ಜೀವಗಳನ್ನು ಸಾಕಿಕೊಳ್ಳಲಾಗಿತ್ತು. ಸ್ವಲ್ಪ ಮಳೆಯಾಗಿ ನಮ್ಮ ಭಾಗದಲ್ಲೂ ಹುಲ್ಲು ಹಸಿರಾಗಿದೆ ಎಂದು ಊರಕಡೆ ಬರಲಾಗಿತ್ತು. ಸಿಡಿಲಿಗೆ ಕುರಿಗಳು ಸಾವಿಗೀಡಾಗಿರುವುದು ಕುಟುಂಬಕ್ಕೆ ಆರ್ಥಿಕ ನಷ್ಟವಾಗಿದೆ. ಇನ್ನೇನು ಎರಡು ವಾರ ಶ್ರಾವಣ ಮುಗಿದು ಮಾರಮ್ಮನ ಜಾತ್ರೆ ಆರಂಭವಾದ ಕೂಡಲೇ ಸಾಕಿದ್ದ ಕುರಿಗಳಿಗೆ ಒಳ್ಳೆಯ ಬೇಡಿಕೆ ಇತ್ತು. ಕೈತುಂಬಾ ಹಣ ನೋಡಬೇಕಿದ್ದ ಸಮಯದಲ್ಲಿ ಕುರಿಗಳ ಸಾವು ಸಂಕಷ್ಟ ತಂದಿದೆ ಎಂದು ಅಂಜಿನಪ್ಪ, ಓಬಣ್ಣ ಅಳಲು ತೋಡಿಕೊಂಡಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ತಿಳಿದ ಚಳ್ಳಕೆರೆ ತಹಶೀಲ್ದಾ‌ರ್ ರೆಹಾನಾ ಪಾಷಾ, ಪೊಲೀಸ್ ಉಪ ಅಧೀಕ್ಷಕ ಟಿ.ಬಿ.ರಾಜಣ್ಣ, ಕುರಿ ಜಿಲ್ಲಾ ಮಂಡಳಿ ಸಹಾಯ ನಿರ್ದೇಶಕ ಡಾ.ತಿಪ್ಪೇಸ್ವಾಮಿ, ಉಪ ನಿರ್ದೇಶಕ ಡಾ.ಕುಮಾರ್, ಸಹಾಯಕ ನಿರ್ದೇಶಕ ಡಾ.ಎಂ.ಎನ್.ರೇವಣ್ಣ, ಡಾ.ಶಿವಪ್ರಕಾಶ್, ಕಂದಾಯ ನಿರೀಕ್ಷಕ ರಾಜೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಮೃತಪಟ್ಟ ಎಲ್ಲ ಕುರಿಗಳ ಮರಣೋತ್ತರ ಪರೀಕ್ಷೆ ನಡೆಸಲಾಯಿತು.

WhatsApp Image 2024 08 17 at 4.27.40 PM
ಕುರಿಗಾಹಿಗಳಾದ ಅಂಜಿನಪ್ಪ, ಓಬಣ್ಣ

ಸರ್ಕಾರ ಜಾರಿ ಮಾಡಿರುವ ಅನುಗ್ರಹ ಯೋಜನೆಯಡಿ ಕುರಿಗಾಯಿಗಳಿಗೆ ದೊರೆಯುವ 5 ಸಾವಿರ ಪರಿಹಾರದ ಹಣವನ್ನು ಪ್ರಾಕೃತಿಕ ವಿಕೋಪದಡಿಯಲ್ಲಿ ಕಂದಾಯ ಇಲಾಖೆಯಿಂದ 4 ಸಾವಿರ ಮತ್ತು ಪಶು ಸಂಗೋಪನಾ ಇಲಾಖೆಯಿಂದ 1 ಸಾವಿರ ಸೇರಿಸಿ, ತಲಾ ಒಂದು ಕುರಿಗೆ 5 ಸಾವಿರದಂತೆ ಪರಿಹಾರ ವಿತರಣೆಗೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಅಧಿಕಾರಿಗಳು ಇದೇ ವೇಳೆ ಭರವಸೆ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...