ಚಿತ್ರದುರ್ಗ | ಕಲುಷಿತ ನೀರು ಸೇವನೆಯಿಂದ 16 ಮಂದಿ ಅಸ್ವಸ್ಥ; ಅಧಿಕಾರಿಗಳ ನಿರ್ಲಕ್ಷ್ಯ ಆರೋಪ

Date:

ಕಲುಷಿತ ನೀರು ಸೇವನೆಯಿಂದ 16ಕ್ಕೂ ಅಧಿಕ ಮಂದಿ ಅಸ್ವಸ್ಥಗೊಂಡು, ಆಸ್ಪತ್ರೆಗೆ ದಾಖಲಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ನಾಗಸಮುದ್ರ ಗ್ರಾಮದಲ್ಲಿ ನಡೆದಿದೆ.

ನಾಗಸಮುದ್ರ ಗ್ರಾಮದಲ್ಲಿ ಬುಧವಾರ ತಡ ರಾತ್ರಿಯಿಂದ ಬಹುತೇಕರಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದ್ದು, ಅಸ್ವಸ್ಥಗೊಂಡಿದ್ದಾರೆ. ಅವರನ್ನು ಕೂಡಲೇ ನಾಗಸಮುದ್ರ, ರಾಂಪುರ ಆಸ್ಪತ್ರೆಗೆ ಕರೆದೊಯ್ದಿದ್ದು, ಚಿಕಿತ್ಸೆಗೆ ದಾಖಲಿಸಲಾಗಿದೆ.

“ಆಸ್ಪತ್ರೆಯಲ್ಲಿ ಕೆಲವರಿಗೆ ಚಿಕಿತ್ಸೆ ನೀಡಿದ್ದು, ಉಳಿದವರನ್ನು ಒಳರೋಗಿಯಾಗಿ ದಾಖಲು ಮಾಡಿಕೊಂಡಿದ್ದಾರೆ. ಅಸ್ವಸ್ಥಗೊಂಡಿರುವವರ ಸಂಖ್ಯೆ ಹೆಚ್ಚಾದ ಕಾರಣ ಹಾಗೂ ಕೆಲವರಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಮೊಳಕಾಲ್ಮೂರು ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಮದಲ್ಲಿ ಬಹುದಿನಗಳ ಹಿಂದೆ ಕುಡಿಯುವ ನೀರು ಸರಬರಾಜು ಮಾಡುವ ಪೈಪ್ ಲೈನ್ ಒಡೆದಿದ್ದು, ಚರಂಡಿ, ಗೊಬ್ಬರದ ಗುಂಡಿಗಳ ನೀರು ಸೇರಿಕೊಂಡಿದೆ. ಇದರಿಂದ ಕಲುಷಿತಗೊಂಡ ನೀರನ್ನು ಸೇವಿಸಿದ ಬಹಳಷ್ಟು ಮಂದಿ ಅಸ್ವಸ್ಥಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳೀಯ ಮುಖಂಡ ಮರಿಸ್ವಾಮಿ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಅವೈಜ್ಞಾನಿಕ ಕಾಮಗಾರಿಗಳು ಈ ರೀತಿಯ ಘಟನೆಗೆ ಕಾರಣವಾಗುತ್ತವೆ. ಗ್ರಾಮದಲ್ಲಿ 2ನೇ ವಾರ್ಡಿನಲ್ಲಿ ಚರಂಡಿ, ಗೊಬ್ಬರದಗುಂಡಿಗಳ ರಾಶಿಯ ಮಧ್ಯೆ ಕುಡಿಯುವ ನೀರು ಸರಬರಾಜು ಮಾಡುವ ಪೈಪ್ ಲೈನ್‌ಗಳನ್ನು ಅಳವಡಿಸಿದ್ದು ಈ ಘಟನೆಗೆ ಕಾರಣವಾಗಿದೆ” ಎಂದು ಆರೋಪಿಸಿದರು.

“ಕಳಪೆ ಕಾಮಗಾರಿ ಬಗ್ಗೆ ಗ್ರಾಮಸ್ಥರು ಅಧಿಕಾರಿಗಳಿಗೆ ಹಲವು ಬಾರಿ ಎಚ್ಚರಿಸಿದ್ದರೂ ಎಚ್ಚೆತ್ತುಕೊಂಡಿಲ್ಲ. ಪೈಪ್‌ ಹಾನಿಯಾಗಿರುವ ಕುರಿತು ಕ್ರಮ ತೆಗೆದುಕೊಳ್ಳದೆ, ಅದೇ ಪೈಪ್ ಲೈನ್‌ನಲ್ಲಿ ನೀರು ಸರಬರಾಜು ಮಾಡಿದ್ದಾರೆ. ಅಧಿಕಾರಿಗಳ ನಿರ್ಲಕ್ಷದಿಂದ ಕೊಳಚೆ ನೀರು ಕುಡಿಯುವ ನೀರಿಗೆ ಸೇರಿದ್ದು, ಅನಾಹುತಕ್ಕೆ ಕಾರಣವಾಗಿದೆ. ಜಿಲ್ಲಾಡಳಿತ ಮತ್ತು ಗ್ರಾಮ ಪಂಚಾಯಿತಿ ಅಧಿಕಾರಿಗಳು ಈಗಲಾದರೂ ಎಚ್ಚೆತ್ತುಕೊಂಡು ಕುಡಿಯುವ ನೀರು ಸರಬರಾಜು ಮಾರ್ಗವನ್ನು ಬೇರೆಡೆಗಡ ಸ್ಥಳಾಂತರಿಸಿ ಗ್ರಾಮಸ್ಥರ ಆರೋಗ್ಯ ಕಾಪಾಡಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ಕರ್ತವ್ಯ ಲೋಪ; ಮೂವರು ಪಿಡಿಒಗಳ ಅಮಾನತು

ಗ್ರಾಮದ ಪಂಚಾಯತ್ ಸದಸ್ಯ ಆನಂದ್ ಮಾತನಾಡಿ, “ನಾಗಸಮುದ್ರ ಗ್ರಾಮ ದೊಡ್ಡದಿದೆ. ಇದು ಗ್ರಾಮ ಪಂಚಾಯಿತಿಯ ಗಮನಕ್ಕೆ ಬಂದಿರಲಿಲ್ಲ. ಇಷ್ಟು ಸಂಖ್ಯೆಯ ಪ್ರಕರಣ ಕಂಡುಬಂದಿರುವುದರಿಂದ ತಾಲೂಕು ಆರೋಗ್ಯ ಅಧಿಕಾರಿಗಳು ಮತ್ತು ಇತರ ಅಧಿಕಾರಿಗಳು ಗ್ರಾಮಕ್ಕೆ ಆಗಮಿಸಿದ್ದಾರೆ. ಎಲ್ಲರೂ ಸೇರಿ ಕಲುಷಿತ ನೀರಿಗೆ ಕಾರಣ ಏನೆಂದು ಗುರುತಿಸಿ ಸರಿಪಡಿಸುವ ಕೆಲಸವನ್ನು ಇಂದೇ ಮಾಡುತ್ತೇವೆ” ಎಂದು ಭರವಸೆ ನೀಡಿದರು.

ಕಲುಷಿತ ನೀರು ಕುಡಿದು ಅಸ್ವಸ್ಥ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹರೀಶ್ ಈ ದಿನ.ಕಾಮ್‌ನೊಂದಿಗೆ ಮಾತನಾಡಿ “ತಾಲೂಕು ಆರೋಗ್ಯ ಅಧಿಕಾರಿ ಮತ್ತು ಜಿಲ್ಲಾಡಳಿತದ ಇತರೆ ಅಧಿಕಾರಿಗಳು ಗ್ರಾಮಕ್ಕೆ ಧಾವಿಸಿದ್ದು, ಎಲ್ಲರ ನೇತೃತ್ವದಲ್ಲಿ ಕುಡಿಯುವ ನೀರಿನ ಪೈಪ್‌ಲೈನ್ ಬೇರೆಡೆಗೆ ವರ್ಗಾಯಿಸುವ ಕಾರ್ಯ ನಡೆಯುತ್ತಿದೆ” ಎಂದು ತಿಳಿಸಿದರು.

“ನಾಗಸಮುದ್ರ ಮತ್ತು ರಾಂಪುರ ಆಸ್ಪತ್ರೆಯಲ್ಲಿರುವ ಅಸ್ವಸ್ಥರು ಚೇತರಿಸಿಕೊಂಡಿದ್ದು, ಆರು ಮಂದಿ ಮನೆಗೆ ಹಿಂತಿರುಗಿದ್ದಾರೆ. ಇನ್ನೂ ನಾಲ್ವರು ರಾಂಪುರ ಆಸ್ಪತ್ರೆಯಲ್ಲಿದ್ದು, ಇಬ್ಬರು ಅಸ್ವಸ್ಥರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಗೆ ದಾಖಲಿಸಲಾಗಿದೆ. ಎಲ್ಲರ ಆರೋಗ್ಯ ಸ್ಥಿರವಾಗಿದ್ದು, ಶೀಘ್ರ ಗುಣಮುಖರಾಗುವ ವಿಶ್ವಾಸವಿದೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...