ಚಿತ್ರದುರ್ಗ | ನೈಜ ಕೃಷಿ ವಿಜ್ಞಾನಿ ರೈತ: ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ

Date:

ನೈಜ ಕೃಷಿ ವಿಜ್ಞಾನಿ ರೈತ. ಪದವಿ ಪಡೆದ ಕೃಷಿ ವಿಜ್ಞಾನಿ ನಮ್ಮನ್ನು ದಾರಿ ತಪ್ಪಿಸಬಹುದು. ಆದರೆ ರೈತನೆಂಬ ಕೃಷಿ ವಿಜ್ಞಾನಿ ದಾರಿ ತಪ್ಪಿಸಲು ಸಾಧ್ಯವಿಲ್ಲ ಎಂದು ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ ಅಭಿಪ್ರಾಯಪಟ್ಟರು.

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಸಾಣೇಹಳ್ಳಿಯ ಒಳಾಂಗಣ ರಂಗಮಂದಿರದಲ್ಲಿ ಸರ್ವೋದಯ ಕೃಷಿ ಘಟಕ ಹಾಗೂ ಶ್ರೀ ಶಿವಕುಮಾರ ಕಲಾಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಸಾಧಕ ರೈತರ ಸಮ್ಮಿಲನ ಕಾರ್ಯಕ್ರಮದಲ್ಲಿ ದಿವ್ಯ ಸಾನ್ನಿಧ್ಯವಹಿಸಿ ಮಾತನಾಡಿದರು.

“ಅನೇಕರು ರಾಜಕೀಯವಾಗಿ ಬೆಳೆದಂತೆ ರೈತರ ಮಗ, ಒಕ್ಕಲಿಗನ ಮಗನೆಂದು ಹೇಳಿಕೊಳ್ಳುವವರು. ರಾಜಕೀಯದಲ್ಲಿ ಉನ್ನತ ಸ್ಥಾನಕ್ಕೆ ಹೋದರೂ ರೈತರ ಸಮಸ್ಯೆಗಳಿಗೆ ಸ್ಪಂದಿಸದೇ ಇರುವವರನ್ನು ಕಾಣುತ್ತೇವೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ಸರ್ಕಾರ ರೈತರಿಗೆ ಬೇಕಾದ ವಿದ್ಯುತ್, ನೀರು, ಗೊಬ್ಬರದ ಸೌಲಭ್ಯಗಳನ್ನು ಒದಗಿಸುವುದರ ಕಡೆ ಗಮನಹರಿಸಬೇಕು. ಆಗ ರೈತನ ಬದುಕಿನಲ್ಲಿ ನೆಮ್ಮದಿ ಕಾಣಲು ಸಾಧ್ಯ. ಇಲ್ಲಿ ನಡೆದ ಕಾರ್ಯಕ್ರಮ ರೈತರಿಗೆ ಹೊಸ ಬೆಳಕನ್ನು ಕಾಣುವಂತಾಗಬೇಕು. ಈ ವರ್ಷದ ನಮ್ಮ ನಾಟಕೋತ್ಸವ ಕಾರ್ಯಕ್ರಮದಲ್ಲಿ ಕೃಷಿಗೆ ಹೆಚ್ಚು ಒತ್ತುಕೊಡಬೇಕು ಅನ್ನಿಸಿದೆ. ನಮ್ಮ ಸುತ್ತಮುತ್ತ ಅನೇಕ ರೈತ ಸಾಧಕರಿದ್ದಾರೆ. ಅವರನ್ನು ಗುರುತಿಸುವ ಕೆಲಸವಾಗಬೇಕು. ನಿಜವಾದ ರೈತ ಆನಂದಿಂದ, ಸ್ವಾಭಿಮಾನದಿಂದ ಬದುಕುತ್ತಾನೆ. ನಿಜವಾದ ರಕ್ಷಕರು ನಮ್ಮ ರೈತರು” ಎಂದು ಅಭಿಪ್ರಾಯಪಟ್ಟರು.

“ಮನುಷ್ಯನ ದಾಹ ಹೆಚ್ಚಾದಂತೆ ತನ್ನ ಸುಖವನ್ನು ಹಾಳು ಮಾಡಿಕೊಳ್ಳುತ್ತಿದ್ದಾನೆ. ಪಂಚಭೂತಗಳು ಮಾನವನ ಜೀವನಕ್ಕೆ ಬೇಕಾದ ಎಲ್ಲ ಆಹಾರವನ್ನು ಕೊಡುತ್ತವೆ. ಆದರೆ ಮಾನವ ದುರಾಸೆಯಿಂದ ಪಂಚಭೂತಗಳನ್ನು ನಾಶ ಮಾಡಿದ್ದಾನೆ. ದುರಾಸೆ ಬಿಟ್ಟರೆ ನೆಮ್ಮದಿ ಜೀವನ ಮಾಡಲು ಸಾಧ್ಯ. ನಾವೆಲ್ಲ ಬೇರೆ ಬೇರೆ ಸಮಸ್ಯೆಗಳನ್ನು ತೆಗೆದುಕೊಂಡು ತಲೆಮೇಲೆ ಹಾಕಿಕೊಂಡಿದ್ದೇವೆ. ಇದರ ಬದಲು ದುರಾಸೆ ದೂರ ಮಾಡಿಕೊಂಡು ಸರಳಜೀವನ ನಡೆಸಿದರೆ ಯಾವ ಸಮಸ್ಯೆಗಳು ಸೃಷ್ಟಿಯಾಗಲು ಸಾಧ್ಯವಿಲ್ಲ” ಎಂದು ತಿಳಿಸಿದರು.

ದಿವ್ಯ ಸಾನ್ನಿಧ್ಯ ವಹಿಸಿದ್ದ ಮುರುಘಾಮಠದ ಶ್ರೀ ಬಸವಕುಮಾರ ಸ್ವಾಮೀಜಿ ಮಾತನಾಡಿ, “ರೈತರು ನಿಜವಾದ ಪ್ರತಿಭಾನ್ವಿತರು. ಅವರನ್ನು ಪುರಸ್ಕರಿಸಬೇಕು. ಭೂಮಿಯಲ್ಲಿ ರಾಸಾಯನಿಕ ಹೆಚ್ಚಾಗಿ ಭೂಮಿ ಸತ್ವವನ್ನೇ ಕಳೆದುಕೊಂಡಿದೆ. ಉತ್ಪಾದಕರ ವರ್ಗ ರೈತರ ವರ್ಗ. ನಿಜವಾದ ಸಾಧಕರೆಂದರೆ ರೈತರ ವರ್ಗವೇ” ಎಂದು ಹೆಮ್ಮೆ ವ್ಯಕ್ತಪಡಿಸಿದರು.

“ಸರ್ಕಾರದಿಂದ ಕೃಷಿ ಮೇಳಕ್ಕೆ ಲಕ್ಷಗಟ್ಟಲೆ ಹಣ ಖರ್ಚು ಮಾಡುವರು. ಯಾವ್ಯಾವುದಕ್ಕೆ ಖರ್ಚು ಮಾಡುತ್ತಾರೆ ಎನ್ನುವುದನ್ನು ಅರಿಯದಾಗಿದೆ. ಯಾವುದೇ ಮೇಳ ಮಾಡಿದರೂ ಅದು ಸಾರ್ಥಕ ಮೇಳವಾಗಬೇಕು. ಶ್ರೀಗಳು ವೈಚಾರಿಕವಾಗಿ ಕೆಲಸ ಮಾಡುತ್ತಿದ್ದಾರೆ. ಬಸವತತ್ವವೇ ತಮ್ಮ ಉಸಿರಾಗಿಸಿ ಬದುಕಿದ್ದಾರೆ. ನಮ್ಮಂತಹ ಕಿರಿಯರಿಗೆ ಮಾರ್ಗದರ್ಶಕರಾಗಿ ನಮ್ಮೊಡನಿರುವುದೇ ನಮ್ಮ ಹೆಮ್ಮೆಯಾಗಿದೆ. ರಂಗಶಂಕರವನ್ನು ಸಾಣೇಹಳ್ಳಿಯಲ್ಲಿ ನೋಡುತ್ತಿದ್ದೇವೆ. ಸಾಣೇಹಳ್ಳಿಯನ್ನು ಪೂಜ್ಯ ಪಂಡಿತಾರಾಧ್ಯ ಶ್ರೀಗಳು ಎಲೆಕ್ಟ್ರಾನಿಕ್ ಸಿಟಿಯಂತೆ ಮಾಡಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಭವಿಷ್ಯನಿಧಿ ಯೋಜನೆ ಅನುಷ್ಠಾನಕ್ಕೆ ಹಮಾಲಿ ಕಾರ್ಮಿಕರ ಆಗ್ರಹ

ಮಾಜಿ ಶಾಸಕ ಮಹಿಮಾ ಪಟೇಲ್ ಮಾತನಾಡಿ, “ಕೆಲವೇ ಕೆಲವು ಜನಗಳಿಂದ ಹೊಸ ಪರಿವರ್ತನೆ ಪ್ರಾರಂಭವಾಗುತ್ತದೆ. ಸಮೂಹದ ಮೂಲಕ ಹೋದಾಗ ಹುಮ್ಮಸ್ಸು ಹೆಚ್ಚುತ್ತದೆ. ನಮ್ಮ ಹಿರಿಯರು ಏನು ಬೆಳೆಯುತ್ತಿದ್ದರೋ ಅದನ್ನು ಊಟ ಮಾಡುತ್ತಿದ್ದರು. ಏನು ಊಟ ಮಾಡುತ್ತಿದ್ದರೋ ಅದನ್ನು ಬೆಳೆಯುತ್ತಿದ್ದರು. ಈಗ ಹಣದ ಭೂತದ ಹಿಂದೆ ಓಡಿ ನಮ್ಮ ಆರೋಗ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದೇವೆ. ನಮ್ಮ ಆರೋಗ್ಯಕ್ಕಾಗಿ ನಾವು ತಿನ್ನಲು ಬೆಳೆಯಬೇಕು” ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಕೃಷಿ ಸಾಧಕರನ್ನು ಸನ್ಮಾನಿಸಿದರು. ಕೃಷಿ ಸಾಧಕರಾದ ಚಂದ್ರಶೇಖ‌ರ್ ನಾರಾಯಣಪುರ, ಶಿವಪ್ರಸಾದ್, ಮಂಜುನಾಥ, ವಿಶ್ವೇಶ್ವರ ಸಜ್ಜನ್, ಹೊಯ್ಸಳ ಅಪ್ಪಾಜಿ, ಡಾ.ಗಿರೀಶ್, ಡಾ.ಸೋಮಶೇಖರ್ ಹಾಗೂ ರೈತರು ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...